30 ವರ್ಷಗಳ ನಂತರ ಮತ್ತೆ ಒಂದಾದ ರಜನಿ-ಮೋಹನ್ ಬಾಬು; ʼಕಣ್ಣಪ್ಪʼನ ಮೆಚ್ಚಿದ ಸೂಪರ್‌ ಸ್ಟಾರ್

Date:

ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್ ರಜನಿಕಾಂತ್ ಹಾಗೂ ನಟ ಮೋಹನ್ ಬಾಬು ಬರೋಬ್ಬರಿ 30 ವರ್ಷಗಳ ಬಳಿಕ ಚೆನ್ನೈನಲ್ಲಿ ಮತ್ತೆ ಒಂದಾಗಿದ್ದಾರೆ. ಇದಕ್ಕೆ ಕಾರಣ, ತೆಲುಗಿನ ʼಪೆದರಾಯುಡುʼ ಸಿನಿಮಾ.

1995ರ ಜೂನ್ 15ರಂದು ಸೂಪರ್‌ ಹಿಟ್‌ ಚಿತ್ರ ‘ಪೆದರಾಯುಡು’ ತೆರೆಕಂಡಿತ್ತು. ಈಗ ಆ ಸಿನಿಮಾಗೆ 30 ವರ್ಷ ಕಳೆದಿದೆ. ಆ ಸ್ಮರಣೀಯ ಕ್ಷಣಗಳನ್ನು ರಜನಿ ಮತ್ತು ಮೋಹನ್ ಬಾಬು ಮೆಲುಕು ಹಾಕಿದ್ದಾರೆ. ಇದೇ ಖುಷಿಯಲ್ಲಿ ಇಬ್ಬರೂ ವಿಷ್ಣು ಮಂಚು ಅವರ ‘ಕಣ್ಣಪ್ಪ’ ಸಿನಿಮಾ ವೀಕ್ಷಿಸಿದ್ದಾರೆ.

ಅಂದಹಾಗೆ, ಜೂನ್ 27 ರಂದು ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಕಣ್ಣಪ್ಪ ಚಿತ್ರ ಬಿಡುಗಡೆಯಾಗಲಿದೆ. ಚಿತ್ರ ವೀಕ್ಷಿಸಿದ ಬಳಿಕ ರಜನಿಕಾಂತ್ ಕೊಂಚ ಭಾವುಕರಾಗಿದ್ದಾರೆ. “ಇದು ಅಸಾಧಾರಣ ಚಿತ್ರ. ಭಾವನೆ, ದೃಶ್ಯ ವೈಭವ ಮತ್ತು ಅಧ್ಯಾತ್ಮ—all extraordinary” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತ ರಜನಿಕಾಂತ್ ಬಗ್ಗೆಯೂ ಮಾತನಾಡಿದ ಮೋಹನ್ ಬಾಬು, “ಇವತ್ತು 22 ವರ್ಷಗಳಿಂದ ನಿರೀಕ್ಷಿಸುತ್ತಿದ್ದ ರಜನಿಕಾಂತ್ ಅವರ ಆಲಿಂಗನ ದೊರೆತಿದೆ. ಈಗ ನಾನು ಹೆದರುವುದಿಲ್ಲ. ನಾನು ಅಜೇಯ. ಕಣ್ಣಪ್ಪ ಬರುತ್ತಾನೆ!” ಎಂದು ಸಂಭ್ರಮ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಣ್ಣಪ್ಪ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ‌ ಮಾಡಿದ್ದಾರೆ. ಪುತ್ರ‌ನ ಚಿತ್ರಕ್ಕೆ ಮೋಹನ್‌ ಬಾಬು ಬಂಡವಾಳ ಹೂಡಿ ನಿರ್ಮಾಪಕರಾಗಿದ್ದಾರೆ. ಬಹುತಾರಾಗಣದ ಈ‌ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ‌ ಭಾಷೆಗಳಲ್ಲಿ‌ ತೆರೆಕಾಣಲಿದೆ. ಮೋಹನ್ ಬಾಬು, ಶರತ್​ಕುಮಾರ್, ಮಧೂ ಮುಂತಾದ ಹಿರಿಯ ನಟರು ನಟಿಸಿದ್ದಾರೆ. ಮೋಹನ್ ಲಾಲ್, ಪ್ರಭಾಸ್, ಅಕ್ಷಯ್ ಕುಮಾರ್, ಕಾಜಲ್ ಅಗರ್​ವಾಲ್ ಮುಂತಾದ ಸ್ಟಾರ್ ಕಲಾವಿದರು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ಚಿತ್ರ ಬಿಡುಗಡೆಗೂ ಮುನ್ನ ಭಾರೀ ನಿರೀಕ್ಷೆ ಮೂಡಿಸಿದೆ.

ಇದನ್ನೂ ಓದಿ: ನಟಿ ರಚಿತಾ ರಾಮ್ ವಿರುದ್ಧ ಕಠಿಣ ಕ್ರಮಕ್ಕೆ ನಿರ್ದೇಶಕ ನಾಗಶೇಖರ್ ಒತ್ತಾಯ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...