‘ನಾತಿಚರಾಮಿ’ ಖ್ಯಾತಿಯ ಮಂಸೋರೆ ಹೊಸ ಪ್ರಯೋಗ ‘ದೂರ ತೀರ ಯಾನ’ ಜು.11ಕ್ಕೆ ತೆರೆಗೆ

Date:

‘ನಾತಿಚರಾಮಿ’ ಮೂಲಕ ದಿಟ್ಟ ಮಹಿಳಾ ಪಾತ್ರವನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ ಖ್ಯಾತ ನಿರ್ದೇಶಕ ಮಂಸೋರೆ, ತಮ್ಮ ಮುಂದಿನ ಚಿತ್ರ ʼದೂರ ತೀರ ಯಾನʼದ ಮೂಲಕ ಪ್ರೇಕ್ಷಕರನ್ನು ಮತ್ತೊಮ್ಮೆ ಸೆಳೆಯಲು ಸಜ್ಜಾಗಿದ್ದಾರೆ. ಈ ಸಿನಿಮಾ ಜುಲೈ 11ರಂದು ರಾಜ್ಯಾದ್ಯಂತ ತೆರೆಕಾಣಲಿದೆ.

ಈ ಹಿಂದೆ ನಾತಿಚರಾಮಿಯಲ್ಲಿ ‘ಗೌರಿ’ ಪಾತ್ರದಲ್ಲಿ ನಟಿಸಿ ಭಾರೀ ಮೆಚ್ಚುಗೆ ಪಡೆದಿದ್ದ ಶೃತಿ ಹರಿಹರನ್, ಇದೀಗ ಮಂಸೋರೆಯ ಹೊಸ ಚಿತ್ರದಲ್ಲೂ ವಿಶೇಷವಾಗಿ ʼಗೌರಿʼ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿ ಮತ್ತು ನಾಯಕನ ಹೊರತಾಗಿ ಇತರೆ ಪಾತ್ರಗಳ ಪರಿಚಯವನ್ನು ಆರಂಭಿಸಿರುವ ತಂಡ, ಮೊದಲನೆಯದಾಗಿ ‘ಗೌರಿ’ಯನ್ನು ಪರಿಚಯಿಸುವ ವಿಶೇಷ ವಿಡಿಯೋವನ್ನೂ ಬಿಡುಗಡೆ ಮಾಡಿದೆ.

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದ್ದು, ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಚಿತ್ರವು ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಳಿಸಿ ಯು/ಎ ಪ್ರಮಾಣಪತ್ರ ಪಡೆದಿದೆ. ಪ್ರಚಾರ ಕಾರ್ಯದಲ್ಲಿ ತೊಡಗಿರುವ ಚಿತ್ರತಂಡ ಜೂನ್ 28 ರಂದು (ಶನಿವಾರ) ಬೆಳಗ್ಗೆ 11 ಗಂಟೆಗೆ ಕಿಚ್ಚ ಸುದೀಪ್ ರವರ ಮೂಲಕ ʼದೂರ ತೀರ ಯಾನʼ ಚಿತ್ರದ ಟ್ರೈಲರ್ ಬಿಡುಗಡೆಗೊಳಿಸಲು ಸಿದ್ಧತೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಸದಭಿರುಚಿಯ “X&Y” ಚಿತ್ರ ಈ ವಾರ ತೆರೆಗೆ

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮೈಲಿಗಲ್ಲು ಸ್ಥಾಪಿಸಿದ ಸಿನೆಮಾ “ನಾತಿಚರಾಮಿ”. ಮಂಸೋರೆ ನಿರ್ದೇಶನ ಮಾಡಿದ್ದ ಈ ಸಿನೆಮಾ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಒಂದೇ ಸಿನೆಮಾಗೆ ಐದು ರಾಷ್ಟ್ರ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಇತಿಹಾಸ ಸೃಷ್ಟಿಸಿತ್ತು. ಇದು ಕೇವಲ ಪ್ರಶಸ್ತಿಯ ಕಾರಣಕಷ್ಟೇ ಅಲ್ಲದೇ ಈ ಸಿನೆಮಾದ ಕಥಾ ವಸ್ತುವೂ ಹೆಚ್ಚು ಚರ್ಚಿತವಾಗಿ, ನೆಟ್ ಫ್ಲಿಕ್ಸ್ ಮೂಲಕ ದೇಶ ವಿದೇಶದ ಸಿನಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಸಿನೆಮಾದಲ್ಲಿ ಗೌರಿ ಪಾತ್ರ ಮಾಡಿದ್ದ ಶೃತಿ ಹರಿಹರನ್ ಮತ್ತೆ ಮಂಸೋರೆ ಅವರ ಹೊಸ ಸಿನೆಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಪರಿಚಯದ ವಿಡಿಯೋ ಒಂದನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...