ಮೋದಿ ಹೈ ತೊ ಏ ಸಬ್ ಮುಮ್ಕಿನ್ ಹೈ : ನಟ ಕಿಶೋರ್ ಕುಮಾರ್ ಹೀಗೆ ಅಂದಿದ್ದೇಕೆ?

Date:

ಕೇಂದ್ರ ಸರ್ಕಾರದ ಕೆಲ ನಡೆಗಳನ್ನು ನೇರವಾಗಿ ಖಂಡಿಸುತ್ತಿರುವ ಬಹುಭಾಷಾ ನಟ, ಕಿಶೋರ್‌ ಕುಮಾರ್‌ ಅವರು, ‘ಮೋದಿ ಹೈ ತೊ ಏ ಸಬ್ ಮುಮ್ಕಿನ್ ಹೈ’ ಎಂದು ಫೇಸ್‌ಬುಕ್ ಪೋಸ್ಟ್‌ ಹಾಕಿದ್ದಾರೆ.

ಕಾರಣ ಇಷ್ಟೇ. ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಕುರಿತು ಹಂಚಿಕೊಂಡಿದ್ದ ಪೋಸ್ಟ್‌ ಅನ್ನು ಇನ್‌ಸ್ಟಾಗ್ರಾಮ್ ನಿಯಮ ಉಲ್ಲಂಘನೆ ಎಂದು ಉಲ್ಲೇಖಿಸಿ ಅಳಿಸಿ ಹಾಕಿದೆ.

ಈ ಹಿನ್ನೆಲೆಯಲ್ಲಿ ಪರೋಕ್ಷವಾಗಿ ಟಾಂಗ್ ನೀಡಿರುವ ನಟ ಕಿಶೋರ್, ‘ಮೋದಿಯವರಿದ್ದರೆ ಇದೆಲ್ಲವೂ ಸಾಧ್ಯ’ ಎಂದು ಹೇಳಿ, ಇನ್‌ಸ್ಟಾಗ್ರಾಮ್ ಖಾತೆ ಬ್ಲಾಕ್ ಮಾಡಿರುವ ಸ್ಕ್ರೀನ್ ಶಾಟ್‌ ಅನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಬಳಿಕದ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ವಿವರವಾಗಿ ಬರೆದುಕೊಂಡಿರುವ ಬಹುಭಾಷಾ ನಟ, ‘ಇನ್‌ಸ್ಟಾಗ್ರಾಮ್‌ನ ಈ ನಿಯಮಗಳು ನನ್ನ ನೊಂದು ಬೆಂದ ಮಣಿಪುರಕ್ಕೆ , ಕಾಶ್ಮೀರಕ್ಕೆ , ಗುಜರಾತಿಗೆ, ನೂಹ್‌ಗೆ, ಹಾಥರಸ್‌ಗೆ, ಸಿಂಘು ಬಾರ್ಡರಿಗೆ, ಲಖೀಮ್ ಪುರ್ ಖೇರಿಗೆ , ಧರ್ಮಸ್ಥಳಕ್ಕೆ, ದೇಶದ ಉದ್ದಗಲಕ್ಕೆ ಅನ್ವಯಿಸಿಬಿಟ್ಟಿದ್ದರೆ ಎಷ್ಟು ಚೆಂದ. ಇವರು ಹೇಳುವ ADULT SEXUAL EXPLOITATION ಅನ್ನು ನನ್ನ ದೇಶದ ಮನಃಪಟಲದಿಂದ ನನ್ನ ಪೋಸ್ಟಿನ ಹಾಗೆ ಅಳಿಸಿಬಿಡಲು ಸಾಧ್ಯವಿದ್ದಿದ್ದರೆ ಎಷ್ಟು ಚೆಂದ’ ಎಂದು ಬರೆದುಕೊಂಡಿದ್ದಾರೆ.

‘ನಾನೋ, ನಾನು ಹಾಕುವ ಪೋಸ್ಟೊ, ಮೋದಿಯೋ, ಗೋದಿಯೋ ಮುಖ್ಯವೇ ಅಲ್ಲ . ಈ ದೇಶವನ್ನು , ಕುವೆಂಪು ಗಾಂಧಿ ಅಂಬೇಡ್ಕರ್ ಬುದ್ಧ ಬಸವರ ಕನಸಿನ ಸರ್ವ ಸಮಾನತೆಯ ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಉಳಿಸಿಕೊಳ್ಳುತ್ತೇವೆಯಾ ಎನ್ನುವುದಷ್ಟೇ ಮುಖ್ಯ’ ಎಂದು ತನ್ನ ಆಗ್ರಹವನ್ನು ಬಹುಭಾಷಾ ನಟ ಕಿಶೋರ್ ಕುಮಾರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...