2 ಭಾಗಗಳಲ್ಲಿ ತೆರೆಗೆ ಬರಲಿದೆ ʼಸಪ್ತ ಸಾಗರದಾಚೆ ಎಲ್ಲೋʼ

Date:

40ನೇ ವಸಂತಕ್ಕೆ ಕಾಲಿಟ್ಟ ರಕ್ಷಿತ್‌ ಶೆಟ್ಟಿ

ನಿರೀಕ್ಷೆ ಹೆಚ್ಚಿಸಿದ ʼಸಪ್ತ ಸಾಗರದಾಚೆ ಎಲ್ಲೋʼ

ಸ್ಯಾಂಡಲ್‌ವುಡ್‌ನ ಖ್ಯಾತ ನಟ ರಕ್ಷಿತ್‌ ಶೆಟ್ಟಿ ಮಂಗಳವಾರ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಶುಭಕೋರುತ್ತಿದ್ದಾರೆ. ಇದೇ ಹೊತ್ತಿನಲ್ಲಿ ಅವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಕುರಿತ ಕುತೂಹಲಕಾರಿ ಮಾಹಿತಿಯೊಂದು ಹೊರಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಕ್ಷಿತ್‌ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಮಾಹಿತಿಯೊಂದನ್ನು ಹೊರಹಾಕಿರುವ ನಿರ್ದೇಶಕ ಹೇಮಂತ್‌ ರಾವ್‌, ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಕಥಾನಾಯಕನ ಮನು ಬದುಕಿನ ಚಿತ್ರಣವನ್ನು ಎರಡು ಶೇಡ್‌ಗಳಲ್ಲಿ ಚಿತ್ರಸಲಾಗಿದೆ. ಹೀಗಾಗಿ ಚಿತ್ರವನ್ನು ಎರಡು ಭಾಗಗಳಲ್ಲಿ ನಿರೂಪಿಸಲಾಗಿದೆ ಎಂದಿದ್ದಾರೆ. ಇದೇ ಜೂನ್‌ 15 ಚಿತ್ರದ ಎರಡೂ ಭಾಗಗಳ ಬಿಡುಗಡೆ ದಿನಾಂಕವನ್ನು ಘೋಷಿಸುವುದಾಗಿ ತಿಳಿಸಿದ್ದಾರೆ.

ಶೀರ್ಷಿಕೆ ಮತ್ತು ಟೀಸರ್‌ ಮೂಲಕವೇ ನಿರೀಕ್ಷೆ ಹೆಚ್ಚಿಸಿದ್ದ ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಮನು ಮತ್ತು ಸುರಭಿ ಎಂಬ ಇಬ್ಬರು ಪ್ರೇಮಿಗಳ ಪ್ರೀತಿಯ ಕಥೆಯ ಸುತ್ತ ಮೂಡಿಬಂದಿದೆ. ಚಿತ್ರದಲ್ಲಿ ರಕ್ಷಿತ್‌ ಶೆಟ್ಟಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್‌ ಕಾಣಿಸಿಕೊಂಡಿದ್ದಾರೆ. ಯುವನಟಿ ಚೈತ್ರಾ ಆಚಾರ್‌ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೈಲು ದುರಂತಕ್ಕೆ ಸರ್ಕಾರ ಹೊಣೆಯಲ್ಲವೇ? ನಟ ಕಿಶೋರ್‌ ಪ್ರಶ್ನೆ

ಈ ಹಿಂದೆ ಹೇಮಂತ್‌ ರಾವ್‌ ಮತ್ತು ರಕ್ಷಿತ್‌ ಶೆಟ್ಟಿ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ ʼಗೋಧಿ ಬಣ್ಣ ಸಾಧಾರಣ ಮೈಕಟ್ಟುʼ ಸಿನಿಮಾ ಭಾರೀ ಜನಪ್ರಿಯತೆ ಗಳಿಸಿತ್ತು. ʼಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾದ ಮೂಲಕ ಮತ್ತೆ ಒಂದಾಗಿರುವ ಈ ಜೋಡಿ ಪ್ರೇಕ್ಷಕರಿಗೆ ಮೋಡಿ ಮಾಡಲು ಸಜ್ಜಾಗುತ್ತಿದೆ. ಈಗಾಗಲೇ ಸಿನಿಮಾದ ಎರಡೂ ಭಾಗಗಳ ಚಿತ್ರೀಕರಣ ಪೂರ್ಣಗೊಂಡಿದೆ ಎಂದು ರಕ್ಷಿತ್‌ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...