‘ಕಾಟೇರ’ ಸಂದರ್ಶನದ ವೇಳೆ ಚಾಟ್ಸ್‌ ಅಂಗಡಿ ನಡೆಸುತ್ತಿರುವ ವಿಶೇಷ ಚೇತನ ಯುವಕನನ್ನು ಹೊಗಳಿದ ನಟ ದರ್ಶನ್; ಜನವೋ ಜನ

Date:

ಡಿ.29ರಂದು ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾದ ಸದ್ದು ಜೋರಾಗಿದೆ. ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿಯಾಗಿ ಪದಾರ್ಪಣೆ ಮಾಡಿರುವ ಈ ಸಿನಿಮಾ ಮೊದಲ ದಿನವೇ 19 ಕೋಟಿ 79 ಲಕ್ಷ ಗಳಿಕೆ ಮಾಡುವ ಮೂಲಕ ಹೊಸ ದಾಖಲೆ ಮಾಡಿದೆ. ಆ ಮೂಲಕ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಸಿನಿ ಪ್ರಿಯರ ನಿರೀಕ್ಷೆಗೆ ತಕ್ಕಂತೆ ನಿರ್ದೇಶಕ ತರುಣ್ ಸುಧೀರ್ ಸಿನಿಮಾ ಮಾಡಿದ್ದಾರೆ ಎಂಬ ಅಭಿಪ್ರಾಯ, ವಿಮರ್ಶೆಗಳು ವ್ಯಕ್ತವಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಕಾಟೇರ’ ಸಿನಿಮಾ ಬಿಡುಗಡೆಗೂ ಮುನ್ನ ದರ್ಶನ್ ಪ್ರಚಾರದಲ್ಲಿ ಬ್ಯುಸಿಯಾಗಿದ್ದರು. ಈ ವೇಳೆ
Thoogudeepa Dynasty ಎಂಬ ಯೂಟ್ಯೂಬ್‌ ಚಾನೆಲ್‌ಗೆ ನೀಡಿದ್ದ ಸಂದರ್ಶನದ ವೇಳೆ, ಬೆಂಗಳೂರಿನಲ್ಲಿ ಚಾಟ್ಸ್‌ ಅಂಗಡಿ ನಡೆಸುತ್ತಿರುವ ವಿಶೇಷ ಚೇತನ ಯುವಕನನ್ನು ನೆನಪಿಸಿಕೊಂಡು ಸಪೋರ್ಟ್ ಮಾಡಬೇಕು ಎಂದಿದ್ದರು. ಅವರ ಈ ಹೇಳಿಕೆಯು ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ. ವೈರಲಾಗುತ್ತಿದ್ದಂತೆಯೇ ಯುವಕನ ಅಂಗಡಿಯನ್ನು ಹುಡುಕಿಕೊಂಡು ದರ್ಶನ್ ಅಭಿಮಾನಿಗಳ ಸಹಿತ ಸಾರ್ವಜನಿಕರು ಆಗಮಿಸುತ್ತಿದ್ದಾರೆ.

ಸಂದರ್ಶನದ ವೇಳೆ ಸಂದರ್ಶಕಿ, “ನಿಮ್ಮ ಜೀವನದಲ್ಲಿ ಸ್ಫೂರ್ತಿಯ ವ್ಯಕ್ತಿ ಯಾರು?” ಎಂದು ಪ್ರಶ್ನಿಸಿದ್ದರು.

ಇದಕ್ಕೆ ಉತ್ತರಿಸಿದ್ದ ನಟ ದರ್ಶನ್, “ಕೆಲಸದ ವಿಚಾರದಲ್ಲಿ ನನಗೆ ಅನೇಕರು ಸ್ಪೂರ್ತಿಯಾಗುತ್ತಾರೆ. ಕೈ ಇಲ್ಲದ ವ್ಯಕ್ತಿನೂ ದುಡಿಯುತ್ತಿರುತ್ತಾರೆ. ಅವರು ಕೂಡ ನನಗೆ ಸ್ಪೂರ್ತಿಯಾಗುತ್ತಾರೆ. ಭಿಕ್ಷೆ ಬೇಡುವ ಬದಲು ಕಷ್ಟ ಪಟ್ಟು ಕೆಲಸ ಮಾಡುತ್ತಾರೆ. ಮೊನ್ನೆ ಯಾವುದೋ ಒಂದು ವಿಡಿಯೋ ನೋಡಿದೆ. ನಾಗರಬಾವಿಯಲ್ಲಿ ಒಬ್ಬ ವಿಶೇಷಚೇತನ ವ್ಯಕ್ತಿ ಪಾನಿ ಪೂರಿ ಅಂಗಡಿ ಹಾಕಿಕೊಂಡಿದ್ದಾರೆ. ನನ್ನ ಸ್ನೇಹಿತರಿಗೆ ಹೇಳಿದೆ. ನಾವೂ ಕೂಡ ಅಲ್ಲಿ ಹೋಗಿ ತಿನ್ನಬೇಕು ಎಂದು. ಏಕೆಂದರೆ ಆ ವ್ಯಕ್ತಿ ಭಿಕ್ಷೆ ಬೇಡದೆ ಪಾನಿಪೂರಿ ಅಂಗಡಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ನಾಲ್ಕು ಜನರಿಗೆ ಕೆಲಸ ಕೊಟ್ಟಿದ್ದಾರೆ. ಯೂಟ್ಯೂಬ್‌ನಲ್ಲಿ ಆ ಅಂಗಡಿ ನೋಡಿದೆ. ಈಗ ನಾವು ಅ ಅಂಗಡಿಯನ್ನು ಹುಡುಕಿಕೊಂಡು ಹೋದರೆ ಇನ್ನು ನಾಲ್ಕು ಜನರಿಗೆ ಅವರು ಸ್ಪೂರ್ತಿಯಾಗುತ್ತಾರೆ. ಅಂಗಡಿ ಹೆಸರು ‘ಹೊಟ್ಟೆಪಾಡು ಚಾಟ್ಸ್‌’ ಅಂತ ಇದೆ. ಯಾರಿಂದಲೋ ಸ್ಪೂರ್ತಿ ಪಡೆಯುವ ಬದಲು ನಮ್ಮ ಸುತ್ತ ನೋಡಿದರೆ ಈ ರೀತಿ ಅನೇಕರು ಸಿಗುತ್ತಾರೆ. ಕಷ್ಟಪಟ್ಟು ದುಡಿಯಲು ಇವರೇ ನಮಗೆ ಸ್ಪೂರ್ತಿಯಾಗುತ್ತಾರೆ” ಎಂದು ಹೇಳಿದ್ದರು.

viresh

ಅಷ್ಟಕ್ಕೂ ಈ ಯುವಕ ಯಾರು?
ನಾಗರಬಾವಿಯಲ್ಲಿ ‘ಹೊಟ್ಟೆಪಾಡು ಚಾಟ್ಸ್’ ಎಂಬ ಚಾಟ್ಸ್ ಸೆಂಟರ್ ಇದೆ. ಹುಬ್ಬಳ್ಳಿ ಮೂಲದ ವಿಶೇಷ ಚೇತನ ಯುವಕ ವೀರೇಶ್ ಅದರ ಮಾಲೀಕರು. ಅವರಿಗೆ ಒಂದು ಕಾಲು ಊನವಿದೆ. ಹಾಗಂತ ಅವರು ಸುಮ್ಮನೇ ಕುಳಿತಿಲ್ಲ. ಚಿಕ್ಕದಾಗಿ ಟ್ರಕ್ ಒಂದರಲ್ಲಿ ಶುರು ಮಾಡಿದ್ದ ಚಾಟ್ಸ್ ಸೆಂಟರ್ ಈಗ ನಾಲ್ಕು ಜನಕ್ಕೆ ಕೆಲಸ ಕೊಡುವ ಮಟ್ಟಿಗೆ ಬೆಳೆದು ನಿಂತಿದೆ. ಒಂದು ವರ್ಷದ ಹಿಂದೆಯೇ ಯೂಟ್ಯೂಬ್‌ನಲ್ಲಿ ಈ ‘ಹೊಟ್ಟೆಪಾಡು ಚಾಟ್ಸ್’ ಬಗ್ಗೆ ಪ್ರಸಾರವಾಗಿತ್ತು. ಆದರೆ ದರ್ಶನ್ ಸಂದರ್ಶನದಲ್ಲಿ ಆ ಅಂಗಡಿ ಬಗ್ಗೆ ಹೇಳಿದ ಮೇಲೆ ಇದು ಇನ್ನಷ್ಟು ಫೇಮಸ್ ಆಗಿದೆ.

ಆ ಬಳಿಕ ಅವರನ್ನು ಹುಡುಕಿಕೊಂಡು ಹಲವು ಮಂದಿ ಯೂಟ್ಯೂಬರ್‌ಗಳು ಹೋಗಿದ್ದು, ಸರತಿ ಮೇಲೆ ಸಂದರ್ಶನ ಮಾಡುತ್ತಿದ್ದಾರೆ.

ಈ ವೇಳೆ ಪ್ರತಿಕ್ರಿಯಿಸಿರುವ ವೀರೇಶ್, “ದರ್ಶನ್ ಅವರ ಸಂದರ್ಶನ ನೋಡಿದೆ. ನನ್ನಂತ ವಿಶೇಷ ಚೇತನ ವ್ಯಕ್ತಿಯನ್ನು ಡಿ ಬಾಸ್ ಗುರುತಿಸಿದ್ದು ನನ್ನ ಪುಣ್ಯ. ನಮ್ಮಂಥವರನ್ನು ಗುರುತಿಸುವವರು ಕಡಿಮೆ. ಇದು ನನ್ನಂಥ ಹಲವರಿಗೆ ಸ್ಫೂರ್ತಿಯಾಗಲಿದೆ. ದರ್ಶನ್ ಕೊಟ್ಟ ಆ ಒಂದು ಹೇಳಿಕೆ ನನ್ನ ಜೀವನ ಬದಲಾಯಿಸಿದೆ. ಬೀದಿಯಲ್ಲಿ ದುಡಿಯುವ ನಮ್ಮಂಥವರಿಗೆ ಇದು ದೊಡ್ಡ ಹೆಮ್ಮೆ. ಅವರ ಹೇಳಿಕೆಯ ನಂತರ ಗ್ರಾಹಕರ ಸಂಖ್ಯೆಯೂ ಹೆಚ್ಚಳವಾಗಿದೆ. 100ರಿಂದ 150 ಕರೆಗಳು ಬರ್ತಾ ಇದೆ. ಗೂಗಲ್ ಮ್ಯಾಪ್ ಅಲ್ಲೂ ನಮ್ಮ ಲೊಕೇಶನ್ ಇರುವುದರಿಂದ ಜನರು ಹುಡುಕಿಕೊಂಡು ಬರುತ್ತಿದ್ದಾರೆ. ದರ್ಶನ್ ನಮ್ಮ ಅಂಗಡಿಗೆ ಒಂದು ದಿನ ಬರ್ತಿನಿ ಅಂತ ಹೇಳಿದ್ದಾರೆ. ನಿರೀಕ್ಷೆ ಇದೆ. ಬಂದಲ್ಲಿ ನಮ್ಮ ಅಂಗಡಿಯ ಫೇವರಿಟ್ ತಿಂಡಿಯಾಗಿರುವ ಬುಟ್ಟಿ ಚಾಟ್ಸ್‌ ಅನ್ನು ನೀಡುತ್ತೇನೆ” ಎಂದು ಖುಷಿ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...