ಕನ್ನಡದ ‘ಬಿಗ್ ಬಾಸ್’ ಸೀಸನ್ 12 ರಿಯಾಲಿಟಿ ಶೋಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೋಟಿಸ್ ನೀಡಿದೆ. ಬಿಗ್ ಬಾಸ್ ಮನೆಯಿರುವ ಸ್ಟುಡಿಯೋವನ್ನು ತಕ್ಷಣವೇ ಬಂದ್ ಮಾಡುವಂತೆ ತಾಕೀತು ಮಾಡಿದೆ ಎಂದು ವರದಿಯಾಗಿದೆ.
ಬಿಗ್ಬಾಸ್ ಆಯೋಜಕರು ಸರಿಯಾದ ರೀತಿಯಲ್ಲಿ ತಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಿಸಿಲ್ಲ ಎಂಬ ಕಾರಣಕ್ಕೆ ನೋಟಿಸ್ ನೀಡಲಾಗಿದೆ. ಮನೆಯನ್ನು ಮುಚ್ಚುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಬಿಡದಿ ಸಮೀಪ ಇರುವ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ಮನೆ ನಿರ್ಮಿಸಲಾಗಿದೆ. ಈ ಸ್ಟುಡಿಯೋದಲ್ಲಿ ಉಂಟಾಗುತ್ತಿರುವ ತಾಜ್ಯವನ್ನು ಸೂಕ್ತ ರೀತಿಯಲ್ಲಿ ಸಂಸ್ಕರಣೆ ಮತ್ತು ವಿಲೇವಾರಿ ಮಾಡಿಲ್ಲ.ಜಾಲಿವುಡ್ ಸ್ಟುಡಿಯೋದಿಂದ ದೊಡ್ಡ ಪ್ರಮಾಣದ ತಾಜ್ಯ ನೀರು ಹೊರಬರುತ್ತಿದೆ. ಅದನ್ನು ಸರಿಯಾಗಿ ಸಂಸ್ಕರಿಸದ ಕಾರಣ, ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಪೇಪರ್ ತಟ್ಟೆ, ಲೋಟ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ. ಮಾತ್ರವಲ್ಲದೆ, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಗತ್ಯ ಅನುಮತಿಯನ್ನೂ ಪಡೆದಿಲ್ಲ ಎಂದು ಆರೋಪಿಸಲಾಗಿದೆ.
ಈ ಆರೋಪಗಳ ಕಾರಣಕ್ಕಾಗಿಯೇ ಮನೆಯನ್ನು ಬಂದ್ ಮಾಡುವಂತೆ ನೋಡಿಸ್ ನೀಡಲಾಗಿದೆ. ಹೀಗಾಗಿ, ಬಿಗ್ ಬಾಸ್ ಮನೆ ಮುಚ್ಚುವ ಅಥವಾ ಶೋ ಸ್ಥತಿಗಗೊಳ್ಳಬಹುದು ಎಂದು ಹೇಳಲಾಗುತ್ತಿದೆ.




