ತೆರೆಕಂಡ 7 ದಿನಕ್ಕೆ ₹100 ಕೋಟಿ ಗಳಿಸಿದ ʼದಸರಾʼ

Date:

ಚೊಚ್ಚಲ ಚಿತ್ರದಲ್ಲೇ ದಾಖಲೆ ಸೃಷ್ಟಿಸಿದ ನಿರ್ದೇಶಕ ಶ್ರೀಕಾಂತ್‌ ಒಡೆಲಾ

ನಿರ್ದೇಶಕರಿಗೆ ದುಬಾರಿ ಕಾರು ಉಡುಗೊರೆ ನೀಡಿದ ನಿರ್ಮಾಪಕ ಸುಧಾಕರ್‌

ತೆಲುಗಿನ ಖ್ಯಾತ ನಟ ನಾನಿ ಅಭಿನಯದ ದಸರಾ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಗಲ್ಲಾ ಪೆಟ್ಟಿಗೆಯಲ್ಲಿ ಸಖತ್‌ ಸದ್ದು ಮಾಡುತ್ತಿದೆ. ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾ ತೆರೆಕಂಡ ಒಂದು ವಾರಕ್ಕೆ ಬರೋಬ್ಬರಿ ₹100 ಕೋಟಿ ಗಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿನಿಮಾ 100 ಕೋಟಿ ಕ್ಲಬ್‌ ಸೇರುತ್ತಲೇ ತಮ್ಮ ಟ್ವಿಟರ್‌ ಖಾತೆಯಲ್ಲಿ ವಿಶೇಷ ಪೋಸ್ಟರ್‌ ಹಂಚಿಕೊಂಡು ಸಂತಸ ವ್ಯಕ್ತಪಡಿಸಿರುವ ನಾನಿ, “ನಮ್ಮ ಶ್ರಮಕ್ಕೆ ತಕ್ಕನಾದ ಉಡುಗೊರೆಯನ್ನು ನೀವು ನೀಡಿದ್ದೀರಿ. ದಸರಾ ಭರ್ಜರಿ ಯಶಸ್ಸು ಕಂಡಿದೆ” ಎಂದು ಬರೆದುಕೊಂಡಿದ್ದಾರೆ.

ದಸರಾ ಯಶಸ್ಸನ್ನು ಸಂಭ್ರಮಿಸಿರುವ ನಿರ್ಮಾಪಕ ಸುಧಾಕರ್‌ ಚೆರುಕುರಿ, ಚಿತ್ರದ ನಿರ್ದೇಶಕ ಶ್ರೀಕಾಂತ್‌ ಒಡೆಲಾ ಅವರಿಗೆ ದುಬಾರಿ ಬೆಲೆಯ ʼಬಿಎಂಡಬ್ಲ್ಯೂʼ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಜೊತೆಗೆ ಚಿತ್ರದ ತಾಂತ್ರಿಕ ವರ್ಗ ಮತ್ತು ಕಲಾವಿದರಿಗೆ ತಲಾ 10 ಗ್ರಾಂ ಚಿನ್ನದ ನಾಣ್ಯಗಳನ್ನು ನೀಡಿದ್ದಾರೆ.

ಯುವ ನಿರ್ದೇಶಕ ಶ್ರೀಕಾಂತ್‌ ಒಡೆಲಾ ತಮ್ಮ ಚೊಚ್ಚಲ ಚಿತ್ರದಲ್ಲೇ ಭಾರೀ ಯಶಸ್ಸು ಗಳಿಸುವ ಮೂಲಕ ರಾಜಮೌಳಿ, ಪ್ರಭಾಸ್‌, ಮಹೇಶ್‌ ಬಾಬು ಹೀಗೆ ತೆಲುಗಿನ ಖ್ಯಾತನಾಮರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ನಾನಿ ಸಿನಿ ಬದುಕಿನಲ್ಲೂ ʼದಸರಾʼ ಸಿನಿಮಾ ಮಹತ್ವದ ತಿರುವು ನೀಡಿದೆ.

ಈ ಸುದ್ದಿ ಓದಿದ್ದೀರಾ? ʼಸಲಾರ್‌ʼ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ

ಮಾಸ್‌, ಆ್ಯಕ್ಷನ್ ಕಥಾಹಂದರವುಳ್ಳ ಈ ಚಿತ್ರದಲ್ಲಿ ಖ್ಯಾತ ನಟಿ ಕೀರ್ತಿ ಸುರೇಶ್‌ ನಾಯಕಿಯ ಪಾತ್ರದಲ್ಲಿ ಮಿಂಚಿದ್ದಾರೆ. ʼದಿಯಾʼ ಖ್ಯಾತಿಯ ನಟ, ಕನ್ನಡಿಗ ದೀಕ್ಷಿತ್‌ ಶೆಟ್ಟಿ, ಸಾಯಿ ಕುಮಾರ್‌, ಸಮುದ್ರ ಖಣಿ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಸಂತೋಷ್‌ ನಾರಾಯಣನ್‌ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...