ಸಿನಿ ರಸಿಕರ ಗಮನ ಸೆಳೆಯುತ್ತಿದೆ ʼಮಳ್ಳಿ ಪೆಳ್ಳಿʼ ಟೀಸರ್‌

Date:

ಮೇ ತಿಂಗಳಲ್ಲಿ ತೆರೆ ಕಾಣಲಿದೆ ನರೇಶ್‌, ಪವಿತ್ರಾ ಲೋಕೇಶ್‌ ನಟನೆಯ ಚಿತ್ರ

ಟೀಕಾಕಾರಿಗೆ ತಿರುಗೇಟು ನೀಡಲು ಸಿನಿಮಾ ನಿರ್ಮಿಸಿದ ಸ್ಟಾರ್‌ ದಂಪತಿ

ತೆಲುಗಿನ ಖ್ಯಾತ ನಟ ನರೇಶ್‌ ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್‌ ಕಳೆದ ಕೆಲ ತಿಂಗಳುಗಳ ಹಿಂದಷ್ಟೇ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಈ ಸ್ಟಾರ್‌ ಜೋಡಿಯ ಸಂಬಂಧ ಭಾರೀ ಚರ್ಚೆಗೆ ಕಾರಣವಾಗಿತ್ತು. ನರೇಶ್‌ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಅವರೇ ಮಾಧ್ಯಮಗಳ ಎದುರು ನರೇಶ್‌ ತಮಗೆ ಮೋಸ ಮಾಡಿರುವುದಾಗಿ ಆರೋಪಿಸಿದ್ದರು. ವಿವಾದದ ನಡುವೆಯೇ ಹಸೆಮಣೆ ಏರಿದ್ದ ಈ ಜೋಡಿ ತಮ್ಮ ಪ್ರೀತಿ ಮತ್ತು ಮದುವೆಯ ಕಥೆಯನ್ನು ತೆರೆಗೆ ಅಳವಡಿಸಿದ್ದು, ಚಿತ್ರಕ್ಕೆ ʼಮಳ್ಳಿ ಪೆಳ್ಳಿʼ ಎಂದು ಹೆಸರಿಡಲಾಗಿದೆ. ಸದ್ಯ ಈ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಸಿನಿ ರಸಿಕರ ಗಮನ ಸೆಳೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನರೇಶ್‌ ನಾಲ್ಕನೇ ಮದುವೆಯಾಗಿದ್ದಕ್ಕೆ ಭಾರೀ ಟೀಕೆಗೆ ಗುರಿಯಾಗಿದ್ದರು. ಪವಿತ್ರಾ ಲೋಕೇಶ್‌ ಅವರ ನಡೆಯ ಬಗ್ಗೆಯೂ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಈ ಜೋಡಿ ನಮ್ಮ ಖಾಸಗಿ ಬದುಕಿಗೆ ಗೌರವ ನೀಡಿ ಎಂದಷ್ಟೇ ಮನವಿ ಮಾಡಿ ಸುಮ್ಮನಾಗಿತ್ತು. ಇದೇ ಅಂಶಗಳ ಸುತ್ತ ʼಮಳ್ಳಿ ಪೆಳ್ಳಿʼ ಸಿನಿಮಾ ಮೂಡಿಬಂದಿದೆ. ಒಂದು ನಿಮಿಷದ ಟೀಸರ್‌ನಲ್ಲಿ ಪವಿತ್ರಾ ಮತ್ತು ನರೇಶ್‌ ಅವರ ಪ್ರೀತಿ, ವಿವಾದ ಹಾಗೂ ಮದುವೆಯ ಬಗ್ಗೆ ತೋರಿಸಲಾಗಿದೆ.

ಈ ಸ್ಟಾರ್‌ ದಂಪತಿ ಟೀಕಾಕಾರರಿಗೆ ಉತ್ತರವಾಗಿ ತಾವೇ ಮುಖ್ಯಭೂಮಿಕೆಯಲ್ಲಿ ನಟಿಸಿ, ನಿರ್ಮಿಸಿರುವ ಈ ಚಿತ್ರಕ್ಕೆ ತೆಲುಗಿನ ನಿರ್ದೇಶಕ ಎಂ.ಎಸ್‌ ರಾಜು ಆ್ಯಕ್ಷನ್ ಕಟ್‌ ಹೇಳಿದ್ದಾರೆ. ಶರತ್ ಬಾಬು, ಜಯಸುಧಾ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅರುಲ್‌ ದೇವ್‌ ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ.

ತೆಲುಗು ಮತ್ತು ಕನ್ನಡದಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿರುವ ಈ ಚಿತ್ರ ಮೇ ತಿಂಗಳಿನಲ್ಲಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಈ ಚಿತ್ರಕ್ಕೆ ಕನ್ನಡದಲ್ಲಿ ʼಮತ್ತೆ ಮದುವೆʼ ಎಂದು ಹೆಸರಿಡಲಾಗಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...