ʼಪುಷ್ಪ-2ʼ ನಿರ್ದೇಶಕ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ

Date:

ʼಪುಷ್ಪ-2ʼ ಚಿತ್ರಕ್ಕೆ ಬಂಡವಾಳ ಹೂಡಿರುವ ʼಮೈತ್ರಿ ಮೂವೀ ಮೇಕರ್ಸ್‌ʼ

ʼಮೈತ್ರಿ ಮೂವೀ ಮೇಕರ್ಸ್‌ʼ ಕಚೇರಿ ಮೇಲೆ ಎರಡನೇ ಬಾರಿಗೆ ಐಟಿ ದಾಳಿ

ತೆಲುಗಿನ ಸ್ಟಾರ್‌ ನಟ ಅಲ್ಲು ಅರ್ಜುನ್‌ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ʼಪುಷ್ಪ-2ʼ ಚಿತ್ರದ ನಿರ್ದೇಶಕ ಸುಕುಮಾರ್‌ ಮತ್ತು ಚಿತ್ರಕ್ಕೆ ಬಂಡವಾಳ ಹೂಡಿರುವ ನಿರ್ಮಾಪಕರ ಮನೆ ಹಾಗೂ ಕಚೇರಿಗಳ ಮೇಲೆ ʼಐಟಿʼ (ಆದಾಯ ತೆರಿಗೆ ಇಲಾಖೆ) ಅಧಿಕಾರಿಗಳು ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ ಬೆಳಗಿನ ಜಾವದ ಹೊತ್ತಿಗೆ ʼಐಟಿʼ ಅಧಿಕಾರಿಗಳ ಒಂದು ತಂಡ ಸುಕುಮಾರ್‌ ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದೆ. ಇದೇ ಸಮಯಕ್ಕೆ ʼಪುಷ್ಟ-2ʼ ಸೇರಿದಂತೆ ಟಾಲಿವುಡ್‌ನ ಹಲವು ಸೂಪರ್‌ ಹಿಟ್‌ ಚಿತ್ರಗಳಿಗೆ ಬಂಡವಾಳ ಹೂಡಿರುವ ʼಮೈತ್ರಿ ಮೂವೀ ಮೇಕರ್ಸ್‌ʼ ಸಂಸ್ಥೆಯ ಮಾಲೀಕರಾದ ನವೀನ್‌ ಯರ್ನೇನಿ ಮತ್ತು ಯಲಮಂಚಿಲಿ ರವಿಶಂಕರ್‌ ಅವರ ಕಚೇರಿ ಹಾಗೂ ಮನೆಗಳ ಮೇಲೂ ಅಧಿಕಾರಿಗಳ ಗುಂಪು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದೆ.

ನಿರ್ದೇಶಕ ಸುಕುಮಾರ್‌ ಇತ್ತೀಚೆಗೆ ʼಸುಕುಮಾರ್‌ ರೈಟಿಂಗ್ಸ್‌ʼ ಎಂಬ ತಮ್ಮ ಸ್ವಂತ ಚಿತ್ರ ನಿರ್ಮಾಣ ಸಂಸ್ಥೆಯನ್ನು ಹುಟ್ಟು ಹಾಕಿದ್ದು, ʼವಿರುಪಾಕ್ಷʼ ಎಂಬ ಚಿತ್ರವನ್ನು ನಿರ್ಮಿಸಿದ್ದಾರೆ. ಸಾಯಿಧರ್ಮ ತೇಜ್‌ ಮುಖ್ಯಭೂಮಿಕೆ ನಿಭಾಯಿಸಿರುವ ಈ ಚಿತ್ರ ಇದೇ ಏಪ್ರಿಲ್‌ 21ಕ್ಕೆ ತೆರೆ ಕಾಣಲಿದೆ. ಇದರ ಜೊತೆಗೆ ಸುಕುಮಾರ್‌ ʼಪುಷ್ಪ-2ʼ ಚಿತ್ರದ ಸಹ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದಾರೆ. ಬಹುಕೋಟಿ ವ್ಯವಹಾರ ನಡೆಸುತ್ತಿರುವ ಸುಕುಮಾರ್‌ ಜಿಎಸ್‌ಟಿ ನಿಯಮಗಳನ್ನು ಉಲ್ಲಂಘಿಸಿ, ತೆರಿಗೆ ವಂಚನೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಇದೇ ಕಾರಣಕ್ಕೆ ʼಐಟಿʼ ಅಧಿಕರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ನಟ ಚೇತನ್‌ ವೀಸಾ ರದ್ದು: ಸರ್ಕಾರದ ಅತಿರೇಕ ಎಂದ ಕಿಶೋರ್‌

ಇನ್ನು ನವೀನ್‌ ಯರ್ನೇನಿ ಮತ್ತು ಯಲಮಂಚಿಲಿ ರವಿಶಂಕರ್‌ ಒಡೆತನದ ʼಮೈತ್ರಿ ಮೂವೀ ಮೇಕರ್ಸ್‌ʼ ಮೇಲೂ ತೆರಿಗೆ ವಂಚನೆಯ ಆರೋಪಗಳಿವೆ. ಇವರಿಬ್ಬರೂ ಬಂಡವಾಳ ಹೂಡಿದ್ದ ʼವಾಲ್ಟರ್‌ ವೀರಯ್ಯʼ ಮತ್ತು ʼವೀರ ಸಿಂಹ ರೆಡ್ಡಿʼ ಚಿತ್ರಗಳು ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಯಶಸ್ಸು ಗಳಿಸಿದ್ದವು. ಈ ಸಿನಿಮಾಗಳ ವ್ಯವಹಾರದಲ್ಲಿ ತೆರಿಗೆ ವಂಚನೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ನಿರ್ಮಾಪಕರುಗಳು ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲೂ ʼಮೈತ್ರಿ ಮೂವೀ ಮೇಕರ್ಸ್‌ʼ ಸಂಸ್ಥೆಯ ಮುಖ್ಯಸ್ಥರ ಮನೆ ಹಾಗೂ ಕಚೇರಿಗಳ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...