ಅಮುಲ್‌ ವಿವಾದ | ಕನ್ನಡಿಗರ ಹೋರಾಟ ಅಸ್ಮಿತೆಗಾಗಿ ; ಕವಿರಾಜ್‌

Date:

ಬ್ಯಾಂಕುಗಳನ್ನು ಇತಿಹಾಸದ ಪುಟ ಸೇರಿಸಿದ ನೋವು ಮಾಸಿಲ್ಲ ಎಂದ ಕವಿರಾಜ್

ರಾಜ್ಯದಲ್ಲಿ ʼಅಮುಲ್‌ʼ ಬ್ರ್ಯಾಂಡ್‌ ಉತ್ಪನ್ನಗಳ ಮಾರಾಟಕ್ಕೆ ಭಾರೀ ಜನ ವಿರೋಧ

ರಾಜ್ಯ ಸರ್ಕಾರ, ಗುಜರಾತ್‌ ಮೂಲದ ʼಅಮುಲ್‌ʼ ಬ್ರ್ಯಾಂಡ್‌ನ ಉತ್ಪನ್ನಗಳನ್ನು ಕರ್ನಾಟಕದಲ್ಲಿ ಮಾರಾಟ ಮಾಡಲು ಉತ್ತೇಜನ ನೀಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ʼಅಮುಲ್‌ʼ ಮಾರುಕಟ್ಟೆ ವಿಸ್ತರಣೆಗೆ ಅವಕಾಶ ಮಾಡಿಕೊಡುವ ಮೂಲಕ ಸ್ಥಳೀಯ ಸಹಕಾರಿ ಬ್ರ್ಯಾಂಡ್‌ ʼನಂದಿನಿʼಯನ್ನು ಕಡೆಗಣಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ನಡುವೆ ರಾಜ್ಯದಲ್ಲಿ ಈಗಾಗಲೇ ಮಾರಾಟವಾಗುತ್ತಿರುವ ಪರರಾಜ್ಯದ ಹಾಲಿನ ಉತ್ಪನ್ನಗಳಿಗೆ ವಿರೋಧ ಯಾಕಿಲ್ಲ? ಜನ ʼಅಮುಲ್‌ʼ ಮೇಲೆಯೇ ಮುಗಿ ಬೀಳುತ್ತಿರುವುದೇಕೆ ಎಂಬ ಬಿಜೆಪಿಗರ ಪ್ರಶ್ನೆಗೆ ಕನ್ನಡದ ಖ್ಯಾತ ಚಿತ್ರ ಸಾಹಿತಿ ಕವಿರಾಜ್‌ ಉತ್ತರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಅಮುಲ್‌ʼ ವಿವಾದದ ಕುರಿತು ಕೇಳಿ ಬರುತ್ತಿರುವ ಪರ, ವಿರೋಧ ಚರ್ಚೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಕ್ರಿಯಿಸಿರುವ ಕವಿರಾಜ್‌, ” ʼದೊಡ್ಲಾʼ, ʼಆರೋಕ್ಯʼ, ʼಮಿಲ್ಕಿ ಮಿಸ್ಟ್ʼ, ʼಹ್ಯಾಟ್ಸನ್ʼ ಮುಂತಾದ ಪರರಾಜ್ಯದ ಹಾಲುಗಳಿಗೆ ಇಲ್ಲದ ವಿರೋಧ ಕೇವಲ ಅಮುಲ್‌ಗೆ ಯಾಕೆ ಎಂದರೆ ಈ ಯಾವ ಹಾಲುಗಳ ಹಿಂದೆಯೂ ಕೇಂದ್ರದ ಪವರ್ ಫುಲ್ ವ್ಯಕ್ತಿಗಳು ಅಥವಾ ಪರರಾಜ್ಯದ ಹಿತಾಸಕ್ತಿಗಳ ಒತ್ತಾಸೆಯಿಲ್ಲ. ಈ ಯಾವುದರ ಜೊತೆಯೂ ʼನಂದಿನಿʼಯನ್ನು ವಿಲೀನಗೊಳಿಸಿ ಎಂದು ಒತ್ತಡ ಬಂದಿಲ್ಲ . ವಿಲೀನ ಪ್ರಯತ್ನ ಸಫಲವಾಗದಿದ್ದಾಗ ʼಜಿಯೋʼಗಾಗಿ ʼಬಿಎಸ್‌ಎನ್‌ಎಲ್‌ʼ ಅನ್ನು ದುರ್ಬಲಗೊಳಿಸಿದಂತೆ ನಮ್ಮ ಆಡಳಿತವನ್ನೇ ಬಳಸಿ ʼನಂದಿನಿʼಯ ಕೃತಕ ಅಭಾವ ಸೃಷ್ಟಿ ಮಾಡುವುದು, ಗುಣಮಟ್ಟದ ಬಗ್ಗೆ ನೆಗೆಟಿವ್ ಪ್ರಚಾರ ಮಾಡುವುದು, ನಷ್ಟಕ್ಕೆ ದೂಡಿ ನಿಷ್ಕ್ರಿಯಗೊಳಿಸುವುದು ಇಂತಹಾ ಯಾವುದೇ ಹುನ್ನಾರ ಮಾಡುವವರಿಲ್ಲ. ಮೇಲಿನ ಯಾವುದೇ ಖಾಸಗಿ ಸಂಸ್ಥೆಗಳಿಂದ ನಂದಿನಿಯ ಅಸ್ತಿತ್ವಕ್ಕೆ ಕುತ್ತು ಬರುವಂತಿಲ್ಲ. ಈ ಪರರಾಜ್ಯದ ಸಂಸ್ಥೆಗಳು ಕರ್ನಾಟಕದಲ್ಲಿ ಸುಗಮವಾಗಿ ಹಾಲು ಮಾರಾಟ ನಡೆಸುತ್ತಿರುವುದೇ ನಾವು ಮಾರುಕಟ್ಟೆಯಲ್ಲಿ ಸ್ಪರ್ಧೆ ಎದುರಿಸಲು ತಯಾರಿದ್ದೇವೆ ಎಂಬುದಕ್ಕೆ ನಿದರ್ಶನ” ಎಂದಿದ್ದಾರೆ.

“ಈಗ ವಿರೋಧಿಸುತ್ತಿರುವುದು ಸ್ಪರ್ಧೆಗೆ ಹೆದರಿ ಅಲ್ಲ. ಪ್ರಭುತ್ವದ ಪವರ್ ಫುಲ್ ವ್ಯಕ್ತಿಗಳನ್ನು ಮೆಚ್ಚಿಸಲು, ಅವರ ಆಜ್ಞಾಪಾಲಕರಾಗಿ ನಮ್ಮ ಹೆಗ್ಗುರುತುಗಳನ್ನೇ ಬಲಿ ಕೊಡಲು ಹಿಂದೆ ಮುಂದೆ ನೋಡದ ನಮ್ಮದೇ ಜನ, ಆಡಳಿತದ ವಿರುದ್ಧ. ʼವಿಜಯಾ ಬ್ಯಾಂಕ್ʼ, ʼಕಾರ್ಪೋರೇಷನ್ ಬ್ಯಾಂಕ್ʼ, ʼಸಿಂಡಿಕೇಟ್ ಬ್ಯಾಂಕ್ʼಗಳನ್ನು ಇತಿಹಾಸದ ಪುಟ ಸೇರಿಸಿದ ದುರಂತದ ನೋವು ಇನ್ನು ಮಾಸಿಲ್ಲ. ಈ ಹೋರಾಟ ಒಂದೊಂದಾಗೇ ನಮ್ಮ ಅಸ್ಮಿತೆಗಳನ್ನು ಕಸಿದು ಅನಾಥರಾಗಿಸುವವರ ವಿರುದ್ಧ” ಎಂದು ರಾಜ್ಯದಲ್ಲಿ ಅಮುಲ್‌ ಬ್ರ್ಯಾಂಡ್‌ನ ಉತ್ಪನ್ನಗಳ ಮಾರಾಟಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ.

ಈ ಹಿಂದೆ ಕೇಂದ್ರಗೃಹ ಸಚಿವ ಅಮಿತ್‌ ಶಾ ಅಮುಲ್‌ ಮತ್ತು ನಂದಿನಿ ಬ್ರ್ಯಾಂಡ್‌ಗಳನ್ನು ವಿಲೀನಗೊಳಿಸುವ ಬಗ್ಗೆ ಸುಳಿವು ನೀಡಿದ್ದರು. ಅವರ ಈ ಹೇಳಿಕೆಗೆ ಕನ್ನಡಿಗರಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲೆವಡೆ ಅಮುಲ್‌ ಉತ್ಪನ್ನಗಳ ಮಾರಾಟಕ್ಕೆ ರಾಜ್ಯ ಸರ್ಕಾರ ಉತ್ತೇಜನ ನೀಡುತ್ತಿದೆ. ಈ ಮೂಲಕ ಸ್ಥಳೀಯ ಸಹಕಾರಿ ಬ್ರ್ಯಾಂಡ್‌ ʼಅಮುಲ್‌ʼ ಅನ್ನು ಹತ್ತಿಕ್ಕಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...