ಮಹಾಕಾಳನಿಗೆ ಪೂಜೆ ಸಲ್ಲಿಸಿದ್ದಕ್ಕೆ ಟ್ರೋಲ್‌ : ತಲೆ ಕೆಡಿಸಿಕೊಳ್ಳಲ್ಲ ಎಂದ ಸಾರಾ ಅಲಿ ಖಾನ್

Date:

  • ಹಿಂದೂ ಧರ್ಮಕ್ಕೆ ಮತಾಂತರವಾಗಿ ಎಂದ ಮುಸ್ಲಿಂ ಮೂಲಭೂತವಾದಿಗಳು
  • ನಟಿಯಿಂದ ದೇವಸ್ಥಾನ ಅಪವಿತ್ರ ಎಂದ ಹಿಂದೂ ಮೂಲಭೂತವಾದಿಗಳು

ಬಾಲಿವುಡ್‌ನ ಖ್ಯಾತ ನಟ ವಿಕ್ಕಿ ಕೌಶಲ್‌ ಮತ್ತು ಸಾರಾ ಅಲಿಖಾನ್‌ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ತೆರೆಗೆ ಸಜ್ಜಾಗಿದೆ. ಸದ್ಯ ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ವಿಕ್ಕಿ ಮತ್ತು ಸಾರಾ ಬುಧವಾರ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಇದೇ ಕಾರಣಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನಟಿಯನ್ನು ಟ್ರೋಲ್‌ ಮಾಡಲಾಗುತ್ತಿದ್ದು, ಟೀಕಾಕಾರರಿಗೆ ನಟಿ ತಿರುಗೇಟು ನೀಡಿದ್ದಾರೆ.

ವಿಕ್ಕಿ ಕೌಶಲ್‌ ಮತ್ತು ಚಿತ್ರತಂಡದ ಜೊತೆಗೆ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಾರಾ, ಭಸ್ಮಾರತಿಯಲ್ಲಿ ಭಾಗಿಯಾಗಿದ್ದಾರೆ. ಪೂಜೆ ಸಲ್ಲಿಸಿದ ಸಂದರ್ಭದ ಫೋಟೋಗಳನ್ನು ನಟಿ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಲೇ ಹಲವರು ಮುಸ್ಲಿಂ ಮೂಲಭೂತವಾದಿಗಳು ʼಹಿಂದೂ ಧರ್ಮಕ್ಕೆ ಮತಾಂತರವಾಗಿ ಬಿಡಿʼ ಎಂದು ನಟಿಯನ್ನು ಟೀಕಿಸಿದ್ದಾರೆ. ಅಷ್ಟೇ ಅಲ್ಲ ಅಶ್ಲೀಲ ಪದಬಳಕೆಯನ್ನೂ ಮಾಡಿದ್ದಾರೆ.

“ಯಾರು ಬೇಕಾದರೂ ಭೇಟಿ ನೀಡಲು ದೇವಸ್ಥಾನ ಪ್ರವಾಸಿ ಸ್ಥಳವಲ್ಲ. ನಟಿಯ ಪ್ರವೇಶದಿಂದಾಗಿ ದೇವಸ್ಥಾನ ಅಪವಿತ್ರಗೊಂಡಿದೆ. ಇಡೀ ದೇವಸ್ಥಾನವನ್ನು ಶುದ್ಧೀಕರಿಸಬೇಕು” ಎಂದು ಹಿಂದು ಮೂಲಭೂತವಾದಿಗಳೂ ಸಾರಾ ಅಲಿಖಾನ್‌ ಅವರನ್ನು ಟ್ರೋಲ್‌ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಎರಡೂ ಕಡೆಯವರ ಟೀಕೆಯನ್ನು ಉಲ್ಲೇಖಿಸಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಾರಾ, “ನಾನು ನನ್ನ ಕೆಲಸವನ್ನು ಬಹಳ ಶ್ರದ್ಧೆಯಿಂದ ಮಾಡುತ್ತೇನೆ. ಜನರಿಗಾಗಿ ಕೆಲಸ ಮಾಡುತ್ತೇನೆ. ಒಂದು ವೇಳೆ ಜನರಿಗೆ ನನ್ನ ಕೆಲಸ ಇಷ್ಟವಾಗದಿದ್ದರೆ ನನಗೆ ಬೇಸರವಾಗುವುದು ಸಹಜ. ಆದರೆ, ನನ್ನ ವೈಯಕ್ತಿಕ ನಂಬಿಕೆಗಳು ನನಗಷ್ಟೇ ಸಂಬಂಧಿಸಿದ್ದು. ನಾನು ʼಅಜ್ಮೇರ್‌ ಶರೀಫ್‌ʼಗೆ ಹೋಗುವಷ್ಟೇ ಭಕ್ತಿಯಿಂದ ʼಬಾಂಗ್ಲಾ ಸಾಹೀಬ್‌ʼ ಮತ್ತು ಮಹಾಕಾಳ ದೇವಸ್ಥಾನಕ್ಕೂ ಹೋಗುತ್ತೇನೆ. ಮುಂದೆಯೂ ಇದೇ ರೀತಿ ದೇವಸ್ಥಾನಕ್ಕೆ ಹೋಗುತ್ತಲಿರುತ್ತೇನೆ. ನನ್ನ ನಡೆಯ ಬಗ್ಗೆ ಯಾವುದೇ ರೀತಿಯ ಟೀಕೆಗಳು ಬಂದರೂ ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದಿದ್ದಾರೆ

ಇದೇ ವೇಳೆ ಸಾರಾ ಅವರನ್ನು ಬೆಂಬಲಿಸಿ ಮಾತನಾಡಿರುವ ವಿಕ್ಕಿ ಕೌಶಲ್‌, “ಮಾಧ್ಯಮದವರು ಟೀಕೆಗೆ ಒಳಗಾದ ವ್ಯಕ್ತಿಗಳನ್ನೇ ಪ್ರಶ್ನಿಸುವುದು ಸರಿಯಲ್ಲ. ಉದಾಹರಣೆಗೆ ನಾನು ನನ್ನ ಪಾಡಿಗೆ ಹಾದಿಯಲ್ಲಿ ಹೋಗುತ್ತಿದ್ದಾಗ ಯಾರಾದರೂ ನನ್ನನ್ನು ನಿಂದಿಸಿದರೆ, ನೀವು ನಿಂದಿಸಿದವರನ್ನು ಪ್ರಶ್ನೆ ಮಾಡಬೇಕೇ ಹೊರತು ನಿಂದನೆಗೆ ಒಳಗಾದವರನ್ನಲ್ಲ. ಈ ಶೈಲಿ ಬದಲಾಗಬೇಕು” ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...