ಒಟಿಟಿಗೆ ಬರಲು ಸಜ್ಜಾದ ‘ಹೊಂದಿಸಿ ಬರೆಯಿರಿ’

Date:

  • ಭಾವನಾತ್ಮಕ ಕಥಾಹಂದರದ ‘ಹೊಂದಿಸಿ ಬರೆಯಿರಿ
  • ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದ ಯುವ ನಿರ್ದೇಶಕನ ಚಿತ್ರ

ನವೀನ್‌ ಶಂಕರ್‌, ಪ್ರವೀಣ್‌ ತೇಜ್‌ ಮುಖ್ಯಭೂಮಿಕೆಯಲ್ಲಿ ಕಳೆದ ಫೆಬ್ರವರಿಯಲ್ಲಿ ತೆರೆಕಂಡಿದ್ದ ‘ಹೊಂದಿಸಿ ಬರೆಯಿರಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿದೆ. ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಗಳಿಸಿದ್ದ ಈ ಚಿತ್ರ ಇದೀಗ ಒಟಿಟಿ ವೇದಿಕೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ.

‘ಹೊಂದಿಸಿ ಬರೆಯಿರಿ’ ಸಿನಿಮಾದ ಡಿಜಿಟಲ್‌ ಹಕ್ಕನ್ನು ಜನಪ್ರಿಯ ಒಟಿಟಿ ಸಂಸ್ಥೆ ಅಮೆಜಾನ್‌ ಪ್ರೈಂ ಭಾರೀ ಮೊತ್ತಕ್ಕೆ ಖರೀದಿ ಮಾಡಿದೆ. ಏಪ್ರಿಲ್‌ 1ರಿಂದ ಚಿತ್ರ ಒಟಿಟಿ ವೇದಿಕೆಯಲ್ಲಿ ಪ್ರಸಾರ ಕಾಣಲಿದೆ ಎಂದು ರಾಮೇನಹಳ್ಳಿ ಜಗನ್ನಾಥ ಅವರೇ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಯುವ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ನಿರ್ದೇಶನದ ʼಹೊಂದಿಸಿ ಬರೆಯಿರಿʼ ಸಿನಿಮಾ, ಕಾಲೇಜು ದಿನಗಳ ಸ್ನೇಹ, ಪ್ರೀತಿ, ಬದುಕಿನ ಅನಿಶ್ಚಿತತೆಯ ಸುತ್ತ ಮೂಡಿ ಬಂದಿದೆ. ಭಾವನಾತ್ಮಕ ಕಥಾಹಂದರವುಳ್ಳ ಈ ಚಿತ್ರ ʼಬದುಕು ಬಂದಂತೆ ಸ್ವೀಕರಿಸಿʼ ಎಂಬ ಸಂದೇಶದೊಂದಿಗೆ ಪ್ರೇಕ್ಷಕರಿಗೆ ಹತ್ತಿರವಾಗಿತ್ತು. ಈ ಬಾರಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲೂ ಈ ಚಿತ್ರ ಪ್ರದರ್ಶನ ಕಾಣುತ್ತಿರುವುದು ಗಮನಾರ್ಹ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಾಲಿವುಡ್‌ ತೊರೆದ ಅಸಲಿ ಕಾರಣ ಬಿಚ್ಚಿಟ್ಟ ಪ್ರಿಯಾಂಕಾ ಚೋಪ್ರಾ

ನವೀನ್‌ ಶಂಕರ್‌, ಪ್ರವೀಣ್‌ ತೇಜ್‌, ಶ್ರೀ ಮಹದೇವ್‌, ಸಂಯುಕ್ತ ಹೊರ್‌ನಾಡ್‌, ಭಾವನಾ ರಾವ್‌, ಐಶಾನಿ ಶೆಟ್ಟಿ, ಅರ್ಚನಾ ಜೋಯಿಸ್‌, ಅನಿರುದ್ಧ್‌ ಆಚಾರ್ಯಾ ಸೇರಿದಂತೆ ಬಹುತಾರಾಗಣವಿರುವ ಈ ಚಿತ್ರವನ್ನು ಸ್ನೇಹಿತರ ನೆರವಿನೊಂದಿಗೆ ನಿರ್ದೇಶಕ ಜಗನ್ನಾಥ ಅವರೇ ನಿರ್ಮಿಸಿದ್ದಾರೆ. ಜೋ ಕೋಸ್ಟಾ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...