ಅಹಂಕಾರದ ಆಡಳಿತವೇ ಬಿಜೆಪಿ ಸೋಲಿಗೆ ಕಾರಣ: ಕವಿರಾಜ್‌

Date:

  • ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳನ್ನು ಪಟ್ಟಿ ಮಾಡಿದ ಕವಿರಾಜ್‌
  • ಜನ ವಿರೋಧಿಗಳ ವಿರುದ್ಧ ಸದಾ ಧ್ವನಿ ಎತ್ತುವ ಚಿತ್ರಸಾಹಿತಿ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತದಿಂದ ಗೆದ್ದು ಸರ್ಕಾರ ರಚನೆಗೆ ಮುಂದಾಗಿದೆ. ಇದೇ ಹೊತ್ತಿನಲ್ಲಿ ಕನ್ನಡ ಚಿತ್ರರಂಗದ ಖ್ಯಾತ ಸಾಹಿತಿ ಕವಿರಾಜ್‌ ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿಯ ಹೀನಾಯ ಸೋಲಿಗೆ ಕಾರಣವಾದ ಪ್ರಮುಖ ಅಂಶಗಳನ್ನು ಪಟ್ಟಿ ಮಾಡಿದ್ದಾರೆ.

ಕವಿರಾಜ್‌ ಪ್ರಕಾರ ಬಿಜೆಪಿ ಸೋಲಿಗೆ ಕಾರಣವಾದ ಪ್ರಮುಖ ಅಂಶಗಳು

“ಪದೇ ಪದೇ ನಾಡಿನ ಶಾಂತಿ ಕದಡಿದ್ದು, ಶಾಲೆ-ಪಠ್ಯಪುಸ್ತಕಗಳಲ್ಲೂ ರಾಜಕೀಯ ತಂದು ಮಲೀನಗೊಳಿಸಿದ್ದು, ಕುವೆಂಪು, ಬಸವಣ್ಣ, ಅಂಬೇಡ್ಕರ್ ಅವರಂತಹ ಮಹನೀಯರನ್ನು ಅವಮಾನಿಸಿದ್ದು, ಧರ್ಮ-ದೇವರು ಎಲ್ಲವನ್ನೂ ರಾಜಕೀಯ ಅಸ್ತ್ರವಾಗಿಸಿಕೊಂಡಿದ್ದು, ಕನ್ನಡತನ, ಕನ್ನಡದ ಅಸ್ಮಿತೆಗಳ ವಿರುದ್ಧ ನಿಂತು ಹಿಂದಿ ಹೇರಿಕೆ ಬೆಂಬಲಿಸಿದ್ದು, ಈ ಮಣ್ಣಿನ ಹೋರಾಟಗಾರರನ್ನು ಕಡೆಗಣಿಸಿ ಶಿವಾಜಿ, ಸಾವರ್ಕರ್ ಅಂಥವರನ್ನು ಮೆರೆಸಿದ್ದು, ಹಿಂದೆಂದು ಕಂಡಿರದ ಭ್ರಷ್ಟಾಚಾರ -ಅಹಂಕಾರದ ಆಡಳಿತ, ಬೆಲೆ ಏರಿಕೆಯಿಂದ ಬಡವರ ಬದುಕನ್ನು ಸಂಕಷ್ಟಕ್ಕೆ ದೂಡಿದ್ದು, ಪದೇ ಪದೇ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡು ಜನ ಉಗಿದ ನಂತರ ಯೂ ಟರ್ನ್ ಹೊಡೆದಿದ್ದು, ಕರೋನಾದಂತಹ ವಿಕೋಪದ ಸಮಯದಲ್ಲಿ ಜೀವಗಳನ್ನು ರಕ್ಷಿಸುವಲ್ಲಿ ಹೊಣೆಗೇಡಿತನ ತೋರಿದ್ದು”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಮಾಯಕ ಯುವಕರ ಹೆಣಗಳನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದು, ನಾಗಪುರ ನಿರ್ದೇಶಿತ ಮೂಲಭೂತವಾದದ ಪ್ರಯೋಗಗಳಿಗೆ ಕರ್ನಾಟಕವನ್ನು ಪ್ರಯೋಗಶಾಲೆಯಾಗಿಸಿದ್ದು, ಆಪರೇಷನ್ ಕಮಲ, ರೆಸಾರ್ಟ್ ರಾಜಕೀಯದಂತಹ ಅನೈತಿಕ ರಾಜಕಾರಣದಿಂದ ರಾಷ್ಟ್ರಮಟ್ಟದಲ್ಲಿ ನಾಡಿನ ಗೌರವ ಹಾಳುಮಾಡಿದ್ದು, ವಿರೋಧಿಸಿದವರನ್ನು ಹೆದರಿಸಲು ಆಡಳಿತ ವ್ಯವಸ್ಥೆಯನ್ನು ಬಳಸಿಕೊಂಡಿದ್ದು, ಇವೆಲ್ಲವುಗಳ ವಿರುದ್ಧ ಕರ್ನಾಟಕದ ಮತದಾರರು ಜಾಗೃತನಾಗಿ ತೀರ್ಪು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಜಾಕೀಯದ ಸೋಲು : ಜನ ಅಸಾಮಾನ್ಯರು ಎಂದ ಉಪೇಂದ್ರಗೆ ನೆಟ್ಟಿಗರ ತರಾಟೆ

“ಕೇಂದ್ರ ನಾಯಕರ ಅಬ್ಬರದ ರ್‍ಯಾಲಿಯಿಂದ ಅಲೆ ಸೃಷ್ಟಿಯಾಗಿಬಿಡುತ್ತೆ ಎಂಬ ಭ್ರಮೆ, ಹಣ ಬಲದ ಧಿಮಾಕು, ಜಾತಿ ರಾಜಕೀಯ, ದ್ವೇಷ ಭಾಷಣ ಇವಕ್ಕೆಲ್ಲ ಸೊಪ್ಪು ಹಾಕದ ಕರುನಾಡಿನ ಮತದಾರರ ಪ್ರಜ್ಞಾವಂತಿಕೆ ಬಗ್ಗೆ ಹೆಮ್ಮೆ ಎನ್ನಿಸುತ್ತದೆ. ಅತಂತ್ರ ಫಲಿತಾಂಶ ಕೊಟ್ಟರೆ ಅನೈತಿಕ ರಾಜಕಾರಣದ ರೂವಾರಿಗಳು ಅದನ್ನು ಹೇಗೆಲ್ಲ ದುರುಪಯೋಗ ಪಡಿಸಿಕೊಂಡು ಹಣಬಲ, ಅಧಿಕಾರ ಬಲದಿಂದ ರಾಜ್ಯದಲ್ಲಿ ಸರ್ಕಾರ ಸ್ಥಾಪಿಸುತ್ತಾರೆ ಎಂಬ ಸ್ಪಷ್ಟ ಅರಿವು ಮತದಾರ ಪ್ರಭುಗಳಿಗೆ ಇದೆ. ಹಾಗಾಗಿಯೇ ನಿರ್ಣಾಯಕ ಫಲಿತಾಂಶ ನೀಡಿ ಯಾರು ಎಲ್ಲಿರಬೇಕು ಎಂದು ಖಚಿತವಾಗಿ ತೋರಿಸಿರುವ ಮತದಾರರು ಅಭಿನಂದನಾರ್ಹರು. ಮತದಾರರ ಪ್ರಜ್ಞಾವಂತಿಕೆ ಮತ್ತು ಪ್ರಜಾಪ್ರಭುತ್ವ ಹೀಗೆ ಪ್ರಬುದ್ಧವಾಗುತ್ತಾ ಚಿರಾಯುವಾಗಲಿ” ಎಂದು ದೀರ್ಘ ಲೇಖನವನ್ನು ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...