ಟಾಲಿವುಡ್‌ನತ್ತ ಮುಖ ಮಾಡಿದ ಸೈಫ್‌ ಅಲಿಖಾನ್‌

Date:

ಜೂನಿಯರ್‌ ಎನ್‌ಟಿಆರ್‌ 30ನೇ ಚಿತ್ರದಲ್ಲಿ ಸೈಫ್‌ ನಟನೆ

ಕಳೆದ ಮಾರ್ಚ್‌ನಲ್ಲಿ ಸೆಟ್ಟೇರಿರುವ ಬಹುನಿರೀಕ್ಷಿತ ಚಿತ್ರ

ಸಂಜಯ್‌ ದತ್‌ ಮತ್ತು ಸಲ್ಮಾನ್‌ ಖಾನ್‌ ಬಳಿಕ ಬಾಲಿವುಡ್‌ನ ಮತ್ತೊಬ್ಬ ಖ್ಯಾತ ನಟ ಸೈಫ್‌ ಅಲಿಖಾನ್‌ ದಕ್ಷಿಣ ಸಿನಿ ರಂಗದತ್ತ ಮುಖ ಮಾಡಿದ್ದಾರೆ. ತೆಲುಗಿನ ಸ್ಟಾರ್‌ ನಟ ಜೂನಿಯರ್‌ ಎನ್‌ಟಿಆರ್‌ ಅಭಿನಯದ 30ನೇ ಚಿತ್ರದಲ್ಲಿ ಸೈಫ್‌ ಅಲಿಖಾನ್‌ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೈಫ್‌ ಅಲಿಖಾನ್‌, ಜೂನಿಯರ್‌ ಎನ್‌ಟಿಆರ್‌ ಅವರ ಚಿತ್ರದಲ್ಲಿ ಖಳನ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಈ ಹಿಂದೆಯೇ ಕೇಳಿ ಬಂದಿದ್ದವು. ಆದರೆ, ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಮಾಹಿತಿ ನೀಡಿರಲಿಲ್ಲ. ಮಂಗಳವಾರ ʼಎನ್‌ಟಿಆರ್‌ 30ʼ ಚಿತ್ರದ ಶೂಟಿಂಗ್‌ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿರುವ ಸೈಫ್‌ ಅಲಿಖಾನ್‌, ಜೂನಿಯರ್‌ ಎನ್‌ಟಿಆರ್‌ ಮತ್ತು ಚಿತ್ರದ ನಿರ್ದೇಶಕ ಕೊರಟಾಲ ಶಿವ ಜೊತೆಗೆ ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಸೈಫ್‌ ಅಲಿಖಾನ್‌ ಅವರ ಪಾತ್ರದ ಚಿತ್ರೀಕರಣ ಪ್ರಾರಂಭಗೊಂಡಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಕೊರಟಾಲ ಶಿವ ಮತ್ತು ಜೂನಿಯರ್‌ ಎನ್‌ಟಿಆರ್‌ ಕಾಂಬಿನೇಶನ್‌ ಈ ಚಿತ್ರದ ಮುಹೂರ್ತ ಕಳೆದ ಮಾರ್ಚ್‌ 23ರಂದು ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ಜರುಗಿತ್ತು. ಸ್ಟಾರ್‌ ನಿರ್ದೇಶಕರಾದ ರಾಜಮೌಳಿ ಮತ್ತು ಪ್ರಶಾಂತ್‌ ನೀಲ್‌ ಚಿತ್ರೀಕರಣಕ್ಕೆ ಚಾಲನೆ ನೀಡುವ ಮೂಲಕ ತಂಡಕ್ಕೆ ಶುಭ ಹಾರೈಸಿದ್ದರು.

ನಿರ್ಲಕ್ಷ್ಯಕ್ಕೊಳಪಟ್ಟ ಭಾರತದ ಕರಾವಳಿ ತೀರದ ಜನರ ಬದುಕಿನ ಸುತ್ತ ಚಿತ್ರದ ಕಥೆಯನ್ನು ಹೆಣೆಯಲಾಗಿದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ಕೊರಟಾಲ ಶಿವ ಈ ಹಿಂದೆ ಜೂನಿಯರ್‌ ಎನ್‌ಟಿಆರ್‌ ನಟನೆಯ ʼಜನತಾ ಗ್ಯಾರೇಜ್‌ʼ ಚಿತ್ರವನ್ನು ನಿರ್ದೇಶಿಸಿದ್ದರು. ಕಡಲ ಕಥನದ ಮೂಲಕ ಈ ಹಿಟ್‌ ಜೋಡಿ ಮತ್ತೆ ಒಂದಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ. ಇನ್ನೂ ಹೆಸರಿಡದ ಈ ಚಿತ್ರ ಪ್ಯಾನ್‌ ಇಂಡಿಯಾ ಮಾದರಿಯಲ್ಲಿ ಸಿದ್ಧಗೊಳ್ಳುತ್ತಿದೆ.

ಬಾಲಿವುಡ್‌ನ ಖ್ಯಾತ ನಟಿ ಜಾಹ್ನವಿ ಕಪೂರ್‌, ಚಿತ್ರದಲ್ಲಿ ಜೂನಿಯರ್‌ ಎನ್‌ಟಿಆರ್‌ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಕೂಡ ದಕ್ಷಿಣ ಸಿನಿ ರಂಗ ಪ್ರವೇಶಿಸುತ್ತಿರುವುದು ವಿಶೇಷ. ಬಹುಭಾಷಾ ನಟ ಪ್ರಕಾಶ್‌ ರಾಜ್‌ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹರಿಕೃಷ್ಣ ಕೆ ಮತ್ತು ಸುಧಾಕರ್‌ ಮಿಕ್ಕಿಲಿನೇನಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...