ಒಂದು ತಿಂಗಳ ವಿರಾಮದ ಬಳಿಕ ಚಿತ್ರೀಕರಣದಲ್ಲಿ ಭಾಗಿ: ನಟ ಶಿವಣ್ಣ

Date:

ಒಂದು ತಿಂಗಳ ವಿರಾಮದ ಬಳಿಕ ಸಂಪೂರ್ಣ ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್‌ಕುಮಾರ್ ಹೇಳಿದರು.

ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿ ಬೆಂಗಳೂರಿಗೆ ಆಗಮಿಸಿದ ಬಳಿಕ ತಮ್ಮ ನಿವಾಸದ ಬಳಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಎದುರಿಸಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು, ಹೋಗಿ ಬಂದೆ. ಹೋಗಬೇಕಿದ್ದರೆ ಸ್ವಲ್ಪ ಭಯ ಇತ್ತು. ಅಭಿಮಾನಿಗಳ ಆಶೀರ್ವಾದದಿಂದ ಹೋಗಿಬಂದೆ. ವಿಮಾನ ನಿಲ್ದಾಣದಿಂದ ಇಳಿದು ಆಸ್ಪತ್ರೆ ಮುಂದೆ ಹೋಗಬೇಕಿದ್ದಾಗಲೇ ಧೈರ್ಯ ಬಂತು. ಆಪರೇಷನ್ ಮುಗಿದ ಮೇಲೆ ಬಂದು ಹೇಳಿದ ಮೇಲೆ ಎಲ್ಲವೂ ಆಗಿದೆ ಅಂತ ಗೊತ್ತಾಯ್ತು ಎಂದರು.

ವಿಮಾನದಲ್ಲಿ 20 ಗಂಟೆಯಾಯಿತು. ಆರು ಗಂಟೆ ಕಾಲ ಸರ್ಜರಿ ನಡೆಯಿತು. ಎರಡನೇ ದಿನದಿಂದಲೇ ನಡೆಯಲು ಶುರು ಮಾಡಿದೆ. ಆ ಶಕ್ತಿ ಎಲ್ಲಿಂದ ಬಂತೋ ಗೊತ್ತಿಲ್ಲ. ಅಭಿಮಾನಿಗಳಷ್ಟೇ ಅಲ್ಲ, ಇಂಡಸ್ಟ್ರಿ ಅವರು ಧೈರ್ಯ ತುಂಬಿದರು. ಗೀತಾ ಅವರ ಬಗ್ಗೆ ಮಾತಾಡಲ್ಲ. ಗೀತಾ ಹೆಂಡತಿನೂ ಹೌದು, ತಾಯಿನೂ ಹೌದು. ಈ ಬಾರಿ ಮಗಳು ನಿವೇದಿತಾ ತಾಯಿಗಿಂತ ಹೆಚ್ಚು ನೋಡಿಕೊಂಡಿದ್ದಾಳೆ. ನಿವೇದಿತಾ ಗೆಳತಿ ಅನು ಒಂದು ತಿಂಗಳು ನಮ್ಮ ಜೊತೆ ಇದ್ದರು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಭಾರತೀಯ ಕಿರುಚಿತ್ರ ‘ಅನುಜಾ’ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನ

ಇಂಡಸ್ಟ್ರಿ ಆರೈಕೆ, ಜನರ ಆರೈಕೆ, ಮಾಧ್ಯಮ ಆರೈಕೆ ಇವತ್ತು ಒಳ್ಳೆಯದಾಗಿದೆ. ಗಂಡಸರಿಗೆ ತಾಯಂದಿರು ತುಂಬಾ ಇರುತ್ತಾರೆ. ಅಮ್ಮ, ಹೆಂಡತಿ ಮಗಳು ಹೀಗೆ. ಈ ಬಾರಿ ನಿವೇದಿತಾ ಕೂಡ ನಮ್ಮ ಜೊತೆ ಇದ್ದಳು. ವಿಶ್ರಾಂತಿ ಹೇಳಿದ್ದಾರೆ. ನಾರ್ಮಲ್ ಕೆಲಸ ಮಾಡುತ್ತೇನೆ. ಮಾರ್ಚ್ ಬಳಿಕ ಚಿತ್ರೀಕರಣ ಶುರು ಮಾಡುತ್ತೇನೆ ಎಂದು ಹೇಳಿದರು.

ಎರಡು ಮೂರು ದಿನ ದ್ರವ ಆಹಾರದಲ್ಲಿ ಇದ್ದೆ. ಎರಡು ದಿನ, ಮೂರು ದಿನದ ಬಳಿಕ ನಿಧಾನವಾಗಿ ನಡೆಯಲು ಶುರು ಮಾಡಿದೆ. ಜೀವನವೇ ಒಂದು ಪಾಠ, ಜೀವನದಲ್ಲಿ ಇದೆಲ್ಲ ತಾನಾಗಿ ಬರುತ್ತೆ. ನಾನು ಎಲ್ಲವನ್ನೂ ಧೈರ್ಯವಾಗಿ ಮಾಡಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...