ʼದಿ ಕೇರಳ ಸ್ಟೋರಿʼ ಕುರಿತ ಹೇಳಿಕೆ ತಿರುಚಿದ ಮಾಧ್ಯಮಗಳು : ಚಳಿ ಬಿಡಿಸಿದ ನವಾಜುದ್ದೀನ್‌ ಸಿದ್ದಿಕಿ

Date:

ದೇಶಾದ್ಯಂತ ವಿವಾದ ಸೃಷ್ಟಿಸಿರುವ ʼದಿ ಕೇರಳ ಸ್ಟೋರಿʼ ಚಿತ್ರದ ಕುರಿತು ತಾವು ಆಡಿದ್ದ ಮಾತುಗಳನ್ನು ಟಿಆರ್‌ಪಿ ಗಿಟ್ಟಿಸುವ ಸಲುವಾಗಿ ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡುತ್ತಿವೆ ಎಂದು ಬಾಲಿವುಡ್‌ನ ಖ್ಯಾತ ನಟ ನವಾಜುದ್ದೀನ್‌ ಸಿದ್ದಿಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ನವಾಜುದ್ದೀನ್‌ ಸಿದ್ದಿಕಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ʼಜೋಗಿರಾ ಸಾರಾ ರಾ ರಾʼ ಸಿನಿಮಾ ಮೇ 26ರಂದು ತೆರೆಗೆ ಬಂದಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಅವರು ಇತ್ತೀಚೆಗೆ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದರು.

ಈ ಸಂದರ್ಶನದಲ್ಲಿ ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್‌ ಕಶ್ಯಪ್‌, ʼದಿ ಕೇರಳ ಸ್ಟೋರಿʼ ಚಿತ್ರವನ್ನು ನಿಷೇಧಿಸಿದ ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ಖಂಡಿಸಿರುವ ಬಗ್ಗೆ ಉಲ್ಲೇಖಿಸಿ ನಿರೂಪಕರು ನವಾಜುದ್ದೀನ್‌ ಸಿದ್ದಿಕಿಗೆ ಪ್ರಶ್ನೆ ಹಾಕಿದ್ದರು. ʼದಿ ಕೇರಳ ಸ್ಟೋರಿʼ ನಿಷೇಧದ ಕುರಿತ ಪ್ರಶ್ನೆಗೆ ಉತ್ತಿರಿಸಿದ್ದ ನವಾಜುದ್ದೀನ್‌, “ಯಾವುದೇ ಚಿತ್ರ ಅಥವಾ ಕೃತಿ ಯಾರಿಗಾದರೂ ನೋವುಂಟು ಮಾಡುತ್ತಿದ್ದರೆ, ಅದು ತಪ್ಪು. ನಾವು, ಪ್ರೇಕ್ಷಕರನ್ನು ನೋಯಿಸುವ ಸಲುವಾಗಿ ಅಥವಾ ಅವರ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಸಲುವಾಗಿ ಸಿನಿಮಾಗಳನ್ನು ಮಾಡುವುದಿಲ್ಲ” ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ನವಾಜುದ್ದೀನ್‌ ʼದಿ ಕೇರಳ ಸ್ಟೋರಿʼ ಚಿತ್ರದ ಮೇಲೆ ನಿರ್ಬಂಧ ಹೇರಿರುವುದನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಹಲವು ಮಾಧ್ಯಮಗಳು ಮತ್ತು ಯುಟ್ಯೂಬ್‌ ಮಾಧ್ಯಮಗಳು ತಿರುಚಿದ ವರದಿಯನ್ನು ಭಿತ್ತರಿಸಿದ್ದವು. ಈ ವರದಿಗಳನ್ನೇ ನಂಬಿಕೊಂಡ ಕೆಲವು ನೆಟ್ಟಿಗರು ನಟನ ಮೇಲೆ ಮುಗಿಬಿದ್ದಿದ್ದರು.

ಮಾಧ್ಯಮಗಳು ತಿರುಚಿದ ಹೇಳಿಕೆಯನ್ನು ಆಧರಿಸಿ ಸುದ್ದಿ ಭಿತ್ತರಿಸಿವೆ ಎಂಬುದು ತಮ್ಮ ಗಮನಕ್ಕೆ ಬರುತ್ತಲೇ ಟ್ವೀಟ್‌ ಮಾಡಿರುವ ನವಾಜುದ್ದೀನ್‌, “ವೀಕ್ಷಣೆಯನ್ನು ಗಿಟ್ಟಿಸಿಕೊಳ್ಳುವ ಸಲುವಾಗಿ ಈ ರೀತಿ ಸುಳ್ಳು ಸುದ್ದಿಯನ್ನು ಹರಡುವುದನ್ನು ದಯವಿಟ್ಟು ನಿಲ್ಲಿಸಿ. ಇದು ಟಿಆರ್‌ಪಿಗಾಗಿ ಮಾಡುವ ಕೀಳುಮಟ್ಟದ ಕೆಲಸ. ಯಾವುದೇ ಚಿತ್ರವನ್ನೂ ನಿಷೇಧಿಸುವ ಬಗ್ಗೆ ನಾನು ಎಂದಿಗೂ ಮಾತನಾಡಿಲ್ಲ. ಚಿತ್ರಗಳನ್ನು ನಿಷೇಧಿಸುವುದನ್ನು ನಿಲ್ಲಿಸಿ. ಸುಳ್ಳು ಸುದ್ದಿ ಹಬ್ಬಿಸುವುದನ್ನೂ ನಿಲ್ಲಿಸಿ” ಎಂದು ಮಾಧ್ಯಮಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಅನುರಾಗ್‌ ಕಶ್ಯಪ್‌ ʼದಿ ಕೇರಳ ಸ್ಟೋರಿʼ ಚಿತ್ರವನ್ನು ನಿಷೇಧಿಸಿದ ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ವಿರೋಧಿಸಿದ್ದರು. ಚಿತ್ರದ ಪ್ರದರ್ಶನಕ್ಕೆ ಬಂಗಾಳದಲ್ಲಿ ನಿರ್ಬಂಧ ಹೇರಿರುವುದನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಅನುರಾಗ್‌, “ನೀವು ಆ ಸಿನಿಮಾವನ್ನು ಒಪ್ಪುತ್ತಿರೋ, ಇಲ್ಲವೋ, ಆ ಸಿನಿಮಾ ಷಡ್ಯಂತ್ರದ ಭಾಗವಾಗಿರಲಿ ಅಥವಾ ಷಡ್ಯಂತ್ರಕ್ಕೆ ತಿರುಗೇಟು ನೀಡುವ ಕಥಾಹಂದರವನ್ನೇ ಹೊಂದಿರಲಿ, ಆಕ್ರಮಣಕಾರಿ ಪರಿಭಾಷೆಯನ್ನೇ ಹೊಂದಿರಲಿ. ಆದರೆ, ಚಿತ್ರವೊಂದನ್ನು ನಿಷೇಧಿಸುವುದು ತರವಲ್ಲ” ಎಂದಿದ್ದರು.

ಕೇರಳದ ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆಗೆ ಸೇರ್ಪಡೆ ಮಾಡಲಾಗಿದೆ ಎಂಬ ಎಳೆಯ ಸುತ್ತ ಮೂಡಿಬಂದಿರುವ ʼದಿ ಕೇರಳ ಸ್ಟೋರಿʼ ಚಿತ್ರವನ್ನು ಮೇ 8ರಂದು ಪಶ್ಚಿಮ ಬಂಗಾಳ ಸರ್ಕಾರ ನಿಷೇಧಿಸಿತ್ತು. ಚಿತ್ರದ ನಿಷೇಧವನ್ನು ಪ್ರಶ್ನಿಸಿ ನಿರ್ಮಾಪಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್‌, ಪಶ್ಚಿಮ ಬಂಗಾಳ ಸರ್ಕಾರದ ನಿಷೇಧದ ಆದೇಶಕ್ಕೆ ತಡೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...