ದರ್ಶನ್ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್: ರಮ್ಯಾ ಬೆಂಬಲಕ್ಕೆ ನಿಂತ ಶಿವ ರಾಜ್‌ಕುಮಾರ್

Date:

ತಮ್ಮ ವಿರುದ್ಧ ಅವಹೇಳನಕಾರಿ ಮತ್ತು ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವ, ಕಾಮೆಂಟ್‌ಗಳನ್ನು ಮಾಡುತ್ತಿರುವ ದರ್ಶನ್ ಫ್ಯಾನ್ಸ್‌ಗಳ ವಿರುದ್ಧ ಈಗಾಗಲೇ ನಟಿ ರಮ್ಯಾ ದೂರು ನೀಡಿದ್ದಾರೆ. ಈ ಸಂಬಂಧ 43 ಜನರ ವಿರುದ್ಧ ಎಫ್‌ಐಆರ್ ಕೂಡಾ ದಾಖಲಾಗಿದೆ. ಇವೆಲ್ಲವುದರ ನಡುವೆ ನಟಿ ರಮ್ಯಾ ಅವರಿಗೆ ನಟ ಶಿವ ರಾಜ್‌ಕುಮಾರ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ರಮ್ಯಾ ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ ಅಂತ ಪೋಸ್ಟ್​ ಶೇರ್ ಮಾಡಿಕೊಂಡಿದ್ದರು. ಈ ಪೋಸ್ಟ್‌ ಬಳಿಕ ನಟಿ ವಿರುದ್ಧ ಡಿಬಾಸ್‌ ಫ್ಯಾನ್ಸ್‌ಗಳು ಅವಹೇಳನಕಾರಿಯಾಗಿ ಕಾಮೆಂಟ್‌ ಮಾಡಿದ್ದರು. ಈ ಬಗ್ಗೆ ಈಗಾಗಲೇ ಎಫ್‌ಐಆರ್ ಕೂಡಾ ದಾಖಲಾಗಿದೆ. ಕೆಲವರು ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ನಟಿ ರಮ್ಯಾ ಬಗ್ಗೆ ಅವಹೇಳನಕಾರಿ ಸಂದೇಶ: 43 ಮಂದಿ ವಿರುದ್ಧ ಎಫ್‌ಐಆರ್‌ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆಳವಣಿಗೆ ನಡುವೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಶಿವ ರಾಜ್‌ಕುಮಾರ್, “ನಿಮ್ಮ ನಿಲುವು ಸರಿಯಿದೆ ರಮ್ಯಾ ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ” ಎಂದು ಹೇಳಿದ್ದಾರೆ.

“ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಈ ರೀತಿ ಮಾತನಾಡುವುದು ಸರಿಯಲ್ಲ, ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ” ಎಂದು ನಟ ಪೋಸ್ಟ್ ಮಾಡಿದ್ದಾರೆ.

“ಸೋಶಿಯಲ್ ಮೀಡಿಯಾ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ-ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ” ಎಂದು ಶಿವ ರಾಜ್‌ಕುಮಾರ್ ಮತ್ತು ಪತ್ನಿ ಗೀತಾ ಶಿವ ರಾಜ್‌ಕುಮಾರ್ ಅವರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...