ಸೆಟ್ಟೇರಿತು ರಶ್ಮಿಕಾ ನಟನೆಯ ಹೊಸ ತೆಲುಗು ಸಿನಿಮಾ

Date:

ಹೊಸ ಚಿತ್ರಕ್ಕಾಗಿ ಮತ್ತೆ ಒಂದಾಯ್ತು ʼಭೀಷ್ಮʼ ಚಿತ್ರತಂಡ

ನೂತನ ಚಿತ್ರಕ್ಕೆ ಶುಭ ಹಾರೈಸಿದ ಮೆಗಾ ಸ್ಟಾರ್‌ ಚಿರಂಜೀವಿ

ಕನ್ನಡದ ಸ್ಟಾರ್‌ ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್‌ನಲ್ಲೂ ಗುರುತಿಸಿಕೊಂಡಿರುವ ರಶ್ಮಿಕಾ, ಟಾಲಿವುಡ್‌ನಲ್ಲಿ ಬಹುಬೇಡಿಕೆಯ ನಟಿಯೂ ಹೌದು. ಸದ್ಯ ʼಪುಷ್ಪ-2ʼ ಸಿನಿಮಾದಲ್ಲಿ ತೊಡಗಿಕೊಂಡಿರುವ ಅವರು ತೆಲುಗಿನ ಸ್ಟಾರ್‌ ನಟ ನಿತಿನ್‌ ಜೊತೆಗೆ ಮತ್ತೊಮ್ಮೆ ತೆರೆ ಹಂಚಿಕೊಳ್ಳಲು ಸಜ್ಜಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿತಿನ್‌ ಮತ್ತು ರಶ್ಮಿಕಾ ನಟನೆಯ ಹೊಸ ಸಿನಿಮಾ ಇತ್ತೀಚೆಗೆ ಘೋಷಣೆಯಾಗಿದೆ. ಈ ತಾರಾ ಜೋಡಿ ಜೊತೆಯಾಗಿ ನಟಿಸಿದ್ದʼಭೀಷ್ಮʼ ಸಿನಿಮಾ 2020ರಲ್ಲಿ ತೆರೆಕಂಡು ಭರ್ಜರಿ ಯಶಸ್ಸು ಗಳಿಸಿತ್ತು. ʼಭೀಷ್ಮʼ ಯಶಸ್ಸಿನ ಬೆನ್ನಲ್ಲೇ ನಿರ್ದೇಶಕ ವೆಂಕಿ ಕುದುಮುಲ ಹೊಸ ಕತೆಯೊಂದನ್ನು ರಚಿಸಿದ್ದು, ಈ ಚಿತ್ರದಲ್ಲೂ ನಿತಿನ್‌ ಮತ್ತು ರಶ್ಮಿಕಾ ಅವರೇ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ.

ಶುಕ್ರವಾರ ಹೈದರಾಬಾದ್‌ನಲ್ಲಿ ಚಿತ್ರದ ಮುಹೂರ್ತ ಸಮಾರಂಭ ಅದ್ದೂರಿಯಾಗಿ ಜರುಗಿದ್ದು, ಮೆಗಾ ಸ್ಟಾರ್ ಚಿರಂಜೀವಿ ಚಿತ್ರೀಕರಣಕ್ಕೆ ಚಾಲನೆ ನೀಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್‌ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ನಿತಿನ್‌, ರಶ್ಮಿಕಾ ಮತ್ತು ಪ್ರಕಾಶ್‌ ಜೊತೆಯಾಗಿ ಕಾಣಿಸಿಕೊಂಡಿರುವ ವಿಡಿಯೋ ಬಿಡುಗಡೆ ಮಾಡುವ ಮೂಲಕ ನಿರ್ದೆಶಕ ವೆಂಕಿ ನೂತನ ಚಿತ್ರವನ್ನು ಘೋಷಿಸಿದ್ದಾರೆ. ಅಂದಾಜು 4 ನಿಮಿಷಗಳ ಈ ವಿಡಿಯೋದಲ್ಲಿ ರಶ್ಮಿಕಾರ ಹೇಳಿಕೆಗಳ ಸುತ್ತ ಹೇಗೆ ವಿವಾದ ಸೃಷ್ಟಿಯಾಗುತ್ತದೆ ಎಂಬ ಬಗ್ಗೆಯೂ ವ್ಯಂಗ್ಯಮಯ ಚರ್ಚೆ ನಡೆದಿದೆ. ʼಮೈತ್ರಿ ಮೂವಿ ಮೇಕರ್ಸ್‌ʼ ಬ್ಯಾನರ್‌ನಡಿಯಲ್ಲಿ ನವೀನ್ ಯರ್ನೇನಿ ಮತ್ತು ವೈ. ರವಿ ಶಂಕರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ನೂತನ ಚಿತ್ರ ಭಿನ್ನ ಕಥಾಹಂದರವನ್ನು ಹೊಂದಿರುತ್ತದೆ ಎಂದು ಭರವಸೆ ವ್ಯಕ್ತ ಪಡಿಸಿರುವ ವೆಂಕಿ, ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಮತ್ತು ಪಾತ್ರವರ್ಗವನ್ನು ಪರಿಚಯಿಸುವುದಾಗಿ ತಿಳಿಸಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...