‘ಎಮರ್ಜೆನ್ಸಿ’ ವೀಕ್ಷಿಸಲು ಕಂಗನಾ ಆಹ್ವಾನ: ಪ್ರಿಯಾಂಕಾ ಕೊಟ್ಟ ಉತ್ತರವೇನು?

Date:

ಈ ತಿಂಗಳಲ್ಲೇ ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ಸಿನಿಮಾ ‘ಎಮರ್ಜೆನ್ಸಿ’ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ವೀಕ್ಷಿಸಲು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆಯೂ ಆಗಿರುವ ಕಂಗನಾ ರಣಾವತ್ ಅವರು ವಯನಾಡು ಸಂಸದೆ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಆಹ್ವಾನಿಸಿದ್ದಾರೆ.

‘ಎಮರ್ಜೆನ್ಸಿ’ ಸಿನಿಮಾವು 1975 ಮತ್ತು 1977ರ ನಡುವಿನ 21 ತಿಂಗಳುಗಳ ಅವಧಿಯಲ್ಲಿ ಜಾರಿಯಲ್ಲಿದ್ದ ತುರ್ತು ಪರಿಸ್ಥಿತಿಯ ಸುತ್ತಲಿನ ವಿಚಾರಗಳನ್ನು ಹೊಂದಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 1975ರಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದರು.

ಇದನ್ನು ಓದಿದ್ದೀರಾ? ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಜನವರಿ 17ರಂದು ತೆರೆಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಸಿನಿಮಾದಲ್ಲಿ ಇಂದಿರಾ ಗಾಂಧಿ ಪಾತ್ರ ನಿರ್ವಹಿಸುತ್ತಿರುವ ನಾಯಕಿ ಕಂಗನಾ ರಣಾವತ್, “ನಾನು ನಿಜವಾಗಿಯೂ ಪ್ರಿಯಾಂಕಾ ಗಾಂಧಿಯನ್ನು ಸಂಸತ್ತಿನಲ್ಲಿ ಭೇಟಿಯಾಗಿದ್ದೆ. ನಾನು ಅವರಿಗೆ ಹೇಳಿದ ಮೊದಲ ಮಾತು ‘ನೀವು ಎಮರ್ಜೆನ್ಸಿ ಸಿನಿಮಾವನ್ನು ನೋಡಬೇಕು’ ಎಂಬುದು. ಅವರು (ಪ್ರಿಯಾಂಕಾ ಗಾಂಧಿ) ಅತೀ ವಿನಯದ ವ್ಯಕ್ತಿ. ‘ಓಕೆ, ಆಗಬಹುದು’ ಎಂದರು. ಅವರು ಸಿನಿಮಾವನ್ನು ವೀಕ್ಷಿಸುತ್ತಾರೆಯೇ ಎಂದು ನೋಡೋಣ” ಎಂದು ಹೇಳಿದ್ದಾರೆ.

“ಇದು ಒಂದು ವ್ಯಕ್ತಿತ್ವದ ಅತ್ಯಂತ ಸೂಕ್ಷ್ಮ ಮತ್ತು ಸಂವೇದನಾಶೀಲ ಚಿತ್ರಣವಾಗಿದೆ ಎಂದು ನಾನು ಭಾವಿಸುತ್ತೇನೆ. ನಾನು ಇಂದಿರಾ ಗಾಂಧಿ ಅವರನ್ನು ಅತ್ಯಂತ ಘನತೆಯಿಂದ ಚಿತ್ರಿಸುವ ನಿಟ್ಟಿನಲ್ಲಿ ಹೆಚ್ಚಿನ ಕಾಳಜಿಯಿಂದ ಕಾರ್ಯನಿರ್ವಹಿಸಿದ್ದೇನೆ” ಎಂದು ಕಂಗನಾ ರಣಾವತ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಸಿನಿಮಾಗೆ ಸೆನ್ಸಾರ್ ಮಂಡಳಿ ಅನುಮೋದನೆ; ಶೀಘ್ರ ಬಿಡುಗಡೆ

ಇನ್ನು ತಾನು ಸಿನಿಮಾದಲ್ಲಿ ಇಂದಿರಾ ಗಾಂಧಿ ಪಾತ್ರ ನಿರ್ವಹಿಸುವ ನಿಟ್ಟಿನಲ್ಲಿ ಪೂರ್ವ ತಯಾರಿಯನ್ನು ಮಾಡಿಕೊಳ್ಳುತ್ತಿದ್ದಾಗ ಇಂದಿರಾ ಗಾಂಧಿ ಅವರ ಜೀವನದ ಬಗ್ಗೆ ಹಲವು ಮಾಹಿತಿ ತಿಳಿದುಕೊಂಡಿರುವುದಾಗಿ ಕಂಗನಾ ಹೇಳಿಕೊಂಡಿದ್ದಾರೆ. ಇಂದಿರಾ ಗಾಂಧಿಯನ್ನು ಪ್ರೀತಿಯ ನಾಯಕಿ ಎಂದು ಕರೆದ ಕಂಗನಾ, “ಮೂರು ಬಾರಿ ಪ್ರಧಾನಿಯಾಗಿರುವುದು ತಮಾಷೆಯಲ್ಲ. ಅವರನ್ನು ಜನರು ಪ್ರೀತಿಸಿದ್ದಾರೆ” ಎಂದರು.

‘ಎಮರ್ಜೆನ್ಸಿ’ ಸಿನಿಮಾವನ್ನು ಕಳೆದ ವರ್ಷ ಸೆಪ್ಟೆಂಬರ್ 6ರಂದು ಬಿಡುಗಡೆ ಮಾಡಬೇಕಾಗಿತ್ತು. ಆದರೆ ಸೆನ್ಸಾರ್ ಮಂಡಳಿ ಪ್ರಮಾಣಪತ್ರ ಸಿಗದ ಕಾರಣ ವಿಳಂಬವಾಯಿತು.

ಚಿತ್ರದಲ್ಲಿ ಯುವ ಅಟಲ್ ಬಿಹಾರಿ ವಾಜಪೇಯಿ ಪಾತ್ರದಲ್ಲಿ ಶ್ರೇಯಸ್ ತಲ್ಪಾಡೆ, ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ಷಾ ಆಗಿ ಮಿಲಿಂದ್ ಸೋಮನ್, ಪುಪುಲ್ ಜಯಕರ್ ಪಾತ್ರದಲ್ಲಿ ಮಹಿಮಾ ಚೌಧರಿ ಮತ್ತು ಜಗಜೀವನ್ ರಾಮ್ ಪಾತ್ರದಲ್ಲಿ ದಿವಂಗತ ಸತೀಶ್ ಕೌಶಿಕ್ ನಟಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...