ನಷ್ಟದ ಬೆನ್ನಲ್ಲೇ 50 ಮಲ್ಟಿಪ್ಲೆಕ್ಸ್‌ ಸ್ಕ್ರೀನ್‌‌ ಮುಚ್ಚಲು ಸಜ್ಜಾದ ‘ಪಿವಿಆರ್ ಐನಾಕ್ಸ್’

Date:

  • ಮೊದಲ ತ್ರೈಮಾಸಿಕದಲ್ಲಿ 300 ಕೋಟಿ ರೂಪಾಯಿಗೂ ಅಧಿಕ ನಷ್ಟ
  • ಐನಾಕ್ಸ್‌ ಜೊತೆಗಿನ ಒಪ್ಪಂದದಿಂದ ಸಂಕಷ್ಟಕ್ಕೆ ಸಿಲುಕಿದ ಪಿವಿಆರ್‌

ದೇಶದ ಅತಿದೊಡ್ಡ ಮಲ್ಟಿಪ್ಲೆಕ್ಸ್ ಆಪರೇಟರ್ ಎನ್ನಿಸಿಕೊಂಡಿರುವ ಪಿವಿಆರ್ ಸಂಸ್ಥೆ ಬಹುಕೋಟಿ ನಷ್ಟದಲ್ಲಿದ್ದು, ಭಾರತ ಮತ್ತು ಶ್ರೀಲಂಕಾದಲ್ಲಿರುವ ‘ಪಿವಿಆರ್ ಐನಾಕ್ಸ್’ ಸ್ಕ್ರೀನ್‌‌ಗಳ ಪೈಕಿ 50 ಸ್ಕ್ರೀನ್‌‌ಗಳನ್ನು ಮುಚ್ಚಲು ಸಂಸ್ಥೆಯ ಆಡಳಿತ ಮಂಡಳಿ ನಿರ್ಧರಿಸಿದೆ ಎನ್ನಲಾಗಿದೆ.

ಮೊದಲ ತ್ರೈಮಾಸಿಕ ಅವಧಿಯಲ್ಲಿ ಅಂದರೆ, 2023ರ ಜನವರಿಯಿಂದ ಮಾರ್ಚ್ ಅಂತ್ಯದ ‌ವರೆಗೆ‌‌ ಸಂಸ್ಥೆ ಒಟ್ಟು 333 ಕೋಟಿ ರೂಪಾಯಿಗಳಷ್ಟು ನಷ್ಟ ಅನುಭವಿಸಿದೆ. ಹೀಗಾಗಿ ಮುಂದಿನ ಆರು ತಿಂಗಳ ಅವಧಿಯಲ್ಲಿ ನಷ್ಟದಲ್ಲಿರುವ 50 ಸ್ಕ್ರೀನ್‌‌ಗಳನ್ನು ಗುರುತಿಸಿ ಅಂತಹ ಸ್ಕ್ರೀನ್ ‌ಗಳಲ್ಲಿ ಚಿತ್ರ ಪ್ರದರ್ಶನ ನಿಲ್ಲಿಸಲಾಗುವುದು ಎಂದು ಆಡಳಿತ ಮಂಡಳಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ವರೆಗೂ ಬೇರೆಯಾಗಿದ್ದ ಪಿವಿಆರ್ ಮತ್ತು ಐನಾಕ್ಸ್ ಸಂಸ್ಥೆಗಳು ಮಲ್ಟಿಪ್ಲೆಕ್ಸ್ ಆಪರೇಟಿಂಗ್ ಸಂಸ್ಥೆಗಳು ಕಳೆದ ಫೆಬ್ರುವರಿಯಲ್ಲಿ ವಿಲೀನಗೊಂಡಿದ್ದವು. ಈ ಪ್ರಕ್ರಿಯೆಯಿಂದ ‘ಪಿವಿಆರ್ ಐನಾಕ್ಸ್’ ಸಂಸ್ಥೆಯ ವಹಿವಾಟು ಹೆಚ್ಚಲಿದೆ ಎಂದು ನಿರೀಕ್ಷಿಸಲಾಗಿತ್ತು. ವಿಲೀನ ಪ್ರಕ್ರಿಯೆಗೂ ಮುನ್ನ ಅಂದರೆ, ಕಳೆದ ಡಿಸೆಂಬರ್‌‌ನಲ್ಲಿ ಪಿವಿಆರ್ ಸಂಸ್ಥೆ ‌16 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿತ್ತು ಎನ್ನಲಾಗಿದೆ. ಐನಾಕ್ಸ್ ಜೊತೆ ವಿಲೀನವಾದ ಬಳಿಕವೇ ಸಂಸ್ಥೆ ನಷ್ಟಕ್ಕೆ ಸಿಲುಕಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿಳ್ಳೆ, ಚಪ್ಪಾಳೆಗೆ ಸೀಮಿತವಾದ ಸುದೀಪ್‌ ವರ್ಚಸ್ಸು

ಐನಾಕ್ಸ್ ಜೊತೆಗಿನ ಒಪ್ಪಂದ ಪಿವಿಆರ್ ನಷ್ಟಕ್ಕೆ ಒಂದು ಕಾರಣವಾದರೆ, ಕೊರೊನಾ ಸಾಂಕ್ರಾಮಿಕದ ಬಳಿಕ ಜನ ಮಾಲ್ ಮತ್ತು ಮಲ್ಟಿಪ್ಲೆಕ್ಸ್‌‌ಗಳತ್ತ ಬರುವುದು ಕಡಿಮೆಯಾಗುತ್ತಿದೆ. ಜೊತೆಗೆ ಕೊರೊನಾ ಕಾಲಕ್ಕಿಂತ ಮೊದಲು ಹಿಂದಿ ಸಿನಿಮಾಗಳ ಬಗ್ಗೆ‌ ಜನರಲ್ಲಿದ್ದ ಕ್ರೇಜ್ ಇತ್ತೀಚೆಗೆ ಕಾಣಸಿಗುತ್ತಿಲ್ಲ. ಅವತಾರ್ 2 ಮತ್ತು ಪಠಾಣ್ ರೀತಿಯ ಸಿನಿಮಾಗಳನ್ನು ಬಿಟ್ಟರೆ ಪ್ರೇಕ್ಷಕರನ್ನು ಮಲ್ಟಿಪ್ಲೆಕ್ಸ್‌‌ಗಳತ್ತ ಸೆಳೆಯುವ ಸಿನಿಮಾಗಳು ತೆರೆಗೆ ಬಂದಿಲ್ಲದಿರುವುದು ಈ ಮಲ್ಟಿಪ್ಲೆಕ್ಸ್ ಆಪರೇಟಿಂಗ್ ಸಂಸ್ಥೆಗಳ ನಷ್ಟಕ್ಕೆ ಕಾರಣ ಎನ್ನಲಾಗುತ್ತಿದೆ.

ಭಾರತ ಮತ್ತು ಶ್ರೀಲಂಕಾ ಎರಡೂ ದೇಶಗಳ 115 ನಗರಗಳಲ್ಲಿ ʼಪಿವಿಆರ್‌ ಐನಾಕ್ಸ್‌ʼ ಸಂಸ್ಥೆಯ 361 ಸಿನಿಮಾ ಹಾಲ್‌ಗಳಿದ್ದು, ಅವುಗಳಲ್ಲಿ ಒಟ್ಟು 1670 ಸ್ಕ್ರೀನ್‌ಗಳಿವೆ. ಆ ಪೈಕಿ ಈಗ ನಷ್ಟ ಅನುಭವಿಸುತ್ತಿರುವ 50 ಸ್ಕ್ರೀನ್‌ಗಳಲ್ಲಿ ಸಿನಿಮಾ ಪ್ರದರ್ಶನ ಸ್ಥಗಿತಗೊಳ್ಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...