ಅನಾರೋಗ್ಯ | ಚಿಕಿತ್ಸೆಗೆ ತೆರಳುವ ಮುನ್ನ ತಿರುಪತಿಯಲ್ಲಿ ಮುಡಿ ಕೊಟ್ಟ ಶಿವ ರಾಜ್‌ಕುಮಾರ್

Date:

ನಟ ಶಿವ ರಾಜ್‌ಕುಮಾರ್‌ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅದಕ್ಕೂ ಮುನ್ನ, ತಮ್ಮ ಕುಟುಂಬ ಸಮೇತ ತಿರುಪತಿಗೆ ತೆರಳಿದ್ದ ಶಿವ ರಾಜ್‌ಕುಮಾರ್ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ.

ಇದೇ ತಿಂಗಳು (ಡಿಸೆಂಬರ್) 18ರಂದು ಚಿಕಿತ್ಸೆಗಾಗಿ ಶಿವರಾಜ್‌ ಕುಮಾರ್ ಅಮೆರಿಕಗೆ ತೆರಳಲಿದ್ದಾರೆ. ಹೀಗಾಗಿ, ಶನಿವಾರ ಶಿವ ರಾಜ್‌ಕುಮಾರ್ ತಮ್ಮ ಪತ್ನಿ ಗೀತಾ, ಮಗಳು ನಿವೇದಿತಾ ಹಾಗೂ ಆಪ್ತರೊಂದಿಗೆ ತಿರುಪತಿಗೆ ತೆರಳಿದ್ದರು. ಗೀತಾ ಅವರೂ ಕೂಡ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ.

ಈ ಹಿಂದೆಯೇ, ತಮ್ಮ ಅನಾರೋಗ್ಯದ ಬಗ್ಗೆ ಮಾತನಾಡಿರುವ ಶಿವ ರಾಜ್‌ಕುಮಾರ್, “ʻʻನನಗೆ ಅನಾರೋಗ್ಯ ಇರುವುದು ನಿಜ. ಟ್ರೀಟ್‌ಮೆಂಟ್‌ ನಡಿತಿದೆ. ಯಾರೂ ಆತಂಕ ಪಡಬೇಕಿಲ್ಲ. ಒಟ್ಟು 4 ಸೆಷನ್‌ ಮೂಲಕ ಟ್ರೀಟ್‌ಮೆಂಟ್‌ ನಡಿಯುತ್ತದೆ. ಆನಂತರ ಶಸ್ತ್ರಚಿಕಿತ್ಸೆ ನಡೆಯಲಿದೆ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವ ರಾಜ್​ಕುಮಾರ್ ಅವರು ಕೆಲವು ತಿಂಗಳು ನಟನೆಯಿಂದ ದೂರ ಇರಲಿದ್ದಾರೆ. ಚಿಕಿತ್ಸೆ ಪಡೆದು, ಸಂಪೂರ್ಣ ಚೇತರಿಕೆ ಕಂಡ ಬಳಿಕವೇ ಮತ್ತೆ ಸಿನಿಮಾ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...