ʼವೃಷಭʼ ಗೂಳಿಯಂತೆ ಮುನ್ನುಗ್ಗಲಿ, ಸಮರ್ಜಿತ್ ಲಂಕೇಶ್‌ಗೂ ಒಳ್ಳೆಯದಾಗಲಿ: ಡಿಸಿಎಂ ಡಿ ಕೆ ಶಿವಕುಮಾರ್

Date:

ಖ್ಯಾತ ನಟ ಮೋಹನ್ ಲಾಲ್ ಜತೆಗೆ ಸಮರ್ಜಿತ್ ಲಂಕೇಶ್ ನಟಿಸಿರುವ ಸಿನಿಮಾ ಡಿಸೆಂಬರ್ 25ಕ್ಕೆ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದ್ದು, ʼವೃಷಭʼ ಗೂಳಿ ತರಹ ಮುನ್ನುಗ್ಗಲಿ, ಸಮರ್ಜಿತ್ ಲಂಕೇಶ್‌ ಅವರಿಗೂ ಒಳ್ಳೆಯದಾಗಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹಾರೈಸಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಈ ಚಿತ್ರದ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ವೇಳೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, “ಲಂಕೇಶ್ ಅವರ ಮೊಮ್ಮಗ, ಇಂದ್ರಜಿತ್ ಲಂಕೇಶ್ ಮಗ ಸಮರ್ಜಿತ್ ಲಂಕೇಶ್, ಖ್ಯಾತ ನಟ ಮೋಹನ್ ಲಾಲ್ ಅವರೊಂದಿಗೆ ನಟಿಸಿರುವ ʼವೃಷಭʼ ಚಿತ್ರ ಇದೇ ಡಿಸೆಂಬರ್ 25ರಂದು ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇಡೀ ದೇಶಾದ್ಯಂತ ʼವೃಷಭʼ ಚಿತ್ರ ಗೂಳಿಯಂತೆ ಮುನ್ನುಗ್ಗಲಿ. ಸಮರ್ಜಿತ್ ಲಂಕೇಶ್ ಅವರಿಗೆ ಒಳ್ಳೆಯದಾಗಲಿ. ಇತ್ತೀಚೆಗೆ ಮುಂಬೈಗೆ ಹೋಗಿದ್ದಾಗ ಬಾಲಿವುಡ್‌ನವರು ಕನ್ನಡ ಚಿತ್ರಗಳ ಬಗ್ಗೆ ಆಡಿದ ಉತ್ತಮ ಮಾತುಗಳನ್ನು ಕೇಳಿ ಸಂತೋಷವಾಯಿತು” ಎಂದು ಹರ್ಷ ವ್ಯಕ್ತಪಡಿಸಿದರು.

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಮೋಹನ್‌ಲಾಲ್‌ ಅಭಿನಯದ ‘ವೃಷಭ’ ಸಿನಿಮಾ ಇದೇ ಡಿಸೆಂಬರ್ 25ರಂದು ವಿಶ್ವಾದ್ಯಂತ ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ. ತಂದೆ-ಮಗನ ನಡುವಿನ ಬಾಂಧವ್ಯದ ಎಮೋಷನಲ್ ಕಥಾಹಂದರ ಹೊಂದಿರುವ ಈ ಸಿನಿಮಾ, ಭವ್ಯತೆ ಮತ್ತು ಸಾಹಸ ದೃಶ್ಯಗಳ ಮೂಲಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲಯಾಳಂನ ಸೂಪರ್ ಸ್ಟಾರ್ ಮೋಹನ್ ಲಾಲ್ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದಲ್ಲಿ ಯುವ ಪ್ರತಿಭೆ ಸಮರ್ಜಿತ್ ಲಂಕೇಶ್, ರಾಗಿಣಿ ದ್ವಿವೇದಿ, ನಯನ್ ಸಾರಿಕಾ, ಅಜಯ್, ನೇಹಾ ಸಕ್ಸೇನಾ, ಗರುಡ ರಾಮ್, ವಿನಯ್ ವರ್ಮಾ, ಆಲಿ, ಅಯ್ಯಪ್ಪ ಪಿ. ಶರ್ಮಾ ಮತ್ತು ಕಿಶೋರ್ ಅವರಂತಹ ಘಟಾನುಘಟಿ ಕಲಾವಿದರು ನಟಿಸಿದ್ದಾರೆ.

ತಾಂತ್ರಿಕ ತಂಡ ಹೀಗಿದೆ
ಸಂಗೀತ: ಸ್ಯಾಮ್ ಸಿ.ಎಸ್.
ಧ್ವನಿ ವಿನ್ಯಾಸ: ಆಸ್ಕರ್ ಪ್ರಶಸ್ತಿ ವಿಜೇತ ರೇಸುಲ್ ಪೂಕುಟ್ಟಿ.
ಸಂಭಾಷಣೆ: ಎಸ್ ಆರ್ ಕೆ, ಜನಾರ್ದನ್ ಮಹರ್ಷಿ ಮತ್ತು ಕಾರ್ತಿಕ್.
ಸಾಹಸ ನಿರ್ದೇಶನ: ಪೀಠರ್ ಹೆನ್, ಸ್ಟಂಟ್ ಸಿಲ್ವಾ, ಗಣೇಶ್ ಮತ್ತು ನಿಖಿಲ್.

ಬಾಲಾಜಿ ಟೆಲಿಫಿಲ್ಮ್ಸ್ ಮತ್ತು ಕನೆಕ್ಟ್ ಮೀಡಿಯಾ ಪ್ರೆಸೆಂಟ್ಸ್ ಅಡಿಯಲ್ಲಿ, ಅಭಿಷೇಕ್ ಎಸ್ ವ್ಯಾಸ್ ಸ್ಟುಡಿಯೋಸ್ ಸಹಯೋಗದೊಂದಿಗೆ ಈ ಸಿನಿಮಾ ಮೂಡಿಬರುತ್ತಿದೆ. ಶೋಭಾ ಕಪೂರ್, ಏಕ್ತಾ ಆರ್ ಕಪೂರ್, ಸಿ ಕೆ ಪದ್ಮಕುಮಾರ್, ವರುಣ್ ಮಾಥುರ್, ಸೌರಭ್ ಮಿಶ್ರಾ, ಅಭಿಷೇಕ್ ಎಸ್. ವ್ಯಾಸ್, ಪ್ರವೀರ್ ಸಿಂಗ್, ವಿಶಾಲ್ ಗುರ್ನಾನಿ ಮತ್ತು ಜೂಹಿ ಪರೇಖ್ ಮೆಹ್ತಾ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ವಿಮಲ್ ಲಹೋಟಿ ಅವರು ಸಹ-ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ನಂದಕಿಶೋರ್‌ ಈ ಚಿತ್ರದ ನಿರ್ದೇಶಕರು.

ಈ ಸುದ್ದಿ ಓದಿದ್ದೀರಾ? ನಟ ಸುದೀಪ್ ಯುದ್ಧಕ್ಕೆ ಸಿದ್ಧ ಎಂದದ್ದು ಅಭಿಮಾನಿಗಳಿಗಾ ಅಥವಾ ದೃಶ್ಯಮಾಧ್ಯಮಗಳಿಗಾ?

‘ವೃಷಭ’ ಚಿತ್ರವನ್ನು ಏಕಕಾಲದಲ್ಲಿ ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಚಿತ್ರೀಕರಿಸಲಾಗಿದ್ದು, ಕನ್ನಡ ಮತ್ತು ಹಿಂದಿ ಭಾಷೆಗಳಿಗೂ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದೆ. 2025ರ ಅತಿದೊಡ್ಡ ಸಿನೀಮಿಯ ಅನುಭವವನ್ನು ನೀಡಲು ಚಿತ್ರತಂಡ ಸಜ್ಜಾಗಿದೆ. ಅಂದಹಾಗೆ ಡಿಸೆಂಬರ್ 25ರಂದು ವಿಶ್ವದಾದ್ಯಂತ ಈ ಸಿನಿಮಾ ಬಿಡುಗಡೆ ಆಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಲಯದ ಆಜ್ಞೆಗೆ ಕಿಮ್ಮತ್ತಿಲ್ಲ; ಮಾಹಿತಿ ನೀಡಲು ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳ ಹಿಂದೇಟು

ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಜ್ಞೆಗಳನ್ನು...

ʼಧುರಂಧರ್ʼ ಸೀಕ್ವೆಲ್‌ಗೆ ʼAʼ ಸರ್ಟಿಫಿಕೇಟ್; 21 ಕಡೆ ಕತ್ತರಿ, ರನ್‌ಟೈಮ್ ಎಷ್ಟು ಗೊತ್ತೇ?

ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ʼಧುರಂಧರ್‌ʼನ ಮುಂದುವರೆದ ಭಾಗ 'ಧುರಂಧರ್: ದಿ...

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...