ನಟ ಮಾಸ್ಟರ್‌ ಆನಂದ್‌ಗೆ ₹18 ಲಕ್ಷ ವಂಚನೆ

Date:

  • 70 ಲಕ್ಷ ಮೌಲ್ಯದ ನಿವೇಶನ ಖರೀದಿಸಿದ್ದ ಆನಂದ್‌
  • ಆನಂದ್‌ ಖರೀದಿಸಿದ್ದ ನಿವೇಶನ ಬೇರೆಯವರ ಪಾಲು

ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಮಾಸ್ಟರ್‌ ಆನಂದ್‌ ಖಾಸಗಿ ಕಂಪನಿಯಿಂದ ವಂಚನೆಗೊಳಗಾಗಿದ್ದಾರೆ. ಬೆಂಗಳೂರಿನ ಹೊರವಲಯದಲ್ಲಿ ನಿವೇಶನ ಖರೀದಿಸಲು ಪಾವತಿಸಿದ್ದ ಮುಂಗಡ ಹಣವನ್ನು ವಾಪಸ್ ನೀಡದೆ ಕಂಪನಿ ವಂಚಿಸಿದೆ ಎಂದು ನಟ ಚಂದ್ರಾ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ಕೆಲ ವರ್ಷಗಳ ಹಿಂದೆ ಮಲ್ಟಿ ಲೀಪ್‌ ವೆಂಚರ್‌ ಹೆಸರಿನ ಕಂಪನಿ ಬೆಂಗಳೂರಿನ ಹೊರವಲಯದಲ್ಲಿರುವ ಕೊಮಘಟ್ಟ ಸಮೀಪದ ರಾಮಸಂದ್ರದಲ್ಲಿ ಅಭಿವೃದ್ಧಿ ಪಡಿಸಿದ್ದ 2 ಸಾವಿರ ಅಡಿ ವಿಸ್ತೀರ್ಣದ ನಿವೇಶನವನ್ನು ₹70 ಲಕ್ಷ ಮೊತ್ತಕ್ಕೆ ಖರೀದಿ ಮಾಡಿದ್ದರು. ₹18.50 ಲಕ್ಷವನ್ನು ಮುಂಗಡವಾಗಿ ಪಾವತಿಸಿದ್ದ ಆನಂದ್‌, ಉಳಿದ ಮೊತ್ತವನ್ನು ಕಂಪನಿಯ ಸಲಹೆಯಂತೆ ಕಂತಿನ ಪ್ರಕಾರ ಪಾವತಿಸಲು ಒಪ್ಪಿಕೊಂಡಿದ್ದರು ಎನ್ನಲಾಗಿದೆ.

ಮುಂಗಡ ಹಣ ಪಡೆದ ಕಂಪನಿಯವರು ಆನಂದ್‌ ಮತ್ತು ಅವರ ಪತ್ನಿ ಯಶಸ್ವಿನಿ ಹೆಸರಲ್ಲಿ ಖರೀದಿ ಕರಾರು ಪತ್ರವನ್ನು ಕೂಡ ನೀಡಿದ್ದರು. ಆದರೆ, ಸ್ವಲ್ಪ ದಿನಗಳ ಬಳಿಕ ಆನಂದ್‌ ಅವರಿಗೆ ನೀಡಲಾಗಿದ್ದ ನಿವೇಶನವನ್ನು ಅವರ ಗಮನಕ್ಕೆ ತರದೇ ಕಂಪನಿಯವರು ಬೇರೆಯವರಿಗೆ ಮಾರಾಟ ಮಾಡಿದ್ದಾರೆ. 2020ರ ಸೆಪ್ಟೆಂಬರ್‌ನಲ್ಲೇ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? 19ನೇ ಸಿನಿಮಾ ಘೋಷಣೆಗೆ ಸಜ್ಜಾದ ಯಶ್‌

ತಾವು ಖರೀದಿಸಿದ ನಿವೇಶನವನ್ನು ಹೇಳದೆ ಕೇಳದೆ ಬೇರೆಯವರಿಗೆ ಮಾರಾಟ ಮಾಡಿದ್ದನ್ನು ಆನಂದ್‌ ದಂಪತಿ ಆಗಲೇ ಪ್ರಶ್ನಿಸಿದ್ದಾರೆ. ಅದಕ್ಕೆ ನೆಪ ಹೇಳಿದ್ದ ಕಂಪನಿಯವರು ಮುಂಗಡ ಹಣ ಹಿಂತಿರುಗಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಎರಡ್ಮೂರು ವರ್ಷಗಳು ಕಳೆದರೂ ₹18.50 ಲಕ್ಷ ಹಣದಲ್ಲಿ ಒಂದು ರೂಪಾಯಿಯನ್ನು ಕೂಡ ಹಿಂತಿರುಗಿಸಿಲ್ಲ. ಹೀಗಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿರುವ ವಂಚನೆ ಆರೋಪದಡಿ ದೂರು ದಾಖಲಿಸಿದ್ದು, ದೂರಿನನ್ವಯ ಕಂಪನಿ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...