ನಿರ್ದೇಶಕ ನಂದ ಕಿಶೋರ್‌ ವಿರುದ್ಧ 22 ಲಕ್ಷ ರೂ. ವಂಚನೆ ಆರೋಪ

Date:

ಕನ್ನಡದ ಖ್ಯಾತ ಸಿನಿಮಾ ನಿರ್ದೇಶಕ ನಂದ ಕಿಶೋರ್‌ ವಿರುದ್ಧ 22 ಲಕ್ಷ ರೂ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ನಟ ಶಬರೀಶ್ ಎಂಬುವವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡುವುದಾಗಿ ಹೇಳಿದ್ದಾರೆ.

ನಿರ್ದೇಶಕ ನಂದ ಕಿಶೋರ್ ತಮ್ಮಿಂದ 22 ಲಕ್ಷ ರೂ ಹಣ ಪಡೆದುಕೊಂಡಿದ್ದರು. ಈಗ ಹಣ ಕೊಡದೆ ಸತಾಯಿಸುತ್ತಿದ್ದಾರೆ. ಹಣ ವಾಪಸ್ ಕೊಡುವಂತೆ ಕೇಳಿದರೆ ಸುದೀಪ್ ಅವರ ಹೆಸರು ಬಳಸಿ ನನಗೆ ಬೆದರಿಕೆ ಸಹ ಹಾಕಿದ್ದಾರೆ ಎಂದು ನಟ ಆರೋಪ ಮಾಡಿದ್ದಾರೆ.

ಈ ಸಂಬಂಧ ನಟ ಶಬರೀಶ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ​​ಗೆ ಈ ಬಗ್ಗೆ ದೂರು ನೀಡುವುದಾಗಿ ಹೇಳಿದ್ದು, ಕೂಡಲೇ ವಾಣಿಜ್ಯ ಮಂಡಳಿ ತನ್ನ ದೂರು ಸ್ವೀಕರಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಕಾಂತಾರ ಚಿತ್ರತಂಡಕ್ಕೆ ತಹಶೀಲ್ದಾರ್ ನೋಟಿಸ್; ಮೂರು ದಿನದಲ್ಲಿ ಉತ್ತರಿಸಲು ಸೂಚನೆ

ಕಿಚ್ಚ ಸುದೀಪ್ ಅವರ ಅಭಿಮಾನಿ ಆಗಿರುವ ಶಬರೀಶ್ ಶೆಟ್ಟಿ ಆರೋಪಿಸಿರುವಂತೆ, ನಿರ್ದೇಶಕ ನಂದ ಕಿಶೋರ್ ಸುಮಾರು ಒಂಬತ್ತು ವರ್ಷಗಳ ಹಿಂದೆ ಜಿಮ್ ಒಂದರಲ್ಲಿ ಪರಿಚಯವಾದರಂತೆ. ಪರಿಚಯ ಗೆಳೆತನವಾಗಿ, ನಂದ ಕಿಶೋರ್, ಶಬರೀಶ್ ಅವರನ್ನು ಸಿಸಿಎಲ್​​ನಲ್ಲಿ ಆಡಿಸುವುದಾಗಿ ಭರವಸೆ ನೀಡಿ, ಶಬರೀಶ್ ಅವರಿಂದ 22 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದರಂತೆ. ಇದಕ್ಕಾಗಿ ಶಬರೀಶ್ ತನ್ನ ಮನೆಯಲ್ಲಿದ್ದ ಚಿನ್ನ ಅಡವಿಟ್ಟು ಹಣ ಕೊಟ್ಟಿದ್ದೆ ಎಂದು ಹೇಳಿದ್ದಾರೆ.

“ಇಲ್ಲಿಯವರೆಗೂ ನಂದ ಕಿಶೋರ್ ಅವರು ತಮಗೆ ಹಣ ಮರಳಿಸಿಲ್ಲ ಎಂದು ಶಬರೀಶ್ ಆರೋಪಿಸಿದ್ದಾರೆ. ಹಣ ಮರಳಿಸುವಂತೆ ಕೇಳಿದರೆ ಬೆದರಿಕೆ ಹಾಕುತ್ತಾರೆ. ನಾನು ಹಣ ಕೇಳಿದಾಗೆಲ್ಲ ಸುದೀಪ್ ಸರ್ ಹೆಸರು ಹೇಳಿ ಯಾಮಾರಿಸಿದರು. ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಹೇಳಿ ನನಗೆ ಮೋಸ ಮಾಡಿದ್ದಾರೆ. ನಾನು ಕೊಟ್ಟ ಹಣವೂ ವಾಪಸ್ ಕೊಟ್ಟಿಲ್ಲ. ಸಿನಿಮಾದಲ್ಲಿ ಅವಕಾಶವನ್ನು ಕೊಡಲಿಲ್ಲ, ನಾನು ಸಿಸಿಎಲ್‌ನಲ್ಲಿ ಆಡುವ ಕನಸು ಕಟ್ಟಿಕೊಂಡಿದ್ದೆ. ಕೆಸಿಸಿ ಟೂರ್ನಿಯಲ್ಲಿ ನಾನು ಎರಡು ಆವೃತ್ತಿ ಆಡಿದ್ದೇನೆ. ಹಣ ಕೇಳಿದರೆ ನಿನ್ನ ಕೆಸಿಸಿಯಿಂದ ಹೊರ ಹಾಕುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದಾರೆ’ ಎಂದು ಶಬರೀಶ್ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...