ʼಕೆರಾಡಿ ಸ್ಟುಡಿಯೋಸ್‌ʼ ಪ್ರಾರಂಭಿಸಿದ ರಿಷಬ್‌ ಶೆಟ್ಟಿ

Date:

ಸಿನಿಮಾ ಪ್ರಚಾರಕ್ಕೂ ಕಾಲಿಟ್ಟ ರಿಷಬ್‌ ಶೆಟ್ಟಿ

ಹೊಸ ಸಂಸ್ಥೆಗೆ ಹುಟ್ಟೂರಿನ ಹೆಸರಿಟ್ಟ ನಟ

ಕನ್ನಡದ ಖ್ಯಾತ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ನಟನೆ, ನಿರ್ದೇಶನದ ಜೊತೆಗೆ ಚಿತ್ರ ನಿರ್ಮಾಣದಲ್ಲೂ ಸೈ ಎನ್ನಿಸಿಕೊಂಡಿರು ರಿಷಬ್‌ ಸದ್ಯ ತಮ್ಮದೇ ಒಡೆತನದ ʼಕೆರಾಡಿ ಸ್ಟುಡಿಯೋಸ್‌ʼ ಸಂಸ್ಥೆಯನ್ನು ಪ್ರಾರಂಭಿಸಿದ್ದಾರೆ. ತಮ್ಮ ಹೊಸ ಯೋಜನೆಯ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶೇಷ ವಿಡಿಯೋ ಮತ್ತು ಬಹಿರಂಗ ಪತ್ರದ ಮೂಲಕ ತಮ್ಮ ಕನಸಿನ ಯೋಜನೆಯ ಬಗ್ಗೆ ಮಾಹಿತಿ ನೀಡಿರುವ ರಿಷಬ್‌, “ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ, ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ ತಂಡ ಹೊಸ ಹೆಜ್ಜೆ ಇರಿಸುತ್ತಿದೆ. ʼಕೆರಾಡಿ ಸ್ಟುಡಿಯೋಸ್‌ʼ ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೇಟಿಂಗ್‌ ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ” ಎಂದಿದ್ದಾರೆ.

ʼಕೆರಾಡಿʼ, ರಿಷಬ್‌ ಅವರ ಹುಟ್ಟೂರು. ಹುಟ್ಟೂರಿಗೆ ಗೌರವ ಸೂಚಿಸುವ ಸಲುವಾಗಿ ತಮ್ಮ ಹೊಸ ಸಂಸ್ಥೆಗೆ ʼಕೆರಾಡಿ ಸ್ಟುಡಿಯೋಸ್‌ʼ ಎಂದು ಹೆಸರಿಟ್ಟಿರುವುದಾಗಿ ತಿಳಿಸಿದ್ದಾರೆ. ʼರಿಷಬ್‌ ಶೆಟ್ಟಿ ಫಿಲಂಸ್‌ʼ ಹೆಸರಿನ ಚಿತ್ರ ನಿರ್ಮಾಣ ಸಂಸ್ಥೆಯನ್ನು ಕೂಡ ಹೊಂದಿರುವ ರಿಷಬ್‌, ʼಸ.ಹಿ.ಪ್ರಾ ಶಾಲೆ ಕಾಸರಗೋಡುʼ, ʼಕಥಾಸಂಗಮʼ, ʼಹೀರೋʼ ಚಿತ್ರಗಳನ್ನು ಮತ್ತು ʼಪೆಡ್ರೋʼ ಹಾಗೂ ʼಶಿವಮ್ಮʼ ಕಿರುಚಿತ್ರಗಳನ್ನು ಕೂಡ ನಿರ್ಮಿಸಿದ್ದಾರೆ. ಈವರೆಗೆ ನಟನೆ, ನಿರ್ದೇಶನ ಮತ್ತು ಚಿತ್ರ ನಿರ್ಮಾಣಕ್ಕೆ ಸೀಮಿತವಾಗಿದ್ದ ಅವರು ಇದೀಗ ಸಿನಿಮಾಗಳ ಪ್ರಚಾರ ಮತ್ತು ವಿತರಣೆಯಲ್ಲೂ ತೊಡಗಿಕೊಳ್ಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಹಿಳಾ ಕುಸ್ತಿಪಟುಗಳು ರಸ್ತೆಗಿಳಿಯಲು ಮೋದಿ ಕಾರಣ : ಕಿಶೋರ್‌ ಕುಮಾರ್‌

ಗುಂಪುಗಾರಿಕೆಯ ಕಾರಣಕ್ಕೇ ಹೆಚ್ಚು ಟೀಕೆಗೆ ಗುರಿಯಾಗುವ ರಿಷಬ್‌ ಶೆಟ್ಟಿ ಬೇರೆಯವರ ಸಿನಿಮಾಗಳ ಪ್ರಚಾರ ಮತ್ತು ವಿತರಣೆಗೆ ತಮ್ಮ ವೇದಿಕೆಯಲ್ಲಿ ಎಷ್ಟು ಒತ್ತು ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ʼಕಾಂತಾರʼ ಸಿನಿಮಾದ ಯಶಸ್ಸಿನ ಬಳಿಕ ʼಕಾಂತಾರ-2ʼ ಚಿತ್ರವನ್ನು ಘೋಷಿಸಿದ್ದ ರಿಷಬ್‌ ಶೆಟ್ಟಿ ಸದ್ಯ ಚಿತ್ರದ ಪ್ರೀ ಪ್ರೊಡಕ್ಷನ್‌ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...