ಸುಶಾಂತ್‌ ಸಿಂಗ್‌ ಪ್ರಕರಣ | ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಬಳಿ ಕ್ಷಮೆಯಾಚಿಸಿದ ಝೀ ಸಂಸ್ಥೆ ಮಾಲೀಕ

Date:

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಝೀ ಸಂಸ್ಥೆ ಮಾಲೀಕರಾದ ಸುಭಾಷ್‌ ಚಂದ್ರ ಅವರು ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಅವರ ಬಳಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.

‘ನಮ್ಮ ಚಾನಲ್‌ನಿಂದ ದೊಡ್ಡ ಪ್ರಮಾದವಾಗಿದೆ. ನಾವೇ ಶುರು ಮಾಡಿದ ಅಪಪ್ರಚಾರ ಅಭಿಯಾನವನ್ನು ಇತರ ಚಾನಲ್‌ಗಳು ಅನುಸರಿಸಿದರು. ನಮ್ಮ ಸಂಪಾದಕರು ಹಾಗು ವರದಿಗಾರರಿಂದ ಆಗ ದೊಡ್ಡ ಪ್ರಮಾದವಾಗಿದೆ. ನಾನು ನೇರವಾಗಿ ಅದರಲ್ಲಿ ಭಾಗಿಯಾಗಿರಲಿಲ್ಲವಾದರೂ ನಾನು ರಿಯಾ ಚಕ್ರವರ್ತಿ ಅವರಲ್ಲಿ ಕ್ಷಮೆಯಾಚಿಸುತ್ತೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಇಡೀ ಅಪಪ್ರಚಾರವನ್ನು ಮೊದಲು ಶುರು ಮಾಡಿದ್ದೇ ನಮ್ಮ ಚಾನಲ್ ಎಂದು ಘೋಷಿಸಿದ್ದಾರೆ. ಅದಕ್ಕಾಗಿ ಸ್ವತಃ ಅವರು ಕ್ಷಮೆಯಾಚಿಸಿದ್ದಾರೆ. ತಮ್ಮ ಚಾನಲ್‌ನ ಸಿಬ್ಬಂದಿ ಕೂಡ ಕ್ಷಮೆ ಯಾಚಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪುಟ್ಟ ರಾಷ್ಟ್ರಗಳಿಂದ ಇಸ್ರೇಲ್, ರಷ್ಯಾ, ಅಮೆರಿಕ ಕಲಿಯುವುದು ಬಹಳಷ್ಟಿದೆ!

ಇದಕ್ಕೆಲ್ಲ ಕಾರಣವಾಗಿದ್ದು ಸುಶಾಂತ್ ಸಾವಿನ ಪ್ರಕರಣದಲ್ಲಿ ಸಿಬಿಐ ತನಿಖೆ ಬಳಿಕ ಸಲ್ಲಿಸಿರುವ ಮುಚ್ಚುವಿಕೆ ವರದಿ. ಅದರಲ್ಲಿ ರಿಯಾ ಚಕ್ರಬರ್ತಿ ವಿರುದ್ಧ ಯಾವುದೇ ರೀತಿಯ ಸಾಕ್ಷ್ಯ ಇಲ್ಲ. ಆಕೆ ಇದರಲ್ಲಿ ಯಾವ ರೀತಿಯಲ್ಲೂ ಆರೋಪಿಯಲ್ಲ ಎಂದು ಹೇಳಲಾಗಿತ್ತು.

ಸುಭಾಷ್‌ ಚಂದ್ರ ಅವರು 1992ರಲ್ಲಿ ಝೀ ಸಂಸ್ಥೆಯನ್ನು ಆರಂಭಿಸಿದ್ದರು. ನಂತರದಲ್ಲಿ ಬಿಜೆಪಿ ಬೆಂಬಲದಿಂದ ರಾಜ್ಯಸಭೆ ಸದಸ್ಯರಾಗಿದ್ದರು. ಸುಭಾಷ್‌ ಅವರನ್ನು ಪುನಾರಾಯ್ಕೆ ಮಾಡದ ಕಾರಣ ಸುಶಾಂತ್‌ ಸಿಂಗ್‌ ಪ್ರಕರಣದಲ್ಲಿ ತಮ್ಮ ಚಾನಲ್‌ನಲ್ಲಿ ಸುಳ್ಳುಸುದ್ದಿ ಹಬ್ಬಿಸಿದ್ದರು ಎಂದು ಹೇಳಲಾಗುತ್ತಿದೆ.

ಬಾಲಿವುಡ್‌ ನಟ ಸುಶಾಂತ್ ಸಿಂಗ್‌ ಅವರು 2020ರಲ್ಲಿ ಮುಂಬೈನ ತಮ್ಮ ಮನೆಯ ಕೋಣೆಯಲ್ಲಿ ಆತ್ಮಹತ್ಯೆಮಾಡಿಕೊಂಡಿದ್ದರು. ಪೊಲೀಸರು ಈ ಪ್ರಕರಣವನ್ನು ಆತ್ಮಹತ್ಯೆ ಎಂದು ವರದಿ ನೀಡಿದ ನಂತರ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಘಟನೆ ನಡೆದು 5 ವರ್ಷದ ನಂತರ ಸಿಬಿಐ ಸುಶಾಂತ್ ಸಿಂಗ್‌ ಅವರದು ಕೊಲೆ ಎನ್ನುವುದಕ್ಕೆ ಪ್ರಮುಖ ಸಾಕ್ಷ್ಯಗಳು ಲಭ್ಯವಾಗಲಿಲ್ಲ ಎಂಬ ಕಾರಣದಿಂದ ಮುಚ್ಚುವಿಕೆ ವರದಿ ಸಲ್ಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...