‘ಚೆನ್ನೈ ಎಕ್ಸ್‌ಪ್ರೆಸ್‌’ ನೆನಪಿಸುವ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಟ್ರೈಲರ್‌

Date:

ಆ್ಯಕ್ಷನ್‌‌ ಹೀರೋ ಪಾತ್ರದಲ್ಲಿ ಮಿಂಚಿದ ಸಲ್ಮಾನ್ ಖಾನ್

ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಸಿನಿಮಾ ಏಪ್ರಿಲ್ 21ಕ್ಕೆ ತೆರೆಗೆ

ಬಾಲಿವುಡ್‌ನ ಸ್ಟಾರ್‌ ನಟ ಸಲ್ಮಾನ್‌ ಖಾನ್‌ ಅಭಿನಯದ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಸಿನಿಮಾದ ಬಹುನಿರೀಕ್ಷಿತ ಟ್ರೈಲರ್‌ ಸೋಮವಾರ ಬಿಡುಗಡೆಯಾಗಿದ್ದು, ಎಂದಿನಂತೆ ಆ್ಯಕ್ಷನ್ ಹೀರೋ ಪಾತ್ರದಲ್ಲಿ ಸಲ್ಮಾನ್‌ ಖಾನ್‌ ಗಮನ ಸೆಳೆಯುತ್ತಿದ್ದಾರೆ. ಈ ಚಿತ್ರದ ಟ್ರೈಲರ್‌ ಶಾರುಖ್‌ ಖಾನ್‌ ಮುಖ್ಯಭೂಮಿಕೆಯಲ್ಲಿ ತೆರೆಕಂಡಿದ್ದ ʼಚೆನ್ನೈ ಎಕ್ಸ್‌ಪ್ರೆಸ್‌ʼ ಚಿತ್ರವನ್ನು ನೆನಪಿಸುವಂತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರೇಮ ಕಥೆ ಮತ್ತು ಕೌಟುಂಬಿಕ ಕಥಾಹಂದರದ ಸುತ್ತ ಚಿತ್ರದ ಕಥೆ ಮೂಡಿ ಬಂದಿದೆ ಎಂಬುದನ್ನು ಎರಡು ನಿಮಿಷಗಳ ಟ್ರೈಲರ್‌ನಲ್ಲಿ ಸೂಚ್ಯವಾಗಿ ತೋರಿಸಲಾಗಿದೆ. ವೈರಿಗಳಿಂದ ನಾಯಕಿಯ ಕುಟುಂಬವನ್ನು ರಕ್ಷಿಸಲು ಹೋರಾಡುವ ಭಾಯ್‌ಜಾನ್‌ ಆಗಿ ಸಲ್ಮಾನ್‌ ಖಾನ್‌ ಕಾಣಿಸಿಕೊಂಡಿದ್ದಾರೆ. ಟ್ರೈಲರ್‌ನಲ್ಲಿ ಕಂಡುಬರುವ ಆ್ಯಕ್ಷನ್ ದೃಶ್ಯಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿವೆ.

2013ರಲ್ಲಿ ಶಾರುಖ್‌ ಖಾನ್‌ ಮತ್ತು ದೀಪಿಕಾ ಪಡುಕೋಣೆ ಮುಖ್ಯಭೂಮಿಕೆಯಲ್ಲಿ ತೆರೆಗೆ ಬಂದಿದ್ದ ʼಚೆನ್ನೈ ಎಕ್ಸ್‌ಪ್ರೆಸ್‌ʼ ಚಿತ್ರದಲ್ಲಿ ತಮಿಳುನಾಡಿನ ಸಂಪ್ರದಾಯ, ಆಚರಣೆಗಳನ್ನು ಒಳಗೊಂಡಿತ್ತು. ಅದೇ ರೀತಿ ʼಕಿಸಿ ಕಾ ಭಾಯ್‌ ಕಿಸಿ ಕಿ ಜಾನ್‌ʼ ಚಿತ್ರದಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಸಂಪ್ರದಾಯ, ಆಚರಣೆಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಅಷ್ಟು ಮಾತ್ರವಲ್ಲ, ಸಲ್ಮಾನ್‌ ಹೊರತು ಪಡಿಸಿ, ಟ್ರೈಲರ್‌ನಲ್ಲಿ ಕಾಣಸಿಗುವ ಬಹುತೇಕ ಕಲಾವಿದರು ದಕ್ಷಿಣ ಸಿನಿರಂಗದವರು ಎಂಬುದು ಗಮನಾರ್ಹ. ಕನ್ನಡತಿ ಪೂಜಾ ಹೆಗ್ಡೆ ನಾಯಕಿಯ ಪಾತ್ರದಲ್ಲಿ ಮಿಂಚಿದ್ದು, ವಿಕ್ಟರಿ ವೆಂಕಟೇಶ್‌, ಜಗಪತಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಫರ್ಹಾದ್‌ ಸಮ್ಜಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಸಲ್ಮಾನ್‌ ಖಾನ್‌ ಅವರ ತಾಯಿ ಸಲ್ಮಾ ಖಾನ್‌ ಬಂಡವಾಳ ಹೂಡಿದ್ದಾರೆ. ಕನ್ನಡಿಗ, ‘ಕೆಜಿಎಫ್‌’ ಖ್ಯಾತಿಯ ರವಿ ಬಸ್ರೂರ್‌ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಇದೇ ಏಪ್ರಿಲ್ 21ರಂದು ಚಿತ್ರ ತೆರೆಗೆ ಬರಲಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...