ಬಾಲಿವುಡ್‌ನಲ್ಲಿ ಆಂತರಿಕ ರಾಜಕಾರಣ ಕೊನೆಗೊಳ್ಳಬೇಕು: ಪ್ರಿಯಾಂಕಾ ಚೋಪ್ರಾ

Date:

  • ಆಂತರಿಕ ರಾಜಕಾರಣಕ್ಕೆ ಬೇಸತ್ತು ಬಾಲಿವುಡ್‌ ತೊರೆದಿದ್ದ ಪ್ರಿಯಾಂಕಾ
  • ಪ್ರತಿಭೆಯ ಆಧಾರದ ಮೇಲೆ ಅವಕಾಶ ಸಿಗಬೇಕು ಎಂದ ಸ್ಟಾರ್‌ ನಟಿ

ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಾವು ಬಾಲಿವುಡ್‌ ತೊರೆದ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದ ಪ್ರಿಯಾಂಕಾ ಚೋಪ್ರಾ ಸದ್ಯ ʼಸಿಟಾಡೆಲ್‌ʼ ವೆಬ್‌ ಸರಣಿಯ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಇದೇ ವೇಳೆ ಬಾಲಿವುಡ್‌ನಲ್ಲಿ ಆಗಬೇಕಿರುವ ಸುಧಾರಣೆಗಳ ಬಗ್ಗೆ ಚರ್ಚಿಸಿದ್ದಾರೆ.

ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಬಾಲಿವುಡ್‌ ಮಂದಿಯ ಆಂತರಿಕ ರಾಜಕಾರಣ ಬಗ್ಗೆ ಪ್ರಿಯಾಂಕಾ ಚೋಪ್ರಾ ಮುಕ್ತವಾಗಿ ಮಾತನಾಡಿದ್ದಾರೆ. “ಕಲಾವಿದರ ಪ್ರತಿಭೆ ಮತ್ತು ಬಾಲಿವುಡ್‌ನಲ್ಲಿ ಅವರಿಗೆ ಸಿಗುವ ಅವಕಾಶಗಳ ಕುರಿತು ಮಾತನಾಡುವ ಅಗತ್ಯವಿದೆ. ಒಟಿಟಿ ವೇದಿಕೆಗಳು ಜನಪ್ರಿಯಗೊಂಡಿರುವ ಇವತ್ತಿನ ಕಾಲಘಟ್ಟದಲ್ಲಿ ಕಲಾವಿದರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತಿವೆ. ಚಿತ್ರರಂಗದ ಯಾವುದೇ ಹಿನ್ನೆಲೆ ಇರದ ಹೊರಗಿನ ಪ್ರತಿಭೆಗಳು ಕೂಡ ಹೆಚ್ಚಾಗಿ ಕಾಣ ಸಿಗುತ್ತಿರುವುದು ಖುಷಿಯ ಸಂಗತಿ. ಆದರೆ, ನಾವು ಬಾಲಿವುಡ್‌ ಪ್ರವೇಶಿಸಿದ ಕಾಲದಲ್ಲಿ ಹೀಗಿರಲಿಲ್ಲ. ಸಿನಿಮಾಗಳಿಗೆ ಕಲಾವಿದರನ್ನು ಆಯ್ಕೆ ಮಾಡುವ ಪ್ರಕ್ರಿಯೆಯ ಹಿಂದೆ ರಾಜಕಾರಣವೇ ನಡೆಯುತ್ತಿತ್ತು. ಕಲಾವಿದರ ಆಯ್ಕೆಯ ತೀರ್ಮಾನ ನಿರ್ದೇಶಕರದ್ದಾಗಿರಬೇಕೇ ಹೊರತು ಅದರ ಹಿಂದೆ ರಾಜಕಾರಣ ಇರಬಾರದು. ಪ್ರತಿಭೆಯ ಆಧಾರದ ಮೇಲೆ ಕಲಾವಿದರ ಆಯ್ಕೆ ಪ್ರಕ್ರಿಯೆ ನಡೆಯಬೇಕು. ಇವತ್ತಿಗೂ ಬಾಲಿವುಡ್‌ನಲ್ಲಿ ಆಂತರಿಕ ರಾಜಕಾರಣ ಚಾಲ್ತಿಯಲ್ಲಿದೆ. ಅದನ್ನು ಮಟ್ಟ ಹಾಕದ ಹೊರತು ಹೊಸ ಮುಖಗಳಿಗೆ ಇನ್ನಷ್ಟು ಹೆಚ್ಚು ಅವಕಾಶ ಸಿಗುವುದಿಲ್ಲ” ಎಂದಿದ್ದಾರೆ.

ಕೆಲ ದಿನಗಳ ಹಿಂದೆ ಅಮೆರಿಕದ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಪ್ರಿಯಾಂಕಾ, ತಾವು ಬಾಲಿವುಡ್‌ ತೊರೆದಿದ್ದರ ಬಗ್ಗೆ ಮಾತನಾಡಿದ್ದರು. “ಬಾಲಿವುಡ್‌ನಲ್ಲಿ ನನ್ನನ್ನು ತುಳಿಯುವ ಪ್ರಯತ್ನಗಳು ನಡೆದವು. ಆಂತರಿಕ ರಾಜಕಾರಣದಿಂದಾಗಿ ಹಲವು ಸಿನಿಮಾ ಅವಕಾಶಗಳು ಕೈತಪ್ಪಿದವು. ಕೆಲವರ ಜೊತೆಗೆ ಮನಸ್ತಾಪಗಳೂ ಆದವು. ಈ ರೀತಿಯ ಕೀಳುಮಟ್ಟದ ರಾಜಕಾರಣದಿಂದ ದೂರ ಉಳಿಯಲು ನಿರ್ಧರಿಸಿ ಬಾಲಿವುಡ್‌ನಿಂದ ಹೊರಬಂದೆ” ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಟ ಚೇತನ್‌ ವೀಸಾ ರದ್ದು: ಸರ್ಕಾರದ ಅತಿರೇಕ ಎಂದ ಕಿಶೋರ್‌

ಪ್ರಿಯಾಂಕಾ ಚೋಪ್ರಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ʼಸಿಟಾಡೆಲ್‌ʼ ವೆಬ್‌ ಸರಣಿ ಏಪ್ರಿಲ್‌ 28ರಂದು ʼಅಮೆಜಾನ್‌ ಪ್ರೈಂʼ ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಲಿದೆ. ಹಾಲಿವುಡ್‌ನ ಖ್ಯಾತ ನಟ ರಿಚರ್ಡ್‌ ಮ್ಯಾಡನ್‌ ಈ ಸರಣಿಯಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...