ನಟ ಅಕ್ಷಯ್ ಕುಮಾರ್ ಕೆನ್ನೆಗೆ ಬಾರಿಸಿದರೆ 10 ಲಕ್ಷ ಬಹುಮಾನ ಘೋಷಿಸಿದ ಬಲಪಂಥೀಯ ಮುಖಂಡ

Date:

  • ‘ಓ ಮೈ ಗಾಡ್ 2’ ಚಿತ್ರದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ಆರೋಪ
  • ಮೊದಲ ದಿನವೇ 10 ಕೋಟಿ ಗಳಿಸಿದ ಚಿತ್ರ; ಹಲವರಿಂದ ಮೆಚ್ಚುಗೆ

ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಪಂಕಜ್ ತ್ರಿಪಾಠಿ ಅಭಿನಯದ ‘ಓಎಂಜಿ 2(ಓ ಮೈ ಗಾಡ್ 2) ಚಿತ್ರವು ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದ್ದು, ಮೊದಲ ದಿನವೇ 10 ಕೋಟಿ ಗಳಿಸಿದೆ.

ಆದರೆ, ಚಿತ್ರದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸುತ್ತಿರುವ ಕೆಲವು ಬಲಪಂಥೀಯ ಸಂಘಟನೆಗಳು, ಚಿತ್ರಕ್ಕೆ ದೇಶದಲ್ಲಿ ನಿಷೇಧ ಹೇರುವಂತೆ ಒತ್ತಡ ಹಾಕುತ್ತಿದ್ದಾರೆ.

ಈ ನಡುವೆ ಅಕ್ಷಯ್ ಕುಮಾರ್ ಅವರಿಗೆ ಕಪಾಳಮೋಕ್ಷ ಅಥವಾ ಮುಖಕ್ಕೆ ಉಗುಳಿದರೆ ₹10 ಲಕ್ಷ ಬಹುಮಾನ ನೀಡುವುದಾಗಿ ರಾಷ್ಟ್ರೀಯ ಹಿಂದೂ ಪರಿಷತ್ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಚಿತ್ರವು ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದೆ ಮತ್ತು ಶಿವ ದೇವರ ಪ್ರತಿಷ್ಠೆಗೆ ಕಳಂಕ ತಂದಿದೆ’ ಆರೋಪಿಸಿರುವ ಸಂಘಟನೆಯ ಮುಖಂಡ ಗೋವಿಂದ ಪರಶಾರ್, ಸಿನಿಮಾವನ್ನು ನಿಷೇಧಿಸುವಂತೆ ಆಗ್ರಹಿಸಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸೆನ್ಸಾರ್ ಮಂಡಳಿಯಿಂದ ಸುಮಾರು 27 ಮಾರ್ಪಾಡುಗಳೊಂದಿಗೆ ಬಿಡುಗಡೆಗೊಂಡಿರುವ ಓಎಂಜಿ 2 ಚಿತ್ರದ ಬಗ್ಗೆ ಸಿನಿಮಾ ವಿಮರ್ಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ‘ಈಗಿನ ಸಂದರ್ಭದಲ್ಲಿ ಬರಲೇಬೇಕಾಗಿದ್ದ ಚಿತ್ರ ಇದಾಗಿತ್ತು. ಹಿಂದೂ ಧರ್ಮಕ್ಕೆ ಎಲ್ಲೂ ಧಕ್ಕೆಯಾಗಿಲ್ಲ. ಪ್ರತಿಯೊಬ್ಬರೂ ನೋಡಲೇಬೇಕಾದ ಸಿನಿಮಾ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಒಎಂಜಿ 2’ ಸಿನಿಮಾ ಲೈಂಗಿಕ ಶಿಕ್ಷಣದ ಬಗ್ಗೆ ಇದೆ. ಈ ಕಾರಣಕ್ಕೆ ಸಿನಿಮಾಗೆ ಸೆನ್ಸಾರ್ ಮಾಡಲು ಸಾಕಷ್ಟು ಸಮಯ ಹಿಡಿದಿತ್ತು. ಅನೇಕ ಮಾರ್ಪಾಡುಗಳನ್ನು ಮಾಡಿದ್ದಲ್ಲದೆ, ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ನೀಡಲಾಗಿದೆ. ಈ ಕಾರಣದಿಂದ ಸಿನಿಮಾಗೆ ಹಿನ್ನಡೆ ಆಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ರೀತಿ ಆಗಿಲ್ಲ’ ಎಂದು ಸಿನಿಮಾ ನೋಡಿದ ಅನೇಕರು ಟ್ವಿಟರ್ ಮೂಲಕ ವಿಮರ್ಶೆ ತಿಳಿಸುತ್ತಿದ್ದಾರೆ.

ಈ ಚಿತ್ರವು ಹದಿಹರೆಯದವರ ವಿವಿಧ ಸಮಸ್ಯೆ ಮತ್ತು ಲೈಂಗಿಕ ಶಿಕ್ಷಣದ ಪ್ರಾಮುಖ್ಯತೆ ಹಾಗೂ ಧರ್ಮದಲ್ಲಿನ ಸೂಕ್ಷ್ಮ ಅಂಶಗಳನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ.

ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಹಾಗೂ ಪಂಕಜ್ ತ್ರಿಪಾಠಿ, ಯಾಮಿ ಗೌತಮ್ ನಟಿಸಿದ್ದು, ಅಮಿತ್ ರೈ ಬರೆದು ನಿರ್ದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...