ತೆಲುಗಿನ ಹಿರಿಯ ನಿರ್ದೇಶಕ ಕೆ. ವಾಸು ಇನ್ನಿಲ್ಲ

Date:

ಮೆಗಾಸ್ಟಾರ್‌ ಚಿರಂಜೀವಿ ಚೊಚ್ಚಲ ಚಿತ್ರ ನಿರ್ದೇಶಿಸಿದ್ದ ವಾಸು

ಜಗ್ಗೇಶ್‌ ನಟನೆಯ ʼಸರ್ವರ್‌ ಸೋಮಣ್ಣʼ ಚಿತ್ರಕ್ಕೆ ಆ್ಯಕ್ಷನ್ ಕಟ್‌ ಹೇಳಿದ್ದ ನಿರ್ದೇಶಕ

ತೆಲುಗಿನ ಹಿರಿಯ ನಿರ್ದೇಶಕ ಕೆ. ವಾಸು ಹೈದರಾಬಾದ್‌ನ ʼಕೀಮ್ಸ್‌ʼ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ವಾಸು ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಕುಟುಂಬಸ್ಥರು ಕೀಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

60 ವರ್ಷದ ವಾಸು ಕಳೆದ ಕೆಲ ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ದೇಶಕನ ಅಗಲಿಕೆಗೆ ಖ್ಯಾತ ನಟರಾದ ಚಿರಂಜೀವಿ, ಪವನ್‌ ಕಲ್ಯಾಣ್‌ ಸೇರಿದಂತೆ ತೆಲುಗು ಚಿತ್ರರಂಗದ ಹಲವು ಕಲಾವಿದರು ಕಂಬನಿ ಮಿಡಿದಿದ್ದಾರೆ.

ಮೆಗಾಸ್ಟಾರ್‌ ಚಿರಂಜೀವಿ ಟ್ವೀಟ್‌ ಮಾಡಿ, “ಹಿರಿಯ ನಿರ್ದೇಶಕ ಕೆ. ವಾಸು ಅವರು ಇನ್ನಿಲ್ಲ ಎಂಬ ಸುದ್ದಿ ತುಂಬಾ ನೋವುಂಟು ಮಾಡಿದೆ. ಸಿನಿ ಪಯಣದ ಆರಂಭದ ದಿನಗಳಲ್ಲಿ ನಾನು ನಟಿಸಿದ್ದ ʼಪ್ರಾಣಮ್‌ ಖರೀದುʼ, ʼತೋಡು ದೊಂಗಲುʼ, ʼಅಲ್ಲುಳ್ಲು ವಸ್ತುನ್ನಾರುʼ, ʼಕೋತಲ ರಾಯುಡುʼ ಚಿತ್ರಗಳನ್ನು ನಿರ್ದೇಶಿಸಿದ್ದರು” ಎಂದು ವಾಸು ಅವರ ಜೊತೆಗಿನ ಒಡನಾಟವನ್ನು ಮೆಲುಕು ಹಾಕುವ ಮೂಲಕ ಸಂತಾಪ ಸೂಚಿಸಿದ್ದಾರೆ.

1978ರಲ್ಲಿ ತೆರೆಕಂಡಿದ್ದ ʼಪ್ರಾಣಮ್‌ ಖರೀದುʼ ಚಿತ್ರವನ್ನು ನಿರ್ದೇಶಿಸುವ ಮೂಲಕ ತೆಲುಗು ಚಿತ್ರರಂಗ ಪ್ರವೇಶಿಸಿದ್ದ ಕೆ. ವಾಸು, ಇದೇ ಚಿತ್ರದ ಮೂಲಕ ಚಿರಂಜೀವಿ ಅವರನ್ನು ಕೂಡ ಬಣ್ಣದ ಲೋಕಕ್ಕೆ ಪರಿಚಯಿಸಿದ್ದರು. ʼಶ್ರೀ ಶಿರಡಿ ಸಾಯಿಬಾಬಾ ಮಹಾತ್ಯಂʼ, ʼಆರಿನಿ ಮಂಟಲುʼ, ʼಇಂಟ್ಲೋ ಶ್ರೀಮತಿ ವೀದಿಲೋ ಕುಮಾರಿʼ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ವಾಸು, 1993ರಲ್ಲಿ ಜಗ್ಗೇಶ್‌ ಮುಖ್ಯಭೂಮಿಕೆಯಲ್ಲಿ ಬಿಡುಗಡೆಯಾಗಿದ್ದ ಕನ್ನಡದ ʼಸರ್ವರ್‌ ಸೋಮಣ್ಣʼ ಚಿತ್ರಕ್ಕೂ ಆ್ಯಕ್ಷನ್ ಕಟ್‌ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...