ತಮ್ಮನ ಚಿತ್ರಕ್ಕೆ ಪ್ರಜ್ವಲ್‌ ದೇವರಾಜ್‌ ಪ್ರೊಡ್ಯೂಸರ್;‌ ಚಿತ್ರದ ಫರ್ಸ್ಟ್‌ ‌ಲುಕ್ ರಿಲೀಸ್

Date:

ಸ್ಯಾಂಡಲ್‌ವುಡ್‌ ಡೈನಮಿಕ್‌ ಪ್ರಿನ್ಸ್‌ ಪ್ರಜ್ವಲ್‌ ದೇವರಾಜ್ ಮೊದಲ ಬಾರಿಗೆ ಪ್ರೊಡ್ಯೂಸರ್‌ ಆಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಸದ್ಯ ಸಹೋದರ ಪ್ರಣಮ್‌ ದೇವರಾಜ್‌ ಚಿತ್ರದ ನಾಯಕನಾಗಿದ್ದು, ಚಿತ್ರದ ಫರ್ಸ್ಟ್‌ ಲುಕ್‌ ರಿಲೀಸ್‌ ಆಗಿದೆ.

ಡೈನಮಿಕ್‌ ವೆಂಚರ್ಸ್‌ ಹಾಗೂ ಪುರಾತನ ಫಿಲಂಸ್ ಪ್ರೊಡಕ್ಷನ್‌ ಸಹಯೋಗದಲ್ಲಿ ಚಿತ್ರ ಮೂಡಿಬರಲಿದೆ. ಎಂಜಿಆರ್‌ ಚಿತ್ರದ ಶೀರ್ಷಿಕೆ. ನಾಯಕ ಪ್ರಣಮ್‌ ಅವರ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್‌ ಹಾಗೂ ರಗಡ್‌ ಲುಕ್‌ನ ಪೋಸ್ಟರ್‌ ಒಂದನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ.

ಇದೊಂದು ಸಂತಸದ ಕ್ಷಣ. ನಾನು ಚಿತ್ರರಂಗಕ್ಕೆ ಬಂದು 30 ವರ್ಷಗಳ ಬಳಿಕ ನಿರ್ಮಾಪಕನಾದೆ. ಈಗ ನನ್ನ ಮಗ ನಿರ್ಮಾಪಕನ ಜವಾಬ್ದಾರಿ ಹೊತ್ತಿದ್ದಾನೆ. ನಮಗೆ ಸಿನಿಮಾ ಬಿಟ್ಟು ಬೇರೇನೂ ಗೊತ್ತಿಲ್ಲ. ಇದರಲ್ಲೇ ಏನಾದರೂ ಮಾಡಬೇಕೆಂಬ ಆಸೆಯಿರುತ್ತದೆ. ಪುರಾತನ ಫಿಲಂಸ್‌ನವರು ಮಗನ ಜೊತೆ ಎರಡನೇ ಸಿನಿಮಾ ಮಾಡ್ತಿದಾರೆ. ನನಗೆ ಇಷ್ಟವಾದ ಚರಣ್‌ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಬಹುತೇಕರು ನಮ್ಮನ್ನು ಅರ್ಥಮಾಡಿಕೊಂಡವರೇ ಚಿತ್ರದ ಕೆಲಸ ಮಾಡಿದ್ದಾರೆ. ಇದು ಒಂದು ರೀತಿಯ ಖುಷಿ ತಂದಿದೆ. ಚಿತ್ರಕ್ಕೆ ಶುಭವಾಗಲಿ ಎಂದರು ಹಿರಿಯ ನಟ ದೇವರಾಜ್.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 2026 01 29T191629.289

ನಿರ್ದೇಶಕ ಶ್ರೀಕಾಂತ್‌ ಹುಣಸೂರು ಮಾತನಾಡಿ, ಪ್ರಣಂ ಜೊತೆ ಮುತ್ತಣ್ಣ ಬಳಿಕ ಇದು ಎರಡನೇ ಚಿತ್ರ. ಅವರನ್ನು ವಿಭಿನ್ನ ರೀತಿಯಲ್ಲಿ ತೋರಿಸಲು ಪ್ರಯತ್ನಿಸಿದ್ದೇನೆ. ಚಿತ್ರದ ಟೈಟಲ್‌ ಸಮಸ್ಯೆಯಾಗಬಹುದು, ಆದರೆ ಕಾನ್ಸೆಪ್ಟ್‌ ಬಹಳ ಚೆನ್ನಾಗಿದೆ. ಮುಂದಿನ ದಿನಗಳಲ್ಲಿ ಎಂಜಿಆರ್‌ ಎಂದರೇನು ಎಂದು ತಿಳಿಸುತ್ತೇವೆ. 2005ರಲ್ಲಿ ನಡೆದ ಕಥೆಯಾಧರಿಸಿ ಚಿತ್ರ ತಯಾರಾಗಲಿದೆ. ಮಾರ್ಚ್‌ ಎಂಡ್‌ ಅಥವಾ ಯುಗಾದಿ ವೇಳೆಗೆ ಚಿತ್ರದ ಮುಹೂರ್ತ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಬೆಂಗಳೂರು | ಜ.29ರಂದು ‘ಗೌರಿ ದಿನ’ ಕಾರ್ಯಕ್ರಮ; ನಟ ದುನಿಯಾ ವಿಜಯ್ ಭಾಗಿ!

ಸ್ಕೇಟಿಂಗ್‌ ಕೃಷ್ಣ ಅವರ ಛಾಯಾಗ್ರಹಣ ಹಾಗೂ ಚರಣ್‌ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿರಲಿದೆ. ತಂಡ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...