ಪ್ರಭಾಸ್‌ ಜೊತೆ ತೆರೆ ಹಂಚಿಕೊಳ್ಳಲು ಸಜ್ಜಾದ ಕಮಲ್‌ ಹಾಸನ್‌

Date:

  • ಮೂರು ದಶಕಗಳ ಬಳಿಕ ಬಚ್ಚನ್‌ ಜೊತೆಯಾದ ಕಮಲ್‌ ಹಾಸನ್‌
  • ಕಮಲ್‌ ಹಾಸನ್‌ಗೆ ಆತ್ಮೀಯವಾಗಿ ಸ್ವಾಗತ ಕೋರಿದ ಅಮಿತಾಭ್

ತಮಿಳಿನ ಹಿರಿಯ ನಟ ಕಮಲ್‌ ಹಾಸನ್‌ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ʼವಿಕ್ರಮ್‌ʼ ಸಿನಿಮಾದ ಯಶಸ್ಸಿನ ಬಳಿಕ ʼಇಂಡಿಯನ್‌ 2ʼ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ಅವರು ಇದೀಗ ಪ್ರಭಾಸ್‌ ಮುಖ್ಯಭೂಮಿಕೆಯ ಇನ್ನೂ ಹೆಸರಿಡದ ʼಪ್ರಾಜೆಕ್ಟ್‌ ಕೆʼ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದಾಗಿ ಘೋಷಿಸಿದ್ದಾರೆ.

ಈ ಮಲ್ಟಿಸ್ಟಾರರ್‌ ಸಿನಿಮಾದಲ್ಲಿ ಕಮಲ್‌ ಹಾಸನ್‌ ಖಳನ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ವಿಶೇಷ ಪಾತ್ರದಲ್ಲಿ ನಟಿಸುವ ಸಲುವಾಗಿ ಅಂದಾಜು 100 ಕೋಟಿ ರೂಪಾಯಿ ಸಂಭಾವನೆಗೆ ಬೇಡಿಕೆ ಇಟ್ಟಿದ್ದಾರೆ ಎಂಬ ಚರ್ಚೆ ಕೂಡ ಶುರುವಾಗಿದೆ.

ಪ್ರಭಾಸ್‌ ಮುಖ್ಯಭೂಮಿಕೆಯಲ್ಲಿ ಮೂಡಿಬರುತ್ತಿರುವ ʼಪ್ರಾಜೆಕ್ಟ್‌ ಕೆʼ ಚಿತ್ರದಲ್ಲಿ ಬಾಲಿವುಡ್‌ನ ಹಿರಿಯ ನಟ ಅಮಿತಾಭ್ ಬಚ್ಚನ್‌ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಖ್ಯಾತ ನಟಿಯರಾದ ದೀಪಿಕಾ ಪಡುಕೊಣೆ ಮತ್ತು ದಿಶಾ ಪಠಾಣಿ ಕೂಡ ಚಿತ್ರತಂಡದ ಭಾಗವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1984ರಲ್ಲಿ ತೆರೆಕಂಡಿದ್ದ ʼಖಬರ್ದಾರ್‌ʼ ಮತ್ತು ʼಗಿರಫ್ತಾರ್‌ʼ ಚಿತ್ರಗಳಲ್ಲಿ ಅಮಿತಾಭ್ ಬಚ್ಚನ್‌ ಮತ್ತು ಕಮಲ್‌ ಹಾಸನ್‌ ಜೊತೆಯಾಗಿ ನಟಿಸಿದ್ದರು. ಮೂರು ದಶಕಗಳ ಬಳಿಕ ಈ ಲೆಜೆಂಡ್‌ಗಳು ಮತ್ತೆ ಒಂದಾಗುತ್ತಿದ್ದು, ಅಮಿತಾಭ್ ಬಚ್ಚನ್‌ ಅವರು ಟ್ವೀಟ್‌ ಮಾಡುವ ಮೂಲಕ ಕಮಲ್‌ ಹಾಸನ್‌ ಅವರನ್ನು ʼಪ್ರಾಜೆಕ್ಟ್‌ ಕೆʼ ಸ್ವಾಗತಿಸಿದ್ದಾರೆ.

ʼಮಹಾನಟಿʼ ಖ್ಯಾತಿಯ ನಿರ್ದೇಶಕ ನಾಗ್‌ ಅಶ್ವಿನ್‌ ಈ ಬಹುನಿರೀಕ್ಷಿತ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ತಾರಾಗಣದ ಮೂಲಕವೇ ಕುತೂಹಲ ಹೆಚ್ಚಿಸಿರುವ ಈ ಚಿತ್ರಕ್ಕೆ ಹಿರಿಯ ನಿರ್ಮಾಪಕ ಅಶ್ವಿನಿ ದತ್‌ ಬಂಡವಾಳ ಹೂಡಿದ್ದಾರೆ. ಸಂತೋಷ್‌ ನಾರಾಯಣನ್‌ ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...