ʼರವಿಕೆ ಪ್ರಸಂಗʼ ಚಿತ್ರ ಫೆ. 16ರಂದು ರಾಜ್ಯಾದ್ಯಂತ ಬಿಡುಗಡೆ

Date:

ಯುವ ನಿರ್ದೇಶಕ ಸಂತೋಷ್‌ ಕೊಡಂಕೇರಿ ನಿರ್ದೇಶನ ಮತ್ತು ನಿರ್ಮಾಣದ ನವಿರು ಹಾಸ್ಯ ಕತೆಯುಳ್ಳ ರವಿಕೆ ಪ್ರಸಂಗ ಇದೇ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಟ್ರೈಲರ್‌ ಮತ್ತು ಟೈಟಲ್‌ ಸಾಂಗ್‌ ಈಗಾಗಲೇ ಬಿಡುಗಡೆಯಾಗಿದ್ದು ಚಿತ್ರದ ಬಗ್ಗೆ ಕುತೂಹಲ ಮೂಡಿಸಿದೆ. ಪಾವನಾ ಸಂತೋಷ್‌ ಅವರು ಚಿತ್ರಕತೆ- ಸಂಭಾಷಣೆ ಬರೆದಿದ್ದಾರೆ. ಗೀತಾ ಭಾರತಿ ಭಟ್‌ ನಾಯಕಿಯಾಗಿ ನಟಿಸಿದ್ದಾರೆ. ಕಂದಯ್ಯ ಶೆಟ್ಟಿ ಅವರು ಸಹ ನಿರ್ಮಾಪಕರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುತ್ತಮುತ್ತ ಚಿತ್ರೀಕರಣ ನಡೆದಿದೆ.

ಸಂತೋಷ್‌ ಕೊಡಂಕೇರಿ ಅವರದೇ ‘ದೃಷ್ಟಿ ಮೀಡಿಯಾ ಅಂಡ್‌ ಪ್ರೊಡಕ್ಷನ್‌ʼನಡಿ ಚಿತ್ರ ನಿರ್ಮಾಣವಾಗಿದೆ. ಚಿತ್ರದ ಟೈಟಲ್‌ ಹಾಡನ್ನು ಖ್ಯಾತ ಹಿನ್ನೆಲೆ ಗಾಯಕಿ ಚೈತ್ರಾ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. “ಮನಸಲಿ ಜೋರು ಕಲರವ…” ಹಾಡನ್ನು ಮಾನಸ ಹೊಳ್ಳ, ಮತ್ತು “ಹಸಿಮನಸಲಿ…” ಹಾಡನ್ನು ಜೋಗಿ ಸುನೀತಾ ಹಾಡಿದ್ದಾರೆ.

ರವಿಕೆಯೊಳಗಿನ ಹೆಣ್ಣು ಭಾವನೆಯ ಸುತ್ತ
“ಸಿನಿಮಾ ಕಥೆಯ ಮೂಲಕ ಕೇವಲ ಮನರಂಜನೆ ಹಾಗೂ ಸಂದೇಶ ನೀಡಿದರೆ ಸಾಲದು, ನೋಡಿದವರಿಗೆ ಆ ಚಿತ್ರ ತಮ್ಮದೆ, ತಮ್ಮ ಬದುಕಿನ ಭಾಗ ಎನ್ನುವ ಭಾವನೆ ಮೂಡಬೇಕು. ಸಾಮಾನ್ಯವಾಗಿ ರವಿಕೆ ಅಂದ ತಕ್ಷಣ ಅದರ ಬಗ್ಗೆ ಗಂಭೀರ ಚಿಂತನೆಗಿಂತ ಹತ್ತು ಹಲವು ಹಾಸ್ಯಾಸ್ಪದವಾದ ಭಾವನೆ ಬಹುತೇಕರಲ್ಲಿ ಸಹಜವಾಗಿ ಮೂಡುತ್ತದೆ. ಆದರೆ ಆ ರವಿಕೆಯಿಂದಲೇ ರವಿಕೆಯೊಳಗಿನ ಮನಸ್ಸಿನ ಭಾವನೆಯನ್ನು ಅನಾವರಣಗೊಳಿಸಿ, ಸಮಾಜದಲ್ಲಿ ಅದೆಷ್ಟೋ ಇಂತಹ ಸಂದಿಗ್ಧ ಸ್ಥಿತಿಯಲ್ಲಿರುವ ಹಾಗೂ ಇಂತಹ ಸ್ಥಿತಿಯನ್ನು ಅನುಭವಿಸಿರುವ ಮಹಿಳೆಯರ ಭಾವನೆಗೆ ಈ ಸಿನಿಮಾ ಮೂಲಕ ಬಣ್ಣ ತುಂಬಬೇಕು ಎನ್ನುವ ಹಂಬಲ ಚಿತ್ರ ತಂಡದ್ದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಮ ವರ್ಗದ ಕುಟುಂಬವೊಂದು ಗ್ರಾಮೀಣ ಸೊಗಡಿನಲ್ಲಿ ಇರುವ ವಾತಾವರಣ, ಸ್ಥಳೀಯ ಸಂಸ್ಕೃತಿ, ಸಂಪ್ರದಾಯದ ಜೊತೆಗೆ ಹಾಸ್ಯದ ಸ್ಪರ್ಷವನ್ನು ದಕ್ಷಿಣ ಕರ್ನಾಟಕದ ಭಾಷೆಯನ್ನೆ ವಿಭಿನ್ನವಾಗಿ ತೋರಿಸುವ ಮೂಲಕ ಭಾಷಾ ಹಾಗೂ ಆಹಾರ ಸಂಸ್ಕೃತಿಯನ್ನು ಕೂಡ ರವಿಕೆ ಪ್ರಸಂಗದಲ್ಲಿ ಸೂಕ್ಷ್ಮವಾಗಿ ತೋರಿಲಾಗಿದೆ. ಒಬ್ಬ ಟೈಲರ್ ಅಂಗಡಿಯಿಂದ ಆರಂಭವಾದ ಈ ರವಿಕೆ ಪ್ರಸಂಗ ಕೋರ್ಟ್ ಮೆಟ್ಟಿಲೇರಿದಾಗ ಅದಕ್ಕೆ ಸಮಾಜ ಹೆಣ್ಣನ್ನು ನೋಡುವ ಪರಿಯೇ ಈ ಚಿತ್ರದ ಎಳೆಯಾಗಿದೆ.

Ravike prasanga stills

ಇಡೀ ಸಿನಿಮಾ ರವಿಕೆ ವಿಚಾರವಾಗಿ ಹತ್ತು-ಹಲವು ಚರ್ಚೆಗಳನ್ನು ಹುಟ್ಟು ಹಾಕುವ ಜೊತೆಗೆ ಮಹಿಳೆಯ ಮಾನಸಿಕ ವೇದನೆ ಹಾಗೂ ಆಕೆಯ ಕನಸುಗಳಿಗಾದ ನಿರಾಸೆ, ಹೋರಾಟದ ಛಲ, ಸಮಾಜ ಆಕೆಯನ್ನು ಕಾಣುವ ರೀತಿ ಹೀಗೆ ಹಲವಾರು ವಿಚಾರಗಳನ್ನು ರವಿಕೆ ಸುತ್ತ ಸುತ್ತುವರೆಯುತ್ತವೆ. ಹಕ್ಕಿಗಾಗಿ ಹೋರಾಟ, ಸಮಸಮಾಜದ ಸಂದೇಶ, ಮಹಿಳೆ ಸಂವೇದನೆ ಹೀಗೆ ಸಮಾಜಕ್ಕೊಂದು ಸಂದೇಶವನ್ನು ರವಿಕೆ ಪ್ರಸಂಗ ನೀಡಲಿದೆ” ಎಂದು ಚಿತ್ರ ತಂಡ ಹೇಳಿಕೊಂಡಿದೆ.

ಪ್ರಯೋಗಾತ್ಮಕ ಚಿತ್ರಗಳ ನಿರ್ದೇಶಕ ಸಂತೋಷ್‌
ಸುಳ್ಯ ಮೂಲದ ಸಂತೋಷ್‌ ಕೊಡಂಕೇರಿ ಪ್ರಯೋಗಾತ್ಮಕ ಚಿತ್ರ ನಿರ್ದೇಶಕ ಎಂದು ಈಗಾಗಲೇ ಗುರುತಿಸಿಕೊಂಡಿದ್ದಾರೆ. ಅವರ ನಿರ್ದೇಶನದ “ಒಂದಾನೊಂದು ಕಾಲದಲ್ಲಿ ಒಬ್ಬ ರಾಜನಿದ್ದ” ಎಂಬ ಏಕವ್ಯಕ್ತಿ ಸಿನಿಮಾ ಗಿನ್ನೆಸ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್‌ ಸೇರಿದೆ. ಒಬ್ಬನೇ ಕಲಾವಿದ (ಯೋಗೇಶ್‌ ಮಾಸ್ಟರ್‌) 24 ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಈ ಚಿತ್ರ ರವೀಂದ್ರನಾಥ ಠಾಗೋರ್‌ ಅವರ ʼOnce There was a Kingʼ ಕಾದಂಬರಿಯನ್ನಾಧರಿಸಿದ ಸಿನಿಮಾ. ʼಹೋಂ ಸ್ಟೇʼ ಸಂತೋಷ್‌ ಅವರ ಮತ್ತೊಂದು ಚಿತ್ರ. ಇವರು ಈಗಾಗಲೇ ಹಲವು ಕಿರುಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಜಾಹೀರಾತು ನಿರ್ಮಾಣದಲ್ಲೂ ಗುರುತಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...