ಬಾಲಿವುಡ್‌ ತೊರೆದ ಅಸಲಿ ಕಾರಣ ಬಿಚ್ಚಿಟ್ಟ ಪ್ರಿಯಾಂಕಾ ಚೋಪ್ರಾ

Date:

  • 2015ರಲ್ಲಿ ಹಾಲಿವುಡ್‌ಗೆ ಹಾರಿದ್ದ ಪ್ರಿಯಾಂಕಾ ಚೋಪ್ರಾ
  • ಕರಣ್‌ ಜೋಹರ್‌ ನೇರ ಹೊಣೆ ಎಂದ ಕಂಗನಾ ರಣಾವತ್‌

ಪ್ರಿಯಾಂಕಾ ಚೋಪ್ರಾ ಸದ್ಯ ಹಾಲಿವುಡ್‌ನಲ್ಲಿ ಸ್ಟಾರ್‌ ನಟಿಯಾಗಿ ಮಿಂಚುತ್ತಿದ್ದಾರೆ. ಭಾರತದಲ್ಲೂ ಬಹು ಬೇಡಿಕೆಯ ನಟಿಯಾಗಿ ಜನಪ್ರಿಯತೆ ಗಳಿಸಿದ್ದ ಅವರು ಇದ್ದಕ್ಕಿದ್ದಂತೆ ಬಾಲಿವುಡ್‌ ತೊರೆದಿದ್ದು ಯಾಕೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ನೀಡಿದ್ದಾರೆ.

ಇತ್ತೀಚೆಗೆ ಅಮೆರಿಕದ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಪ್ರಿಯಾಂಕಾ, ತಾವು ಬಾಲಿವುಡ್‌ ತೊರೆದಿದ್ದರ ಬಗ್ಗೆ ಮಾತನಾಡಿದ್ದು, “ಬಾಲಿವುಡ್‌ನಲ್ಲಿ ನನ್ನನ್ನು ತುಳಿಯುವ ಪ್ರಯತ್ನಗಳು ನಡೆದವು. ಆಂತರಿಕ ರಾಜಕಾರಣದಿಂದಾಗಿ ಹಲವು ಸಿನಿಮಾ ಅವಕಾಶಗಳು ಕೈತಪ್ಪಿದವು. ಕೆಲವರ ಜೊತೆಗೆ ಮನಸ್ತಾಪಗಳೂ ಆದವು. ಈ ರೀತಿಯ ಕೀಳುಮಟ್ಟದ ರಾಜಕಾರಣದಿಂದ ದೂರ ಉಳಿಯಲು ನಿರ್ಧರಿಸಿ ಬಾಲಿವುಡ್‌ನಿಂದ ಹೊರಬಂದೆ” ಎಂದಿದ್ದಾರೆ.

ಪ್ರಿಯಾಂಕಾ ಚೋಪ್ರಾ ಬಾಲಿವುಡ್‌ನಲ್ಲಿ ತಾವು ಅನುಭವಿಸಿದ ಅಪಮಾನದ ಕಹಿ ಅನುಭವಗಳನ್ನು ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಬಹಿರಂಗಪಡಿಸುತ್ತಲೇ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಬಾಲಿವುಡ್‌ನ ಮತ್ತೋರ್ವ ನಟಿ ಕಂಗನಾ ರಣಾವತ್‌, “ಪ್ರಿಯಾಂಕಾ ಅವರಂತಹ ದಿಟ್ಟ ಮಹಿಳೆ ಬಾಲಿವುಡ್‌ ತೊರೆಯಲು ಕರಣ್‌ ಜೋಹರ್‌ ಕಾರಣ. ಆಕೆಗೆ ಸಿನಿಮಾ ಅವಕಾಶ ಸಿಗದಂತೆ ಮಾಡಿ, ಬಾಲಿವುಡ್‌ನಿಂದ ಆಚೆಗಟ್ಟಿದರು. ಈ ವಿಚಾರ ಚಿತ್ರೋದ್ಯಮದಲ್ಲಿರುವ ಎಲ್ಲರಿಗೂ ಗೊತ್ತಿದೆ. ಸಿನಿಮಾರಂಗದ ಯಾವುದೇ ಹಿನ್ನೆಲೆ ಇರದ ಪ್ರಿಯಾಂಕಾ ಚೋಪ್ರಾ ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವುದನ್ನು ಸಹಿಸದ ಕರಣ್‌ ಜೋಹರ್‌ ಮತ್ತು ಆತನ ಸಹಚರರು ಆಕೆಗೆ ಕಿರುಕುಳ ನೀಡಿದ್ದಲ್ಲದೆ, ಚಾರಿತ್ರ್ಯಹರಣಕ್ಕೂ ಯತ್ನಿಸಿದರು. ಸಿನಿಮಾ ಹಿನ್ನೆಲೆಯೇ ಇಲ್ಲದೆ ಚಿತ್ರರಂಗದಲ್ಲಿ ಹೆಸರು ಮಾಡಿದ ಅಮಿತಾಬ್‌ ಬಚ್ಚನ್‌, ಶಾರುಖ್‌ ಖಾನ್‌ ಸೇರಿದಂತೆ ಹೊರಗಿನಿಂದ ಬರುವ ಎಲ್ಲ ಪ್ರತಿಭೆಗಳಿಗೆ ಈ ರೀತಿಯ ಕಿರುಕುಳಗಳು ಸಾಮಾನ್ಯವಾಗಿ ಬಿಟ್ಟಿದೆ. ಚಿತ್ರರಂಗದ ವಾತಾವರಣವನ್ನು ಹದಗೆಡಿಸುತ್ತಿರುವ ಕರಣ್‌ ಜೋಹರ್‌ ಮತ್ತು ಆತನ ಗುಂಪಿನವರ ಮೇಲೆ ಕ್ರಮ ಜರುಗಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿಯನ್ನು ಓದಿದ್ದೀರಾ? ಘೋಸ್ಟ್‌ ಚಿತ್ರತಂಡ ಸೇರಿಕೊಂಡ ಅನುಪಮ್‌ ಖೇರ್‌

ಬಾಲಿವುಡ್‌ನಲ್ಲಿ ಸ್ಟಾರ್‌ ನಟಿಯಾಗಿ ಗುರುತಿಸಿಕೊಂಡಿದ್ದ ಪ್ರಿಯಾಂಕಾ ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ಬಾಲಿವುಡ್‌ ತೊರೆದಿದ್ದರು. ʼಇನ್‌ ಮೈ ಸಿಟಿʼ, ʼಎಕ್ಸಾಟಿಕ್‌ʼ, ʼಐ ಕಾಂಟ್‌ ಮೇಕ್‌ ಯು ಲವ್‌ ಮಿʼ ಅಮೆರಿಕನ್‌ ಮ್ಯೂಸಿಕ್‌ ವಿಡಿಯೋಗಳಲ್ಲಿ ಮಿಂಚಿದ ಪ್ರಿಯಾಂಕಾ, ನಂತರದ ದಿನಗಳಲ್ಲಿ ಜನಪ್ರಿಯ ʼಕ್ವಾಂಟಿಕೋʼ ವೆಬ್‌ ಸರಣಿಯಲ್ಲಿ ಪ್ರಧಾನ ಪಾತ್ರದಲ್ಲಿ ನಟಿಸುವ ಮೂಲಕ ಹಾಲಿವುಡ್‌ ಪ್ರವೇಶಿಸಿದರು. ಸದ್ಯ ಹಾಲಿವುಡ್‌ನಲ್ಲೇ ಸಕ್ರಿಯರಾಗಿರುವ ಪ್ರಿಯಾಂಕಾ, ಅಮೆರಿಕ ಮೂಲದ ಖ್ಯಾತ ಗಾಯಕ ನಿಕ್‌ ಜೋನಾಸ್‌ ಅವರನ್ನು ಮದುವೆಯಾಗಿ ಅಮೆರಿಕದಲ್ಲಿಯೇ ವಾಸವಾಗಿದ್ದಾರೆ.

ಇದೀಗ ಅವರು ನಟಿಸಿರುವ ಮತ್ತೊಂದು ಹಾಲಿವುಡ್ ಧಾರವಾಹಿ ‘ಸಿಟಾಡೆಲ್’ ಬಿಡುಗಡೆಗೆ ಸಿದ್ಧವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...