ಅಂಬರೀಶ್‌ ಸ್ಮಾರಕ | ಉಳ್ಳವರಿಗೆ ಮತ್ತೆ ಸವಲತ್ತು ಒದಗಿಸುವುದು ನ್ಯಾಯವೇ ಎಂದ ಚೇತನ್‌

Date:

  • ಮಾರ್ಚ್‌ 27ರಂದು ಲೋಕಾರ್ಪಣೆಗೊಂಡಿರುವ ಅಂಬರೀಶ್‌ ಸ್ಮಾರಕ
  • ಸುಮಲತಾ ಸರ್ಕಾರದ ಎದುರು ಕೈಚಾಚಿದ್ದು ವಿಪರ್ಯಾಸ ಎಂದ ನಟ

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರ ಸ್ಮರಣಾರ್ಥ ಸ್ಮಾರಕ ಲೋಕಾರ್ಪಣೆಗೊಂಡ ಬೆನ್ನಲ್ಲೇ ಕನ್ನಡದ ಖ್ಯಾತ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಕುಮಾರ್‌, ಸ್ಮಾರಕ ನಿರ್ಮಾಣಕ್ಕೆ ಜನಸಾಮಾನ್ಯರ ತೆರಿಗೆ ಹಣವನ್ನು ಬಳಸಿದ್ದನ್ನು ಪ್ರಶ್ನಿಸಿ ಅಂಬರೀಶ್‌ ಕುಟುಂಬಸ್ಥರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಮಾರಕ ಲೋಕಾರ್ಪಣೆ ಸಂದರ್ಭದಲ್ಲಿ, “ಅಂಬರೀಶ್ ಯಾರ ಬಳಿಯೂ ಕೈ ಚಾಚಿದವರಲ್ಲ” ಎಂದು ಸುಮಲತಾ ಅವರು ಹೇಳಿರುವ ವರದಿಯನ್ನು ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಚೇತನ್‌, “ಅಂಬರೀಶ್ ಯಾರ ಬಳಿಯೂ ಕೈ ಚಾಚಿದವರಲ್ಲ ಎಂದು ಸುಮಲತಾ ಹೇಳಿದ್ದಾರೆ. (ಅನಗತ್ಯ) ಅಂಬರೀಶ್ ಸ್ಮಾರಕಕ್ಕೆ ಸುಮಲತಾರವರು ಅಂದಾಜು ಎರಡು ಎಕರೆ ಜಾಗ ಮತ್ತು 12 ಕೋಟಿ ರೂಪಾಯಿ ಹಣವನ್ನು ಸರ್ಕಾರದಿಂದ ಕೈ ಚಾಚಿ ಪಡೆದಿರುವುದು ವಿಪರ್ಯಾಸ. ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಳ್ಳುವ ಬದಲು ಸುಮಲತಾ ಅವರು ತಮ್ಮ ಸ್ವಂತ 23.4 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲು ಸಾಧ್ಯವಾಗಲಿಲ್ಲವೇ? ಎಲ್ಲ ಉಳ್ಳವರಿಗೆ ಮತ್ತೆ ಸವಲತ್ತು ಒದಗಿಸುವುದು ನ್ಯಾಯವೇ?” ಎಂದು ಪ್ರಶ್ನಿಸಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿ 37 ಗುಂಟೆ ಜಾಗದಲ್ಲಿ ಅಂಬರೀಶ್‌ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ಸ್ಮಾರಕ ನಿರ್ಮಾಣಕ್ಕೆ ಅಂದಾಜು 12 ಕೋಟಿ ವೆಚ್ಚ ತಗುಲಿದೆ ಎನ್ನಲಾಗಿದ್ದು, ಅಂಬರೀಶ್‌ ಕುಟುಂಬಸ್ಥರ ಸಮ್ಮುಖದಲ್ಲಿ ಮಾರ್ಚ್‌ 27ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಮಾರಕವನ್ನು ಉದ್ಘಾಟಿಸಿದ್ದಾರೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ರೇಸ್‌ ಕೋರ್ಸ್‌ ರಸ್ತೆಗೆ ಅಂಬರೀಶ್‌ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...