ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ: ಪ್ರಕಾಶ್‌ ರಾಜ್‌

Date:

  • ಸುದೀಪ್‌ ಬಿಜೆಪಿ ಸೇರ್ಪಡೆಯ ಸುದ್ದಿ ಸುಳ್ಳೆಂದ ಪ್ರಕಾಶ್‌ ರಾಜ್‌
  • ಬಿಜೆಪಿ ಸೋಲಿನ ಭಯದಲ್ಲಿದೆ ಎಂದ ಬಹುಭಾಷಾ ನಟ

ಸ್ಟಾರ್‌ ನಟ ಕಿಚ್ಚ ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಸದ್ಯ ಸಿನಿಮಾ ಮತ್ತು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗಳನ್ನು ಹುಟ್ಟು ಹಾಕಿದೆ. ನಟನಾಗಿಯೇ ಅಪಾರ ಕೀರ್ತಿ ಗಳಿಸಿರುವ ಸುದೀಪ್‌ ಅವರಿಗೆ ರಾಜಕೀಯ ಯಾಕೆ ಬೇಕಿತ್ತು ಎಂಬ ಮಾತುಗಳು ಅಭಿಮಾನಿಗಳ ವಲಯದಲ್ಲಿ ಕೇಳಿ ಬರುತ್ತಿವೆ. ಇದೇ ಹೊತ್ತಿನಲ್ಲಿ ಸುದೀಪ್‌ ಬಿಜೆಪಿ ಸೇರ್ಪಡೆಯ ಸುದ್ದಿಗೆ ಪ್ರತಿಕ್ರಿಯಿಸಿರುವ ಬಹುಭಾಷಾ ನಟ ಪ್ರಕಾಶ್‌ ರಾಜ್‌, ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ ಎಂದಿದ್ದಾರೆ.

ರಾಷ್ಟ್ರೀಯ ಮಾಧ್ಯಮವೊಂದರ ವರದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಪ್ರಕಾಶ್‌ ರಾಜ್‌, ಕರ್ನಾಟಕದಲ್ಲಿ ಸೋಲುವ ಭಯದಲ್ಲಿರುವ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ. ಬಿಜೆಪಿಗರು ಹತಾಶೆಯಿಂದ ಈ ರೀತಿಯ ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸುದೀಪ್‌ ರಾಜಕೀಯ ಪ್ರವೇಶದ ಸುದ್ದಿ ಕಳೆದ ಕೆಲ ತಿಂಗಳಿನಿಂದ ಚರ್ಚೆಯಲ್ಲಿದೆ. ಆರಂಭದಲ್ಲಿ ಸುದೀಪ್‌ ಬಿಜೆಪಿ ಸೇರಲಿದ್ದಾರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ನಟಿ, ಮಾಜಿ ಸಂಸದೆ ರಮ್ಯ ಸೇರಿದಂತೆ ಹಲವರು ಅವರ ಮನವೊಲಿಸಲು ಯತ್ನಿಸಿದ್ದಾರೆ ಎಂಬ ಸುದ್ದಿ ಹರಡಿತ್ತು. ಇತ್ತೀಚೆಗೆ ಸುದೀಪ್‌ ಕೂಡ ಕಾಂಗ್ರೆಸ್‌ ನಾಯಕರು ತಮ್ಮನ್ನು ಸಂಪರ್ಕಿಸಿದ್ದು ನಿಜ ಎಂದು ಒಪ್ಪಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಟ ಸುದೀಪ್‌ಗೆ ಅಪರಿಚಿತರಿಂದ ಬೆದರಿಕೆ

ಇದೀಗ ಸುದೀಪ್‌ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಅಥವಾ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ತಾರಾ ಪ್ರಚಾರಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮಧ್ಯಾಹ್ನ ಬೆಂಗಳೂರಿನ ಖಾಸಗಿ ಹೋಟೆಲ್‌ಗಳಲ್ಲಿ ಎರಡು ಪ್ರತ್ಯೇಕ ಸುದ್ದಿಗೋಷ್ಠಿಗಳನ್ನು ನಿಗದಿ ಪಡಿಸಿದ್ದಾರೆ. ಮತ್ತೊಬ್ಬ ಸ್ಟಾರ್‌ ನಟ ದರ್ಶನ್‌ ಕೂಡ ಬಿಜೆಪಿ ಪರ ಪ್ರಚಾರಕ್ಕಿಳಿಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...