ಜೂನಿಯರ್‌ ಎನ್‌ಟಿಆರ್‌ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಟೈಟಲ್‌ ಘೋಷಣೆ

Date:

40ನೇ ವಸಂತಕ್ಕೆ ಕಾಲಿಟ್ಟ ಜೂನಿಯರ್‌ ಎನ್‌ಟಿಆರ್‌

ನಿರೀಕ್ಷೆ ಹೆಚ್ಚಸಿದ ನೂತನ ಚಿತ್ರದ ವಿಶೇಷ ಪೋಸ್ಟರ್‌

ತೆಲುಗಿನ ಖ್ಯಾತ ನಟ ಜೂನಿಯರ್‌ ಎನ್‌ಟಿಆರ್‌ ಶನಿವಾರ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರಿಂದ ಶುಭಾಶಯಗಳ ಮಾಹಪೂರವೇ ಹರಿದು ಬರುತ್ತಿದೆ. ಈ ನಡುವೆ ಜೂನಿಯರ್‌ ಎನ್‌ಟಿಆರ್‌ ನಟನೆಯ 30ನೇ ಚಿತ್ರದ ಟೈಟಲ್‌ ಕೂಡ ಘೋಷಣೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಆರ್‌ಆರ್‌ಆರ್‌ʼ ಚಿತ್ರದ ಯಶಸ್ಸಿನ ಬಳಿಕ ಜೂನಿಯರ್‌ ಎನ್‌ಟಿಆರ್‌, ತೆಲುಗಿನ ಖ್ಯಾತ ನಿರ್ದೇಶಕ ಕೊರಟಾಲ ಶಿವ ಜೊತೆ ಜೋಡಿಸಿದ್ದರು. ನಟನ ಹುಟ್ಟು ಹಬ್ಬದ ಪ್ರಯುಕ್ತ ಉಡುಗೊರೆಯ ರೂಪದಲ್ಲಿ ವಿಶೇಷ ಪೋಸ್ಟರ್‌ ಬಿಡುಗಡೆ ಮಾಡಿ ಟೈಟಲ್‌ ಘೋಷಿಸಿರುವ ಚಿತ್ರತಂಡ, ಬಹುನಿರೀಕ್ಷಿತ ಚಿತ್ರಕ್ಕೆ ʼದೇವರʼ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದೆ. ವಿಶೇಷ ಪೋಸ್ಟರ್‌ನಲ್ಲಿ ಚಿತ್ರದ ಟೈಟಲ್‌ ಜೊತೆಗೆ ಜೂನಿಯರ್‌ ಎನ್‌ಟಿಆರ್‌ ಅವರ ಹೊಸ ಲುಕ್‌ ಅನ್ನು ಪರಿಚಯಿಸಲಾಗಿದೆ.

ಕೊರಟಾಲ ಶಿವ ಮತ್ತು ಜೂನಿಯರ್‌ ಎನ್‌ಟಿಆರ್‌ ಕಾಂಬಿನೇಶನ್‌ ʼದೇವರʼ ಚಿತ್ರದ ಮುಹೂರ್ತ ಕಳೆದ ಮಾರ್ಚ್‌ 23ರಂದು ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ಜರುಗಿತ್ತು. ಸ್ಟಾರ್‌ ನಿರ್ದೇಶಕರಾದ ರಾಜಮೌಳಿ ಮತ್ತು ಪ್ರಶಾಂತ್‌ ನೀಲ್‌ ಚಿತ್ರೀಕರಣಕ್ಕೆ ಚಾಲನೆ ನೀಡುವ ಮೂಲಕ ತಂಡಕ್ಕೆ ಶುಭ ಹಾರೈಸಿದ್ದರು.

ನಿರ್ಲಕ್ಷ್ಯಕ್ಕೊಳಪಟ್ಟ ಭಾರತದ ಕರಾವಳಿ ತೀರದ ಜನರ ಬದುಕಿನ ಸುತ್ತ ಚಿತ್ರದ ಕಥೆಯನ್ನು ಹೆಣೆಯಲಾಗಿದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ಕೊರಟಾಲ ಶಿವ ಈ ಹಿಂದೆ ಜೂನಿಯರ್‌ ಎನ್‌ಟಿಆರ್‌ ನಟನೆಯ ʼಜನತಾ ಗ್ಯಾರೇಜ್‌ʼ ಚಿತ್ರವನ್ನು ನಿರ್ದೇಶಿಸಿದ್ದರು. ಕಡಲ ಕಥನದ ಮೂಲಕ ಈ ಹಿಟ್‌ ಜೋಡಿ ಮತ್ತೆ ಒಂದಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ.

ಈ ಸುದ್ದಿ ಓದಿದ್ದೀರಾ? ಸಿದ್ದರಾಮಯ್ಯ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಯಾದ ಸಿನಿ ತಾರೆಯರು

ಪ್ಯಾನ್‌ ಇಂಡಿಯಾ ಮಾದರಿಯಲ್ಲಿ ಸಿದ್ಧಗೊಳ್ಳುತ್ತಿರುವ ಈ ಚಿತ್ರದಲ್ಲಿ ಬಾಲಿವುಡ್‌ನ ಖ್ಯಾತ ನಟಿ ಜಾಹ್ನವಿ ಕಪೂರ್‌, ಜೂನಿಯರ್‌ ಎನ್‌ಟಿಆರ್‌ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ದಕ್ಷಿಣ ಸಿನಿ ರಂಗ ಪ್ರವೇಶಿಸುತ್ತಿರುವುದು ವಿಶೇಷ. ಸೈಫ್‌ ಅಲಿಖಾನ್‌ ಮತ್ತು ಪ್ರಕಾಶ್‌ ರಾಜ್‌ ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹರಿಕೃಷ್ಣ ಕೆ ಮತ್ತು ಸುಧಾಕರ್‌ ಮಿಕ್ಕಿಲಿನೇನಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...