ನನ್ನ ಮಗ ಕದ್ದು ಮದುವೆಯಾಗಿಲ್ಲ : ಹಿರಿಯ ನಟಿ ಲೀಲಾವತಿ

Date:

ತಿರುಪತಿ ಸರಳವಾಗಿ ಮಗನ ಮದುವೆ ಮಾಡಿದ್ದೇನೆ ಎಂದ ಲೀಲಾವತಿ

ನನ್ನ ಮದುವೆಯಿಂದ ನಿಮಗೇನು ಹಿಂಸೆಯಾಗಿದೆ ಎಂದು ವಿನೋದ್‌ ರಾಜ್‌ ಪ್ರಶ್ನೆ

ಹಿರಿಯ ನಟಿ ಲೀಲಾವತಿ ರಹಸ್ಯವಾಗಿ ಮಗನ ಮದುವೆ ಮಾಡಿದ್ದಾರೆ ಎಂದು ನಿರ್ದೇಶಕ, ರಾಜ್‌ ಕುಟುಂಬದ ಆಪ್ತ ಪ್ರಕಾಶ್‌ ರಾಜ್‌ ಮೇಹು ವಿವಾದ ಸೃಷ್ಟಿಸಲು ಯತ್ನಿಸಿದ್ದರು. ವಿನೋದ್‌ ರಾಜ್‌, ತಮ್ಮ ಹೆಂಡತಿ ಮತ್ತು ಮಗನ ಜೊತೆಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಈ ಬಗ್ಗೆ ಲೀಲಾವತಿ ಅವರು ಪ್ರತಿಕ್ರಿಯೆ ನೀಡಿದ್ದು, ನನ್ನ ಮಗನಿಗೆ ಮದುವೆ ಮಾಡಿದ್ದೀನಿ. ಆದರೆ, ಆತನೇನು ಕದ್ದು ಮದುವೆಯಾಗಿಲ್ಲ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುಟ್ಯೂಬ್‌ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಲೀಲಾವತಿ, “ನನ್ನ ಮಗನಿಗೆ ಮದುವೆ ಮಾಡಿದ್ದೇನೆ. ಆತನ ಹೆಂಡತಿ ಮತ್ತು ಮಗ ಇಬ್ಬರೂ ಚೆನ್ನೈನಲ್ಲಿ ವಾಸವಾಗಿದ್ದಾರೆ. ಇದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ಆತನೇನು ಕದ್ದು ಮದುವೆಯಾಗಿಲ್ಲ. ಮದುವೆಗೆ 7 ಜನ ಕನ್ನಡಿಗರು ಬಂದಿದ್ದರು. ಬೇರೆಯರಂತೆ ಅರಮನೆಯಲ್ಲೊ, ದೊಡ್ಡ ಕಲ್ಯಾಣ ಮಂಟಪದಲ್ಲೊ ಮದುವೆ ಮಾಡುವಷ್ಟು ದುಡ್ಡು ನನ್ನ ಬಳಿ ಇರಲಿಲ್ಲ. ಹಾಗಾಗಿ ತಿರುಪತಿಯಲ್ಲಿ ಸರಳವಾಗಿ ಮದುವೆ ಮಾಡಿದ್ದೇನೆ. 650 ಚಿತ್ರಗಳಲ್ಲಿ ನಟಿಸಿದ ನಾನು ಮಗನ ಮದುವೆಯನ್ನು ವಿಜೃಂಭಣೆಯಿಂದ ಮಾಡುವಷ್ಟು ಶಕ್ತಳಾಗಿರಲಿಲ್ಲ ಎಂಬ ಸಂಕೋಚ ಈಗಲೂ ಇದೆ. ಜಮೀನು ನೋಡಿ ನಾನು ಶ್ರೀಮಂತಳು ಎಂಬಂತೆ ಮಾತನಾಡುತ್ತಾರೆ. ಆದರೆ, ನಾನು ಬಡವಿ. ಆವತ್ತಿನ ಕಾಲಕ್ಕೆ 30 ಸಾವಿರ ರೂಪಾಯಿಗೆ ಜಮೀನನ್ನು ಖರೀದಿಸಿದ್ದೆ. ಯಾರು ಏನೇ ಹೇಳಿದರೂ ನನ್ನ ಆತ್ಮಸಾಕ್ಷಿಗೆ ನಾನು ಸರಿಯಾಗಿಯೇ ಇದ್ದೇನೆ. ಯಾವ ತಾಯಿಯಾದರೂ ಮಕ್ಕಳ ಭವಿಷ್ಯ ಚೆನ್ನಾಗಿರಲಿ ಎಂದೇ ಬಯಸುತ್ತಾಳೆ. ನಮ್ಮ ಅಂತರಂಗದ ಸುದ್ದಿಯನ್ನೆಲ್ಲ ಯಾಕೆ ಕೇಳುತ್ತಾರೆ ಎಂದು” ಬೇಸರ ವ್ಯಕ್ತ ಪಡಿಸಿದ್ದಾರೆ.

ಇದೇ ಸಂದರ್ಶನದಲ್ಲಿ ವಿನೋದ್‌ ರಾಜ್‌ ಕೂಡ ಮಾತನಾಡಿದ್ದು, “ನಾನು ಮದುವೆಯಾಗಿದ್ದರಿಂದ ಭಯೋತ್ಪಾದನೆ ಆಗಿದೆಯೇ? ನಿಧಿಯನ್ನು ಕಂಡು ಹಿಡಿದ ಹಾಗೆ ಮಾತನಾಡುತ್ತಿದ್ದಾರೆ. ನನ್ನ ಮದುವೆಯಿಂದ ನಿಮಗೇನು ಹಿಂಸೆಯಾಗಿದೆ? ಈ ವಿಚಾರವನ್ನು ಬಹಿರಂಗಪಡಿಸಿ ಏನು ಮಾಡಲು ಹೊರಟಿದ್ದಾರೆ? ಅವರಿಗೆ ಪ್ರಜ್ಞೆ ಇದೆಯಾ? ಯಾವ ಕಲಾವಿದರಿಗೂ ಈ ರೀತಿ ತೊಂದರೆ ಕೊಡಬಾರದು. ನಮ್ಮ ತಂಟೆಗೆ ಬಂದವರನ್ನು ಕನ್ನಡಿಗರು ಸುಮ್ಮನೆ ಬಿಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡಿದ ಸ್ಯಾಂಡಲ್‌ವುಡ್‌ ತಾರೆಯರು

ಇತ್ತೀಚೆಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ವಿನೋದ್‌ ರಾಜ್‌ ತಮ್ಮ ಹೆಂಡತಿ, ಮಗ ಮತ್ತು ತಾಯಿಯ ಜೊತೆಗಿರುವ ಫೋಟೋವನ್ನು ಹಂಚಿಕೊಂಡು, “ಲೀಲಾವತಿಯವರ ಗಂಡ ಮಹಾಲಿಂಗ ಭಾಗವತರ್. ಲೀಲಾವತಿಯವರ ಚನ್ನೈ ಆಸ್ತಿಯ ಪತ್ರ ತಮಿಳು ಭಾಷೆಯಲ್ಲಿದೆ. ಅದರಲ್ಲಿ ಮಹಾಲಿಂಗ ಭಾಗವತರ್ ಅವರ ಪತ್ನಿ ಲೀಲಾವತಿ ಅಮ್ಮಾಳ್ (ಲೀಲಾವತಿಯಮ್ಮ) ಅನ್ನುವುದು ಸ್ಪಷ್ಟವಾಗಿದೆ. ವಿನೋದ್ ರಾಜ್ ಮದುವೆಯನ್ನೇ ಆಗದೆ ತಾಯಿಯ ಸೇವೆಯಲ್ಲಿ ನಿರತರಾಗಿದ್ದಾರೆ ಅನ್ನುವವರಿಗೆ ಮಾಹಿತಿ, ವಿನೋದ್ ರಾಜ್ ಹೆಂಡತಿ ಮತ್ತು ಮಗ ಚೆನ್ನೈನಲ್ಲಿದ್ದಾರೆ. ಮಗ ಇಂಜಿನಿಯರಿಂಗ್ ಓದುತ್ತಿದ್ದಾನೆ” ಎಂದು ಬರೆದುಕೊಂಡಿದ್ದರು.

ಜೊತೆಗೆ ಚೆನ್ನೈನಲ್ಲಿರುವ ಲೀಲಾವತಿ ಅವರ ಆಸ್ತಿಯ ದಾಖಲೆ ಪತ್ರ ಹಾಗೂ ವಿನೋದ್‌ ರಾಜ್‌ ಅವರ ಮಗನ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯ ಫೋಟೋಗಳನ್ನು ಹಂಚಿಕೊಂಡಿದ್ದರು. ವಿನೋದ್‌ ರಾಜ್‌ ಕುಟುಂಬದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಲೇ ಮಾಧ್ಯಮಗಳ ಎದುರು ಮಾತನಾಡಿದ್ದ ಪ್ರಕಾಶ್‌ ರಾಜ್‌ ಮೇಹು, “ಇಷ್ಟು ದಿನಗಳ ಕಾಲ ರಾಜ್‌ಕುಮಾರ್‌ ಮೋಸ ಮಾಡಿದ್ದಾರೆ ಅಂತಲೇ ಲೀಲಾವತಿ ಮತ್ತು ವಿನೋದ್‌ ರಾಜ್‌ ಬಿಂಬಿಸುತ್ತಾ ಬಂದಿದ್ದರು. ಜನ ಕೂಡ ವಿನೋದ್‌ ರಾಜ್‌, ಅಣ್ಣಾವ್ರ ಮಗ ಅಂತಲೇ ಅಂದುಕೊಂಡಿದ್ದರು. ಈ ಗೊಂದಲವನ್ನು ಪರಿಹರಿಸುವ ಪ್ರಯತ್ನ ಮಾಡಿದ್ದೇನೆ. ವಿನೋದ್‌ ರಾಜ್‌ ಮನೆ ಕೆಲಸದಾಕೆಯನ್ನು ಮದುವೆಯಾದರು ಎಂಬ ಕಾರಣಕ್ಕೆ ಅವರ ವೈವಾಹಿಕ ಜೀವನದ ಕುರಿತು ನಿಗೂಢತೆ ಕಾಪಾಡಿಕೊಳ್ಳಲಾಯಿತು ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ” ಎಂದಿದ್ದರು.

ತಮ್ಮ ಪಾಡಿಗೆ ಬದುಕುತ್ತಿರುವ ಲೀಲಾವತಿ ಮತ್ತು ವಿನೋದ್‌ ರಾಜ್‌ ಅವರ ವೈಯಕ್ತಿಕ ವಿಚಾರಗಳನ್ನು ಕೆದಕಿದ ಪ್ರಕಾಶ್‌ ರಾಜ್‌ ಮೇಹು ಅವರಿಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದು, ಇಳಿವಯಸ್ಸಿನಲ್ಲಿ ಲೀಲಾವತಿಯರನ್ನು ಅವರ ಪಾಡಿಗೆ ಬದುಕಲು ಬಿಡಿ ಎನ್ನುತ್ತಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...