ಸರ್ಕಾರಿ ಬಂಗಲೆ ತೆರವಿಗೆ ಸೂಚನೆ; ರಾಹುಲ್‌ ನಮ್ಮ ಮನೆಗೆ ಬನ್ನಿ ಎಂದ ಪ್ರಕಾಶ್‌ ರಾಜ್‌

Date:

  • ರಾಹುಲ್‌ ಗಾಂಧಿ ಅನರ್ಹತೆ ವಿರೋಧಿಸಿದ್ದ ಪ್ರಕಾಶ್‌ ರಾಜ್‌
  • ಇಡೀ ಭಾರತವೇ ನಿಮ್ಮ ಮನೆ ಎಂದ ಬಹುಭಾಷಾ ನಟ

ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಲೋಕಸಭೆ ಸಚಿವಾಲಯ ಸೂಚಿಸಿದ ಬೆನ್ನಲ್ಲೇ ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಮ್ಮ ಮನೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿ ಸೂರತ್‌ ನ್ಯಾಯಾಲಯ ರಾಹುಲ್‌ ಗಾಂಧಿಯವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ, ಜಾಮೀನು ನೀಡಿದ ಬಳಿಕ ಲೋಕಸಭಾ ಸಚಿವಾಲಯ ಅವರನ್ನು ಸದಸ್ಯ ಸ್ಥಾನದಿಂದ ಅರ್ನಹಗೊಳಿಸಿತ್ತು. ಇದಾದ ಕೆಲ ದಿನಕ್ಕೆ ರಾಹುಲ್‌ ಗಾಂಧಿ ವಾಸವಿದ್ದ ದೆಹಲಿಯ ತುಘಲಕ್‌ ರಸ್ತೆಯ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸಚಿವಾಲಯ ಸೂಚಿಸಿತ್ತು. ಮಾರ್ಚ್‌ 28ರಂದು ಸಚಿವಾಲಯದ ಉಪ ಕಾರ್ಯದರ್ಶಿ ಮೋಹಿತ್‌ ರಾಜನ್‌ ಅವರಿಗೆ ಪತ್ರ ಬರೆಯುವ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್‌, ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವುದಾಗಿ ತಿಳಿಸಿದ್ದಾರೆ.

ರಾಹುಲ್‌ ಗಾಂಧಿ ಲೋಕಸಭೆಯ ಉಪ ಕಾರ್ಯದರ್ಶಿಗಳಿಗೆ ಬರೆದ ಪತ್ರವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಕಾಶ್‌ ರಾಜ್‌, “ಪ್ರೀತಿಯ ರಾಹುಲ್‌ ಗಾಂಧಿ, ಈ ಸರ್ವಾಧಿಕಾರಿಗಳಿಂದ ದೇಶವನ್ನು ಕಾಪಾಡಲು ಪಣ ತೊಟ್ಟಿರುವ ಪ್ರತಿಯೊಬ್ಬರ ಮನೆಯೂ ನಿಮ್ಮದೇ. ಭಾರತ ನಿಮ್ಮ ಮನೆ, ನಿಮಗೆ ನನ್ನ ಮನೆಗೆ ಆದರದ ಸ್ವಾಗತ ಕೋರುತ್ತೇನೆ. ಇನ್ನು ಹೆಚ್ಚಿನ ಶಕ್ತಿ ನಿಮ್ಮದಾಗಲಿ” ಎಂದು ಹಾರೈಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊರಳಿಗೆ ಲಕ್ಷ್ಮಿದೇವಿ ಹಾರ ಧರಿಸಿದ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ರಾಹುಲ್ ಗಾಂಧಿಯವರನ್ನು ಅನರ್ಹತೆಗೊಳಿಸಿದ ಸಂದರ್ಭದಲ್ಲೂ ಪ್ರತಿಕ್ರಿಯಿಸಿದ್ದ ಪ್ರಕಾಶ್‌ ರಾಜ್‌, “ಈ ರೀತಿ ಕೀಳುಮಟ್ಟದ, ಪ್ರಗತಿಗೆ ಮಾರಕವಾಗುಂತಹ ರಾಜನೀತಿ ಮಾಡಲು‌ ನಾಚಿಕೆಯಾಗಬೇಕು. ಇದು ದೇಶಕ್ಕಾಗಿ ನಾವೆಲ್ಲರೂ ಧ್ವನಿ ಎತ್ತಬೇಕಿರುವ ಸಂದರ್ಭ. ಇಂತಹ ಹೊತ್ತಿನಲ್ಲಿ ನಾವು ಸುಮ್ಮನೆ ಕೂತರೆ, ಇವತ್ತಿನ ನಮ್ಮ ಮೌನಕ್ಕೆ ನಾಳೆ ದಿನ ನಾವೇ ದುಬಾರಿ ಬೆಲೆ ತೆರಬೇಕಾಗುತ್ತದೆ” ಎಂದು ಜನಸಾಮಾನ್ಯರನ್ನು ಎಚ್ಚರಿಸುವ ಪ್ರಯತ್ನ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...