ಕಂಗನಾ ರನೌತ್‌ಗೆ ಮೂರು ಖಾನ್‌ಗಳನ್ನು ಒಟ್ಟುಗೂಡಿಸಿ ಸಿನಿಮಾ ನಿರ್ದೇಶಿಸುವ ಆಸೆಯಂತೆ!

Date:

ನಟನೆಯ ನಂತರ ರಾಜಕೀಯಕ್ಕೆ ಪದಾರ್ಪಣೆ ಮಾಡಿ ಹಿಮಾಚಲ ಪ್ರದೇಶದ ಸಂಸದೆಯಾಗಿರುವ ಕಂಗನಾ ರನೌತ್‌ ಅವರು ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್ ಎಂಬ ಮೂವರು ಖಾನ್‌ಗಳನ್ನು ಕೂಡಿಸಿ ನಿರ್ದೇಶಿಸುವ ಆಸೆ ವ್ಯಕ್ತಪಡಿಸಿದ್ದಾರೆ.  

ತಮ್ಮ ಮುಂಬರುವ ಚಿತ್ರ ‘ಎಮರ್ಜೆನ್ಸಿ’ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಕಂಗನಾ, ಮುಂದೊಂದು ದಿನ ಎಲ್ಲ ಮೂವರು ಖಾನ್ಗಳೊಂದಿಗೆ (ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ಅಮೀರ್ ಖಾನ್) ಚಿತ್ರ ನಿರ್ದೇಶಿಸಲು ಇಷ್ಟಪಡುತ್ತೇನೆ. ನಾನು ಅವರ ಪ್ರತಿಭಾನ್ವಿತ ಭಾಗವನ್ನು ತೋರಿಸಲು ಇಷ್ಟಪಡುತ್ತೇನೆ. ಅವರು ತುಂಬಾ ಪ್ರತಿಭಾವಂತರು ಮತ್ತು ಉದ್ಯಮಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅದಕ್ಕಾಗಿ ನಾವು ಕೃತಜ್ಞರಾಗಿರಬೇಕು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನೂರರ ನೆನಪು | ನಗೆರಾಜ ನರಸಿಂಹರಾಜು ಅಜರಾಮರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಸ್ಟ್ 14 ರಂದು ಇಂದು ಕಂಗನಾ ಅವರ ‘ಎಮರ್ಜೆನ್ಸಿ’ ಟ್ರೇಲರ್ ಬಿಡುಗಡೆಯಾಗಿದೆ. ಬಿಡುಗಡೆಗೆ ಹಾಜರಾಗುವ ಮೊದಲು, ಅವರು ಇನ್ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದು, “ಚಿತ್ರವನ್ನು ದೊಡ್ಡ ಪರದೆಯ ಮೇಲೆ ನೋಡುವ ಕಲ್ಪನೆಯ ಪರಿಕಲ್ಪನೆಯಿಂದ, ಚಲನಚಿತ್ರ ನಿರ್ಮಾಪಕರಾಗುವುದಕ್ಕಿಂತ ಹೆಚ್ಚು ಸಂತೋಷಕರವಾದದ್ದು ಯಾವುದೂ ಇಲ್ಲ. ಇಂದು ಬಹಳ ಸಂತೋಷವಾಗಿದೆ. ನಿಮ್ಮೆಲ್ಲರ ಭಾಗವಾಗಲು ಕಾಯುತ್ತಿದ್ದೆ, ಕಥೆಯನ್ನು ಹೇಳುವುದಕ್ಕಿಂತ ಹೆಚ್ಚು ಆಪ್ತವಾದುದೇನೂ ಇಲ್ಲ. ನಿಮ್ಮ ಮನಸ್ಸು ಮತ್ತು ಭಾವನೆಗಳನ್ನು ಪ್ರವೇಶಿಸಿ ನಿಮ್ಮ ಗ್ರಹಿಕೆಯನ್ನು ಹಂಚಿಕೊಳ್ಳಲು ಅವಕಾಶ ನೀಡುವುದಕ್ಕಿಂತ ಹೆಚ್ಚು ಖುಷಿಯ ವಿಚಾರ ಮತ್ಯಾವುದು ಇಲ್ಲ” ಎಂದು ತಿಳಿಸಿದ್ದಾರೆ.

ಕಂಗನಾ ರನೌತ್‌ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಪಾತ್ರವನ್ನು ದೊಡ್ಡ ಪರದೆಯ ಮೇಲೆ ನಿರ್ವಹಿಸುತ್ತಿದ್ದಾರೆ. ಚಿತ್ರದಲ್ಲಿ ಅನುಪಮ್ ಖೇರ್, ಮಿಲಿಂದ್ ಸೋಮನ್, ಮಹಿಮಾ ಚೌಧರಿ ಮತ್ತು ಶ್ರೇಯಸ್ ತಲ್ಪಾಡೆ ಮುಂತಾದವರು ನಟಿಸಿದ್ದಾರೆ. ಚಿತ್ರ ಸೆಪ್ಟೆಂಬರ್ 6 ರಂದು ಬಿಡುಗಡೆಯಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...