ಮಾರ್ಕೊ ಸಿನಿಮಾಗೆ ಒಟಿಟಿಯಿಂದಲೂ ಬ್ಯಾನ್‌ ಭೀತಿ

Date:

ಮಲೆಯಾಳಂ ಭಾಷೆಯ, ಉನ್ನಿ ಮುಕುಂದನ್‌ ಅಭಿನಯದ ಮಾರ್ಕೊ ಸಿನಿಮಾವನ್ನು ಈಗಾಗಲೇ ಟಿವಿ ಬ್ರಾಡ್‌ಕಾಸ್ಟಿಂಗ್‌ನಿಂದ ಬ್ಯಾನ್‌ ಮಾಡಲಾಗಿದೆ. ಇದೀಗ, ಒಟಿಟಿ ಇಂದಲೂ ಬ್ಯಾನ್‌ ಆಗುವ ಭೀತಿ ಎದುರಾಗಿದೆ.

ಮಾರ್ಕೊ ಸಿನಿಮಾವನ್ನು ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿಯೇ ಅತ್ಯಂತ ಹಿಂಸಾತ್ಮಕ ಸಿನಿಮಾ ಎಂದು ಪರಿಗಣಿಸಲಾಗಿದೆ. ಈ ಕಾರಣದಿಂದಲೇ ಸಿನಿಮಾಗೆ ಸ್ಯಾಟಲೈಟ್‌ ಪ್ರಸಾರದ ಹಕ್ಕು ನೀಡಲು ಕೇರಳ ಸೆನ್ಸಾರ್ ಮಂಡಳಿ ನಿರಾಕರಿಸಿತ್ತು. ಟಿವಿ ಚಾನೆಲ್‌ಗಳಲ್ಲಿ ಪ್ರಸಾರ ಮಾಡದಂತೆ ತಡೆಯೊಡ್ಡಿತ್ತು. ಆ ನಂತರ, ಸಿನಿಮಾ ಒಟಿಟಿ ಪ್ಲಾಟ್‌ಫಾಮ್‌ ‘ಸೋನಿ ಲೈವ್‌’ನಲ್ಲಿ ಬಿಡುಗಡೆಯಾಗಿದೆ. ಈಗ, ಒಟಿಟಿಯಿಂದಲೂ ತೆಗೆಯಲು ಆದೇಶಿಸುವಂತೆ ಕೇಂದ್ರ ಸೆನ್ಸಾರ್‌ ಮಂಡಳಿಗೆ (ಸಿಬಿಎಫ್‌ಸಿ) ಕೇರಳ ಸೆನ್ಸಾರ್‌ ಮಂಡಳಿ ಪತ್ರ ಬರೆದಿದೆ.

2024ರಲ್ಲಿ ಸಿನಿಮಾ ಬಿಡುಗಡೆಯಾಗಿತ್ತು. ಸಿನಿಮಾದಲ್ಲಿ ಅತ್ಯಂತ ಹಿಂಸಾತ್ಮಕ ದೃಶ್ಯಗಳೇ ತುಂಬಿವೆ ಎಂದು ಆಕ್ಷೇಪ ವ್ಯಕ್ತವಾಗಿತ್ತು. ಸಿನಿಮಾದಲ್ಲಿನ ಹಿಂಸಾತ್ಮಕತೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಟೀಕಿಸಿದ್ದರು. ಸಿನಿಮಾಗೆ ಸ್ಯಾಟ್‌ಲೈಟ್‌ ಹಕ್ಕುಗಳನ್ನು ನೀಡಲು ಸಾಧ್ಯವಿಲ್ಲ ಎಂದು ಸಿಬಿಎಫ್‌ಸಿ ಕೂಡ ಹೇಳಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾರ್ಕೊ ಸಿನಿಮಾಗೆ ಸಿಬಿಎಫ್‌ಸಿಗೆ ‘ಎ‌’ ಸರ್ಟಿಫಿಕೇಟ್‌ ನೀಡಿದೆ. ಇಂತಹ ಸಿನಿಮಾಗಳನ್ನು ಮಕ್ಕಳು ವೀಕ್ಷಿಸದಂತೆ ಪೋಷಕರು ಗಮನವಹಿಸಬೇಕು. ಇದು ಕುಟುಂಬದೊಂದಿಗೆ ನೋಡಲು ಸಾಧ್ಯವಿಲ್ಲದ ಸಿನಿಮಾ. ಈ ಸಿನಿಮಾಗೆ ಸ್ಯಾಟಲೈಟ್ ಹಕ್ಕು ನೀಡಲಾಗಿಲ್ಲ” ಎಂದು ಸಿಬಿಎಓಫ್‌ಸಿ ಪ್ರಾದೇಶಿಕ ಅಧಿಕಾರಿ ನದೀಮ್ ತುಫಾಲಿ ತಿಳಿಸಿದ್ದಾರೆ.

ಸಿನಿಮಾದಲ್ಲಿ ಹಿಂಸಾತ್ಮಕ ದೃಶ್ಯಗಳನ್ನು ಸಮರ್ಥಿಸಿಕೊಂಡಿರುವ ನಾಯಕ ನಟ ಉನ್ನಿ ಮುಕುಂದನ್‌, “ಹಿಂಸೆಯು ಮಾನವ ವಿಕಾಸದ ಒಂದು ಭಾಗ. ನಾವು ಯುದ್ಧಗಳನ್ನು ಮಾಡಿದ್ದೇವೆ. ಯುದ್ಧಗಳ ಮೂಲಕವೇ ಶಾಂತಿ ಸಾಧಿಸಿದ್ದೇವೆ. ನಮ್ಮ ಸಮಾಜದಲ್ಲಿ ಹಿಂಸೆ ಅಸ್ತಿತ್ವದಲ್ಲಿದೆ ಎಂಬುದು ಸತ್ಯ. ಸಮಾಜದಲ್ಲಿರುವ ಹಿಂಸೆಗೆ ಹೋಲಿಸಿದರೆ, ಅದರ 10% ಹಿಂಸೆ ಕೂಡ ಮಾರ್ಕೊ ಸಿನಿಮಾದಲ್ಲಿ ಇಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...