ʼಕಾಟೇರಾʼ ಚಿತ್ರದ ಮೂಲಕ ತೆರೆಗೆ ಮರಳಲು ಸಜ್ಜಾದ ಕುಮಾರ್‌ ಗೋವಿಂದ್‌

Date:

60ನೇ ವಸಂತಕ್ಕೆ ಕಾಲಿಟ್ಟ ಹಿರಿಯ ನಟ

ಹುಟ್ಟು ಹಬ್ಬಕ್ಕೆ ಫಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆ

ಸ್ಯಾಂಡಲ್‌ವುಡ್‌ನ ಹಿರಿಯ ನಟ, ನಿರ್ಮಾಪಕ ಕುಮಾರ್‌ ಗೋವಿಂದ್‌ ಬುಧವಾರ 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹಲವು ವರ್ಷಗಳಿಂದ ನಟನೆಯಿಂದ ಅಂತರ ಕಾಯ್ದುಕೊಂಡಿರುವ ಅವರು ಇದೀಗ ಮತ್ತೆ ಚಿತ್ರರಂಗದತ್ತ ಮುಖ ಮಾಡಿದ್ದು, ದರ್ಶನ್‌ ಮುಖ್ಯಭೂಮಿಕೆಯ ʼಕಾಟೇರಾʼ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹುಟ್ಟು ಹಬ್ಬದ ಪ್ರಯುಕ್ತ ಕುಮಾರ್‌ ಗೋವಿಂದ್‌ ಅವರ ಪಾತ್ರದ ಫಸ್ಟ್‌ಲುಕ್‌ ಪೋಸ್ಟರ್‌ ಬಿಡುಗಡೆ ಮಾಡಿರುವ ಚಿತ್ರತಂಡ ಹಿರಿಯ ನಟನಿಗೆ ಶುಭಾಶಯ ಕೋರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟ್ವಿಟರ್‌ನಲ್ಲಿ ಕುಮಾರ್‌ ಗೋವಿಂದ್‌ ಅವರ ಫಸ್ಟ್‌ಲುಕ್‌ ಪೋಸ್ಟರ್‌ ಹಂಚಿಕೊಂಡಿರುವ ʼಕಾಟೇರಾʼ ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌, ಹುಟ್ಟು ಶುಭಾಶಯ ಕೋರುವ ಜೊತೆಗೆ ಚಿತ್ರದಲ್ಲಿ ಕುಮಾರ್‌ ಗೋವಿಂದ್‌ ಹಳ್ಳಿಗ ಮಹದೇವಣ್ಣನ ಪಾತ್ರದಲ್ಲಿ ನಟಿಸುತ್ತಿರುವುದಾಗಿ ತಿಳಿಸಿದ್ದಾರೆ.

70ರ ದಶಕದ ಹಳ್ಳಿ ಸೊಗಡಿನ ಕಥಾಹಂದರವುಳ್ಳ ʼಕಾಟೇರಾʼ ಚಿತ್ರದಲ್ಲಿ ದರ್ಶನ್‌ ರೈತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಅವರ ಪುತ್ರಿ ರಾಧನಾ ಈ ಚಿತ್ರದ ಮೂಲಕ ನಾಯಕ ನಟಿಯಾಗಿ ಚಿತ್ರರಂಗ ಪ್ರವೇಶಿಸುತ್ತಿರುವುದು ವಿಶೇಷ.

ಇತ್ತೀಚೆಗೆ ರೈತ ನಾಯಕ, ದಿವಂಗತ ಪುಟ್ಟಣ್ಣಯ್ಯನವರ ಮಗನ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ʼಕಾಟೇರಾʼ ಚಿತ್ರದ ಕಥಾಹಂದರದ ಬಗ್ಗೆ ಸುಳಿವು ನೀಡಿದ್ದ ದರ್ಶನ್‌, “70ರ ದಶಕದಲ್ಲಿ ಜಾರಿಯಾದ ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ, ಆ ಕ್ಷಣದಿಂದ ಚುರುಕುಗೊಂಡ ರೈತ ಹೋರಾಟದ ಸುತ್ತ ನಾವು ಸಿನಿಮಾ ಮಾಡುತ್ತಿದ್ದೇವೆ” ಎಂದು ಮಾಹಿತಿ ಹಂಚಿಕೊಂಡಿದ್ದರು.

ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ರಾಕ್‌ಲೈನ್‌ ವೆಂಕಟೇಶ್‌ ಬಂಡವಾಳ ಹೂಡಿದ್ದು, ವಿ ಹರಿಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಸದ್ಯ ಚಿತ್ರದ ಮೊದಲ ಹಂತದ ಶೂಟಿಂಗ್‌ ಚಾಲ್ತಿಯಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...