​’ಭಾರತ ಬದಲಾಗಿಲ್ಲ, ಪುರುಷರಿಗೆ ಇಂದಿಗೂ ವರ್ಜಿನ್ ಪತ್ನಿಯೇ ಬೇಕು’: ನಟಿ ನೀನಾ ಗುಪ್ತಾ ಕಟು ನುಡಿ

Date:

ದೇಶ ಎಷ್ಟೇ ಮುಂದುವರಿದಿದೆ ಎಂದು ಹೇಳಿಕೊಂಡರೂ ‘ಭಾರತ ಬದಲಾಗಿಲ್ಲ’ ಹಾಗೂ ಇಲ್ಲಿನ ಕುಟುಂಬಗಳಲ್ಲಿ ಇಂದಿಗೂ ಪಿತೃಪ್ರಭುತ್ವ ಮತ್ತು ಮಹಿಳೆಯರ ಮೇಲಿನ ನಿರ್ಬಂಧಗಳು ಹಾಗೆಯೇ ಉಳಿದಿವೆ ಎಂದು ಹಿರಿಯ ನಟಿ, ‘ಪಂಚಾಯತ್’ ಖ್ಯಾತಿಯ ನೀನಾ ಗುಪ್ತಾ ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಶುಭಂಕರ್ ಮಿಶ್ರಾ ಅವರೊಂದಿಗಿನ ಸಂವಾದದಲ್ಲಿ ಮಾತನಾಡಿದ ಅವರು, ಮಹಿಳೆಯರು ಮದುವೆಯ ನಂತರ ಗಂಡನ ಮನೆಯಲ್ಲಿ ಎದುರಿಸುವ ಸಂಕಷ್ಟಗಳ ಬಗ್ಗೆ ತಮ್ಮದೇ ಕುಟುಂಬದ ಉದಾಹರಣೆಗಳನ್ನು ನೀಡಿ ವಿವರಿಸಿದ್ದಾರೆ.

​ಭಾರತೀಯ ಸಮಾಜದಲ್ಲಿ ಪುರುಷರ ಮನಸ್ಥಿತಿ ಬಗ್ಗೆ ಮಾತನಾಡಿದ ನೀನಾ, ನಮ್ಮ ದೇಶದ ಪುರುಷರು ಇಂದಿಗೂ ‘ಕನ್ಯತ್ವ’ ಇರುವ (ವರ್ಜಿನ್) ಹುಡುಗಿಯನ್ನೇ ಮದುವೆಯಾಗಲು ಬಯಸುತ್ತಾರೆ ಎಂದು ಕಟುವಾಗಿ ನುಡಿದಿದ್ದಾರೆ. ಸಮಾಜ ಬದಲಾಗಿದೆ ಎಂಬ ವಾದವನ್ನು ತಳ್ಳಿಹಾಕಿದ ಅವರು, “ಏನು ಬದಲಾಗಿದೆ? ನೀವೇ ಹೇಳಿ. ನೀವು ಮತ್ತು ನಾನು ಅಲ್ಪಸಂಖ್ಯಾತರು. ಚೆನ್ನಾಗಿ ಬಟ್ಟೆ ಧರಿಸುವ, ಇಂಗ್ಲಿಷ್ ಮಾತನಾಡುವ ನಾವು ‘ನಿಜವಾದ ಭಾರತ’ವನ್ನು ಪ್ರತಿನಿಧಿಸುವುದಿಲ್ಲ. ವಾಸ್ತವದಲ್ಲಿ ಭಾರತ ಬದಲಾಗಿಲ್ಲ. ಇಲ್ಲಿನ ಮಹಿಳೆಯರು ಇಂದಿಗೂ ತಲೆಯ ಮೇಲೆ ಸೆರಗು ಹಾಕಿಕೊಂಡು ಮಾವನ ಕಾಲಿಗೆ ನಮಸ್ಕರಿಸುತ್ತಾರೆ,” ಎಂದು ವಾಸ್ತವವನ್ನು ಬಿಚ್ಚಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬ್ಯಾಟ್ ಬೀಸಿದ ‘ಫಿನಿಶರ್’ಗೆ ಕ್ಲೀನ್ ಬೌಲ್ಡ್ ಆದ ಸಂಸದೆ

​ಮಹಿಳೆಯರಿಗೆ ಮದುವೆಯ ನಂತರ ತಮ್ಮ ಇಷ್ಟದ ಸಣ್ಣಪುಟ್ಟ ವಿಷಯಗಳನ್ನೂ ಪೂರೈಸಿಕೊಳ್ಳಲು ಸಾಧ್ಯವಾಗದ ಸ್ಥಿತಿ ಇದೆ ಎಂಬುದಕ್ಕೆ ನೀನಾ ಗುಪ್ತಾ ತಮ್ಮ ಕುಟುಂಬದ ಎರಡು ಉದಾಹರಣೆಗಳನ್ನು ನೀಡಿದ್ದಾರೆ. ತಮ್ಮ ತಂದೆಯ ಕಡೆಯ ಸಂಬಂಧಿಯೊಬ್ಬರು ಮುಂಬೈನ ದೊಡ್ಡ ಹಣಕಾಸು ಸಂಸ್ಥೆಯಲ್ಲಿ ಕೆಲಸ ಮಾಡುವ ವ್ಯಕ್ತಿಯನ್ನು ಮದುವೆಯಾದರು. ಆ ಹುಡುಗಿ ಸಾಯಿಬಾಬಾ ಭಕ್ತೆ. ಆಕೆ ತನ್ನ ಕೋಣೆಯಲ್ಲಿ ಸಾಯಿಬಾಬಾ ಫೋಟೋ ಇಡಲು ಬಯಸಿದಾಗ, ಆಕೆಯ ಅತ್ತೆ ಅದಕ್ಕೆ ಒಪ್ಪಲಿಲ್ಲ, ಬದಲಿಗೆ ತಾವು ಪೂಜಿಸುವ ಗುರುಗಳ ಫೋಟೋವನ್ನೇ ಹಾಕುವಂತೆ ಒತ್ತಾಯಿಸಿದರು ಎಂದು ನೀನಾ ವಿವರಿಸಿದ್ದಾರೆ.

ಇದೇ ರೀತಿ ತಮ್ಮ ಸಹೋದರನ ಮಗಳಿಗೆ ಮದುವೆಯ ನಂತರ, ಆಕೆಯ ಮಲಗುವ ಕೋಣೆಯ ಬೆಡ್‌ಸೈಡ್ ಟೇಬಲ್ ಮೇಲೆ ತನ್ನ ತವರು ಮನೆಯವರ ಫೋಟೋ ಇಟ್ಟುಕೊಳ್ಳಲೂ ಅತ್ತೆ ಒಪ್ಪಿಗೆ ನೀಡಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

​ಹೀಗಿರುವಾಗ ಸಮಾಜ ಬದಲಾಗಿದೆ ಎಂದು ಹೇಗೆ ಹೇಳಲು ಸಾಧ್ಯ? ಮಹಿಳೆಯರ ಸ್ಥಿತಿಗತಿ ಬದಲಾಗಲು ನಾವಿನ್ನೂ ಬಹುದೂರ ಸಾಗಬೇಕಿದೆ ಎಂದು ನೀನಾ ಬಹಳ ಬೇಸರದಿಂದಲೇ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...