ಹೊಂಬಾಳೆಯಿಂದ ‘ರಘುತಾತ’ ಟೀಸರ್ ಬಿಡುಗಡೆ: ‘ಹಿಂದಿ ತೆರಿಯಾದ್ ಪೋಯ’ ಎಂದ ನಾಯಕಿ ಕೀರ್ತಿ ಸುರೇಶ್!

Date:

ಕೆಜಿಎಫ್, ಕಾಂತಾರಾ, ಸಲಾರ್ ಸಿನಿಮಾ ಸೇರಿದಂತೆ ಹಲವು ಖ್ಯಾತ ಸಿನಿಮಾಗಳನ್ನು ನಿರ್ಮಿಸಿರುವ ಕರ್ನಾಟಕದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್, ಕನ್ನಡ ಸಿನಿಮಾಗಳು ಮಾತ್ರವಲ್ಲದೆ ಹಲವು ಭಾಷೆಗಳ ಸಿನಿಮಾಗಳ ಮೇಲೆ ಬಂಡವಾಳ ಹೂಡಿದೆ.

ಹೊಂಬಾಳೆ ನಿರ್ಮಾಣ ಮಾಡಿರುವ ಮೊದಲ ತಮಿಳು ಸಿನಿಮಾ, ‘ರಘುತಾತ’ ಟೀಸರ್ ನಿನ್ನೆ ಬಿಡುಗಡೆ ಆಗಿದ್ದು, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ದಕ್ಷಿಣದ ರಾಜ್ಯಗಳಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿರುವ ‘ಹಿಂದಿ ಹೇರಿಕೆ’ಯ ಕಥಾವಸ್ತು ಒಳಗೊಂಡಿದೆ.

ಸಿನಿಮಾದಲ್ಲಿ ನಾಯಕಿಯಾಗಿ ಕೀರ್ತಿ ಸುರೇಶ್ ನಟಿಸಿದ್ದು, ‘ಹಿಂದಿ ಹೇರಿಕೆ’ ವಿರೋಧಿ ಹೋರಾಟಗಾರ್ತಿಯಾಗಿ ನಟಿಸಿದ್ದಾರೆ. ಇದೀಗ ಬಿಡುಗಡೆಗೊಂಡಿರುವ ಟೀಸರ್‌ನಲ್ಲಿ, ‘ಹಿಂದಿ ತೆರಿಯಾದ್ ಪೋಡಾ’ ಎಂಬ ಡೈಲಾಗ್ ಮತ್ತೊಮ್ಮೆ ಸೋಷಿಯಲ್ ಮೀಡಿಯಾಗಳಲ್ಲಿ ಚರ್ಚೆಗೆ ವೇದಿಕೆಯೊದಗಿಸಿದೆ. ಯೂಟ್ಯೂಬ್‌ನಲ್ಲಿ ಬಿಡುಗಡೆಗೊಂಡಿರುವ ಟೀಸರ್ ಗಮನ ಸೆಳೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ‘ರಘುತಾತ’ ಒಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ. ಆಕೆ ತನ್ನ ನೆಲ ಮತ್ತು ಜನರ ಗುರುತನ್ನು ರಕ್ಷಿಸುವ ನಿಟ್ಟಿನಲ್ಲಿ ಏನೆಲ್ಲ ಸಾಹಸಗಳನ್ನು ಮಾಡುತ್ತಾಳೆ ಎಂಬುದನ್ನು ಈ ಕಥೆಯಲ್ಲಿ ಹಾಸ್ಯಮಯವಾಗಿ ಚಿತ್ರಿಸಲಾಗಿದೆ.

ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣದ ಎಲ್ಲ ಭಾರತದ ರಾಜ್ಯಗಳು ದಶಕಗಳಿಂದಲೂ ಹಿಂದಿ ಹೇರಿಕೆಯ ವಿರುದ್ಧ ಧ್ವನಿ ಎತ್ತುತ್ತಲೇ ಬಂದಿವೆ. ತಮಿಳುನಾಡಿನಲ್ಲಿ ಈ ಬಗ್ಗೆ ದೊಡ್ಡ ಆಂಧೊಲದ ದಶಕಗಳ ಹಿಂದೆಯೇ ನಡೆದಿತ್ತು. ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣದ ರಾಜ್ಯಗಳಲ್ಲಿ ಪ್ರವಾಸಕ್ಕೆ ಬಂದ ಸಂದರ್ಭದಲ್ಲೂ ಕೂಡ, ಹಿಂದಿ ಹೇರಿಕೆ ವಿಚಾರ ಹಲವು ಬಾರಿ ಚರ್ಚೆಗೊಳಗಾಗಿತ್ತು. ಈಗ ಅದೇ ವಿಷಯವನ್ನು ಇರಿಸಿಕೊಂಡು ‘ರಘುತಾತ’ ಸಿನಿಮಾ ನಿರ್ಮಿಸಲಾಗಿದೆ.

hindi

ಕೀರ್ತಿ ಸುರೇಶ್ ಸಿನಿಮಾದ ನಾಯಕಿಯಾಗಿ ನಟಿಸಿದ್ದು, ವಿದ್ಯಾರ್ಥಿನಿಯಾಗಿ ನಂತರ ಶಿಕ್ಷಕಿಯಾಗಿ ಹೋರಾಟಗಾರ್ತಿಯಾಗಿ ಅವರ ಪಾತ್ರ ಹಿಂದಿ ಹೇರಿಕೆಯ ವಿರುದ್ಧ ಮಾಡಿದ ಹೋರಾಟ ಕತೆಯನ್ನು ಸಿನಿಮಾ ಒಳಗೊಂಡಿದೆ. ಸಿನಿಮಾದಲ್ಲಿ ಮರ್ಡರ್ ಮಿಸ್ಟರಿ, ಲವ್ ಸ್ಟೋರಿ, ತಾತ-ಮೊಮ್ಮಗಳ ಭಾವುಕ ಸಂಬಂಧದ ಎಳೆಗಳು ಸಹ ಇವೆಯೆಂಬುದನ್ನು ಟೀಸರ್‌ನಲ್ಲಿ ಸಣ್ಣದಾಗಿ ತಿಳಿಸಲಾಗಿದೆ.

‘ರಘು ತಾತ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಜೊತೆಗೆ ಎಂಎಸ್ ಭಾಸ್ಕರ್, ರವೀಂದ್ರ ವಿಜಯ್ ಇನ್ನೂ ಕೆಲವರು ನಟಿಸಿದ್ದಾರೆ. ಯಾಮಿನಿ ಯಜ್ಞಮೂರ್ತಿ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದು, ʻಜೈ ಭೀಮ್ʼ ಖ್ಯಾತಿಯ ಸೀನ್ ರೋಲ್ಡನ್ ಸಂಗೀತ ಸಂಯೋಜಿಸಿದ್ದಾರೆ.. ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿಲ್ಲ, ಆದರೆ ಟೀಸರ್​ನ ಅಂತ್ಯದಲ್ಲಿ ‘Coming Soon’ ಎನ್ನುವ ಮೂಲಕ ಶೀಘ್ರವೇ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ.

ನಚಚ

ಸದ್ಯ ಈ ಟೀಸರ್‌ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಬಗ್ಗೆ ಹಲವು ಮಂದಿ ಕಮೆಂಟ್ ಹಾಕುತ್ತಿದ್ದು,”ಟೀಸರ್ ಮಾತ್ರ ಸೂಪರ್ ಆಗಿದೆ. ಕಥೆ ಏನಿದೆಯೋ ಗೊತ್ತಿಲ್ಲ. ಆದರೆ ಟೀಸರ್‌ನಲ್ಲಿ ಇರುವ ಕೆಲವು ಡೈಲಾಗ್‌ಗಳು ಹಲವರನ್ನು ಕಂಗೆಡಿಸಿದೆ. ಸಿನಿಮಾ ಬಿಡುಗಡೆಗೆ ಕಾಯುತ್ತಿರುವೆ” ಎಂದು ಹಲವು ನೆಟ್ಟಿಗರು ಪೋಸ್ಟ್ ಹಾಕುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...