19ನೇ ಸಿನಿಮಾ ಘೋಷಣೆಗೆ ಸಜ್ಜಾದ ಯಶ್‌

Date:

ಸಿನಿಮಾದ ಸ್ಕ್ರಿಪ್ಟ್‌ ಸಿದ್ಧವಾಗಿದೆ ಎಂದ ಸ್ಟಾರ್‌ ನಟ

ಸದ್ಯದಲ್ಲೇ ತಿಳಿಯಲಿದೆ ಯಶ್‌ ಮುಂದಿನ ಚಿತ್ರದ ಮಾಹಿತಿ

ಕೆಜಿಎಫ್‌-2 ಸಿನಿಮಾ ತೆರೆಕಂಡು ಒಂದು ವರ್ಷ ಕಳೆದರೂ ಯಶ್‌ ಮಾತ್ರ ತಮ್ಮ ಮುಂದಿನ ಸಿನಿಮಾ ಯಾವುದು ಎಂಬ ಬಗ್ಗೆ ಈವರೆಗೆ ಸುಳಿವು ನೀಡಿರಲಿಲ್ಲ. ಯಶ್‌ ಅವರ 19ನೇ ಸಿನಿಮಾ ಯಾವುದು? ಆ ಚಿತ್ರದ ನಿರ್ದೇಶಕರು ಯಾರು ಎಂಬ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವಿದೆ. ಬುಧವಾರ ಕುಟುಂಬಸ್ಥರ ಜೊತೆಗೆ ನಂಜನಗೂಡಿಗೆ ಭೇಟಿ ನೀಡಿದ್ದ ನಟ ಮನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ತಮ್ಮ ಮುಂದಿನ ಚಿತ್ರದ ಬಗ್ಗೆಯೂ ಮಾತನಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ನಿ ರಾಧಿಕಾ ಮತ್ತು ಮಕ್ಕಳು ಹಾಗೂ ಆಪ್ತರ ಜೊತೆಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಯಶ್‌ ಮನೆದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು ಮುಂದಿನ ಸಿನಿಮಾ ಘೋಷಣೆ ಮಾಡಲು ತಡವಾಗುತ್ತಿರುವ ಬಗ್ಗೆ ವಿವರಣೆ ನೀಡಿದ್ದಾರೆ.

“ಇಡೀ ದೇಶ ಮತ್ತು ಜಗತ್ತು ನಿರೀಕ್ಷೆಯಿಂದ ಎದುರು ನೋಡುತ್ತಿದೆ. ಅವರೆಲ್ಲರ ನಿರೀಕ್ಷೆಯನ್ನು ಹುಸಿಗೊಳಿಸದಂತೆ ನಡೆದುಕೊಳ್ಳಬೇಕಾದ ಜವಾಬ್ದಾರಿ ನನ್ನ ಮೇಲಿದೆ. ಒಂದು ಕ್ಷಣವನ್ನೂ ವ್ಯರ್ಥ ಮಾಡದಂತೆ ಕೆಲಸ ಮಾಡುತ್ತಿದ್ದೇವೆ. ಸಿನಿಮಾ ಸ್ಕ್ರಿಪ್ಟ್‌ ಕೂಡ ಸಿದ್ಧವಾಗಿದೆ. ಸದ್ಯದಲ್ಲೇ ಎಲ್ಲ ಮಾಹಿತಿಯನ್ನೂ ನೀಡುತ್ತೇನೆ. ಎಲ್ಲರೂ ದುಡ್ಡು ಕೊಟ್ಟು ಸಿನಿಮಾ ನೋಡುತ್ತಾರೆ. ಅವರು ದುಡ್ಡು ಖರ್ಚು ಮಾಡಿ ನನ್ನ ಸಿನಿಮಾ ನೋಡಿದ್ದಕ್ಕೂ ಸಾರ್ಥಕ ಎನ್ನಿಸಬೇಕು. ಆ ರೀತಿಯ ಸಿನಿಮಾ ಮಾಡುವ ಪ್ರಯತ್ನದಲ್ಲಿದ್ದೇನೆ” ಎಂದಿದ್ದಾರೆ.

ಇದೇ ವೇಳೆ ನೀವು ಬಾಲಿವುಡ್‌ಗೆ ಹೋಗುತ್ತೀರಂತೆ ಹೌದೇ ಎಂಬ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿರುವ ಯಶ್‌, “ನಾನು ಎಲ್ಲಿಗೂ ಹೋಗಲ್ಲ, ಇರುವಲ್ಲಿಗೆ ಎಲ್ಲರನ್ನೂ ಕರೆಸಿಕೊಳ್ಳತ್ತೇನೆ” ಎನ್ನುವ ಮೂಲಕ ಬಾಲಿವುಡ್‌, ಹಾಲಿವುಡ್‌ನ ಕಟ್ಟುಕತೆಗಳನ್ನು ತಳ್ಳಿ ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಆದಿಪುರುಷ್‌ ಅವಾಂತರ | ತಿರುಗು ಬಾಣವಾದ ಪ್ರಚಾರ ತಂತ್ರ

ಯಶ್‌ ಅವರ 19ನೇ ಚಿತ್ರವನ್ನು ಮಲಯಾಳಂನ ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್‌ ನಿರ್ದೇಶನ ಮಾಡಲಿದ್ದಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ. ಜನಪ್ರಿಯ ಚಿತ್ರ ನಿರ್ಮಾಣ ಸಂಸ್ಥೆ ʼಕೆವಿನ್‌ ಪ್ರೊಡಕ್ಷನ್ಸ್‌ʼ ಈ ಚಿತ್ರಕ್ಕೆ ಬಂಡವಾಳ ಹೂಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಇದೇ ಜೂನ್‌ 15ಕ್ಕೆ ಯಶ್‌ ಬೆಳ್ಳಿತೆರೆ ಪ್ರವೇಶಿಸಿ 15 ವರ್ಷಗಳು ಕಳೆಯಲಿವೆ. ಈ ಹಿನ್ನೆಲೆ ಅವರ 19ನೇ ಚಿತ್ರವನ್ನು ಅದೇ ದಿನದಂದು ಘೋಷಣೆ ಮಾಡುವ ಸಾಧ್ಯತೆ ಎಂಬ ಚರ್ಚೆ ಕೂಡ ಶುರುವಾಗಿದೆ. 2007ರಲ್ಲಿ ತೆರೆಕಂಡಿದ್ದ ಜಂಬದ ಹುಡುಗಿ ಚಿತ್ರದಲ್ಲಿ ಯಶ್‌ ಪ್ರಮುಖ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...