ʼಕಬ್ಜ-2ʼ ಘೋಷಿಸಿ ಟ್ರೋಲ್‌ ಆದ ಆರ್‌ ಚಂದ್ರು

Date:

ಸದ್ಯದಲ್ಲೇ ಸೆಟ್ಟೇರಲಿದೆ ʼಕಬ್ಜ-2ʼ ಸಿನಿಮಾ

ʼಕಬ್ಜ-2ʼ ಬೇರೆ ನೋಡಬೇಕಾ ಗುರು ಎಂದ ನೆಟ್ಟಿಗರು

ರಿಯಲ್‌ ಸ್ಟಾರ್‌ ಉಪೇಂದ್ರ ಮುಖ್ಯಭೂಮಿಕೆಯಲ್ಲಿ ಇತ್ತೀಚೆಗೆ ತೆರೆಕಂಡಿದ್ದ ʼಕಬ್ಜʼ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರ ಮೆಚ್ಚುಗೆ ಗಳಿಸುವಲ್ಲಿ ವಿಫಲವಾಗಿತ್ತು. ತೆರೆಕಂಡ ಕೆಲವೇ ದಿನಕ್ಕೆ ಬಹುತೇಕ ಚಿತ್ರಮಂದಿಗಳಿಂದ ಎತ್ತಂಗಡಿಯಾಗಿದ್ದ ಈ ಚಿತ್ರ ಕೆಲವೇ ಕೆಲವು ಚಿತ್ರಮಂದಿರಗಳಲ್ಲಿ 25 ದಿನಗಳನ್ನು ಪೂರೈಸಿದೆ. ಇದೇ ಸಂದರ್ಭದಲ್ಲಿ ನಿರ್ದೇಶಕ ಆರ್‌ ಚಂದ್ರು ʼಕಬ್ಜ-2ʼ ಚಿತ್ರವನ್ನು ಘೋಷಿಸಿ, ನೆಟ್ಟಿಗರ ಟೀಕೆಗೆ ಗುರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕಬ್ಜʼ ಚಿತ್ರ ಚಿತ್ರಮಂದಿರಗಳಲ್ಲಿ 25 ದಿನಗಳನ್ನು ಪೂರೈಸಿದ್ದಕ್ಕೆ ಶುಕ್ರವಾರ ಅದ್ಧೂರಿ ಸಮಾರಂಭ ಆಯೋಜಿಸಿದ್ದ ಚಿತ್ರತಂಡ ʼಕಬ್ಜ-2ʼ ಚಿತ್ರದ ಟೈಟಲ್‌ ಪೋಸ್ಟರ್‌ ಬಿಡುಗಡೆ ಮಾಡಿ, ʼಪಾರ್ಟ್‌-2ʼ ಭಾಗದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ಮುಂದುವರೆದ ಭಾಗದ ಕಥೆ ಈಗಾಗಲೇ ಸಿದ್ಧವಾಗಿದೆ. ಹಿಂದಿನ ಚಿತ್ರದಲ್ಲಿ ಆದ ತಪ್ಪುಗಳನ್ನು ಸರಿಪಡಿಸಿಕೊಂಡು ʼಕಬ್ಜ-2ʼಗೆ ತಯಾರಿ ನಡೆಸುತ್ತಿದ್ದೇನೆ. ಈ ಚಿತ್ರದಲ್ಲಿ ಕೇವಲ ಕನ್ನಡದ ನಟರು ಮಾತ್ರವಲ್ಲ ಬೇರೆ ಭಾಷೆಯ ಕಲಾವಿದರು ಕೂಡ ಇರಲಿದ್ದಾರೆ. ಮುಹೂರ್ತದ ವೇಳೆಗೆ ಎಲ್ಲ ವಿಚಾರಗಳನ್ನು ಬಹಿರಂಗ ಪಡಿಸುತ್ತೇನೆ. ಒಟ್ಟಿನಲ್ಲಿ ಹಾಲಿವುಡ್‌ ಮಾದರಿಯ ಚಿತ್ರವನ್ನು ಪ್ರೇಕ್ಷಕರ ಎದುರಿಗೆ ತರುತ್ತೇನೆ” ಎಂದು ಆರ್‌ ಚಂದ್ರು ಭರವಸೆ ವ್ಯಕ್ತಪಡಿಸಿದ್ದಾರೆ.

ʼಕಬ್ಜ-2ʼ ಸಿನಿಮಾ ಘೋಷಿಸುತ್ತಲೇ ನೆಟ್ಟಿಗರು ಆರ್‌ ಚಂದ್ರು ಮೇಲೆ ಮುಗಿ ಬಿದ್ದಿದ್ದಾರೆ. ” ʼಕಬ್ಜʼ ಸಿನಿಮಾವನ್ನು ಒಟಿಟಿ ವೇದಿಕೆಯಲ್ಲಿ ಕೂಡ ನೋಡಲು ಮನಸ್ಸಾಗುತ್ತಿಲ್ಲ. ಸಿನಿಮಾದ ಸೋಲನ್ನು ಒಪ್ಪಿಕೊಳ್ಳಲು ಸಹ ನೀವು ತಯಾರಿಲ್ಲ. ಹೀಗಿರುವಾಗ ಅದ್ಯಾವ ಧೈರ್ಯದ ಮೇಲೆ ʼಕಬ್ಜ-2ʼ ಸಿನಿಮಾ ಮಾಡಲು ಹೊರಟಿದ್ದೀರಿ” ಎಂದು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.

ಇನ್ನು ಉಪೇಂದ್ರ ಅಭಿಮಾನಿಗಳು ಕೂಡ ಅಸಮಾಧಾನ ವ್ಯಕ್ತ ಪಡಿಸುತ್ತಿದ್ದು, ನೀವು ʼಕಬ್ಜ-2ʼನಲ್ಲಿ ನಟಿಸಬೇಡಿ, ಒಂದು ವೇಳೆ ಆ ಚಿತ್ರದಲ್ಲಿ ನೀವು ಕಾಣಿಸಿಕೊಂಡರೆ ನಮ್ಮ ಮೇಲಾಣೆ” ಎನ್ನುತ್ತಿದ್ದಾರೆ.

“ಮೊದಲ ಭಾಗದಲ್ಲೇ ನಿಮಗೆ ಕಥೆ ಹೇಳಲು ಬಂದಿಲ್ಲ. ಇನ್ನು ಎರಡನೇ ಭಾಗದಲ್ಲಿ ಏನು ಕಥೆ ಹೇಳಲು ಹೊರಟಿದ್ದೀರಿ? ನಾವಂತೂ ʼಕಬ್ಜ-2ʼಗಾಗಿ ನಿರೀಕ್ಷೆ ಮಾಡುತ್ತಿಲ್ಲ. ಒಂದು ವೇಳೆ ನೀವು ಮುಂದುವರೆದ ಭಾಗವನ್ನು ಸಿನಿಮಾ ಮಾಡುವುದಾದರೆ, ದಯವಿಟ್ಟು ಚಿತ್ರಕಥೆಯ ಬಗ್ಗೆ ಗಮನ ಹರಿಸಿ. ಅದನ್ನು ಬಿಟ್ಟು ಸುಮ್ಮನೆ ಸಿನಿಮಾ ಹಾಗಿದೆ, ಹೀಗಿದೆ ಅಂತ ಪ್ರಚಾರಕ್ಕಿಳಿಯಬೇಡಿ” ಎಂದು ಕೆಲವರು ಕಿವಿಮಾತು ಹೇಳಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...