ಅದ್ದೂರಿಯಾಗಿ ಸೆಟ್ಟೇರಿದ ʼಭೈರತಿ ರಣಗಲ್‌ʼ

Date:

ಚಿತ್ರೀಕರಣಕ್ಕೆ ಚಾಲನೆ ನೀಡಿದ ಗೀತಾ ಶಿವರಾಜ್‌ ಕುಮಾರ್‌

ಜೂನ್‌ ಎರಡನೇ ವಾರದಿಂದ ಶೂಟಿಂಗ್‌ ಆರಂಭ

ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ ಕುಮಾರ್‌ ಅಭಿನಯದ ಬಹುನಿರೀಕ್ಷಿತ ʼಭೈರತಿ ರಣಗಲ್‌ʼ ಸಿನಿಮಾ ಶುಕ್ರವಾರ ಅದ್ದೂರಿಯಾಗಿ ಸೆಟ್ಟೇರಿದೆ. ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಕ್ಲ್ಯಾಪ್‌ ಮಾಡುವ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಭೈರತಿ ರಣಗಲ್‌ʼ ಚಿತ್ರವನ್ನು ʼಮಫ್ತಿʼ ಖ್ಯಾತಿಯ ನರ್ತನ್‌ ನಿರ್ದೇಶಿಸುತ್ತಿದ್ದಾರೆ. 2017ರಲ್ಲಿ ತೆರೆಕಂಡಿದ್ದ ಶ್ರೀ ಮುರಳಿ ಮುಖ್ಯಭೂಮಿಕೆಯಲ್ಲಿ ತೆರೆಕಂಡಿದ್ದ ʼಮಫ್ತಿʼ ಚಿತ್ರದಲ್ಲಿ ಶಿವಣ್ಣ, ʼಭೈರತಿ ರಣಗಲ್‌ʼ ಪಾತ್ರದಲ್ಲಿ ನಟಿಸಿದ್ದರು. ಖಳನ ಪಾತ್ರವಾದರೂ ಶಿವಣ್ಣ ಅವರ ಭಿನ್ನ ಅವತಾರ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು. ಅಂದಿನಿಂದಲೂ ʼಭೈರತಿ ರಣಗಲ್‌ʼ ಹೆಸರಿನ ಸಿನಿಮಾ ಮಾಡುವಂತೆ ಶಿವಣ್ಣ ಮತ್ತು ನರ್ತನ್‌ ಇಬ್ಬರಿಗೂ ಅಭಿಮಾನಿಗಳು ಮನವಿ ಮಾಡುತ್ತಲೇ ಬಂದಿದ್ದರು. ಎಲ್ಲರ ಬಯಕೆಯಂತೆ ಕೊನೆಗೂ ಈ ಬಹುನಿರೀಕ್ಷಿತ ಸಿನಿಮಾದ ಮುಹೂರ್ತ ನೆರವೇರಿದೆ.

ಮುಹೂರ್ತದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ನರ್ತನ್‌, “ಇವತ್ತು ನಮ್ಮ ಸಿನಿಮಾದ ಮುಹೂರ್ತ ನೆರವೇರಿದೆ. ಸದ್ಯ ಶಿವಣ್ಣ ಘೋಸ್ಟ್‌ ಸಿನಿಮಾದ ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಜೂನ್‌ 10ರಿಂದ ʼಭೈರತಿ ರಣಗಲ್‌ʼ ಶೂಟಿಂಗ್‌ ಪ್ರಾರಂಭವಾಗಲಿದೆ” ಎಂದಿದ್ದಾರೆ.

ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನರ್ತನ್‌, ” ʼಭೈರತಿ ರಣಗಲ್‌ʼ ʼಪ್ರೀಕ್ವೆಲ್‌ʼ ಮತ್ತು ʼಸೀಕ್ವೆಲ್‌ʼ ಮಾದರಿಯಲ್ಲಿ ತೆರೆಗೆ ಬರಲಿದೆ. ʼಮಫ್ತಿʼ ಸಿನಿಮಾದಲ್ಲಿ ʼಭೈರತಿ ರಣಗಲ್‌ʼ ಪಾತ್ರದ ಪರಿಚಯವಾಗಿತ್ತು. ಈಗ ʼಭೈರತಿ ರಣಗಲ್‌ʼ ʼಪ್ರೀಕ್ವೆಲ್‌ʼನಲ್ಲಿ ಆತನ ಹಿನ್ನೆಲೆ ʼಸೀಕ್ವೆಲ್‌ʼನಲ್ಲಿ ಬಂಧನದ ನಂತರದ ಕಥೆಯನ್ನು ನಿರೀಕ್ಷಿಸಬಹುದು” ಎನ್ನುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಭಿಮಾನಿಯ ಕೊನೆ ಆಸೆ ಈಡೇರಿಸಿದ ಹೃದಯವಂತ ಶಾರುಖ್‌ ಖಾನ್‌

ʼವೇದʼ ಚಿತ್ರಕ್ಕೆ ಬಂಡವಾಳ ಹೂಡಿ ಯಶಸ್ವಿ ನಿರ್ಮಾಪಕಿ ಎನ್ನಿಸಿಕೊಂಡಿರುವ ಗೀತಾ ಶಿವರಾಜ್‌ ಕುಮಾರ್‌, ತಮ್ಮ ʼಗೀತಾ ಪಿಕ್ಚರ್ಸ್‌ʼ ಬ್ಯಾನರ್‌ನಡಿಯಲ್ಲಿ ʼಭೈರತಿ ರಣಗಲ್‌ʼ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೆಜಿಎಫ್‌ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರ್‌ ಈ ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...