ಅನಾರೋಗ್ಯದಿಂದ ವೇದಿಕೆಯಲ್ಲೇ ಕುಸಿದು ಬಿದ್ದ ನಟ ವಿಶಾಲ್

Date:

ತಮಿಳು ನಟ ವಿಶಾಲ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಅನಾರೋಗ್ಯದಿಂದಾಗಿ ವೇದಿಕೆಯಲ್ಲೆ ಕುಸಿದು ಬಿದ್ದ ಘಟನೆ ತಮಿಳುನಾಡಿನ ವಿಲ್ಲುಪುರಂನಲ್ಲಿ ನಡೆದಿದೆ.

ಮಿಸ್ ಕೂವಾಗಮ್‌ನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ವಿಶಾಲ್‌ ತೆರಳಿದ್ದರು. ವೇದಿಕೆಯಲ್ಲಿ ಕುಳಿತುಕೊಂಡಿದ್ದ ಸಂದರ್ಭದಲ್ಲಿ ಹಠಾತ್ತನೆ ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದಾರೆ.

ತಕ್ಷಣ ಸ್ಥಳದಲ್ಲಿದ್ದ ಮಾಜಿ ಸಚಿವ ಕೆ. ಪೊನ್ಮುಡಿ ಹಾಗೂ ಕಾರ್ಯಕ್ರಮ ಆಯೋಜಕರು, ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಯಾವುದೇ ಅಧಿಕೃತ ವೈದ್ಯಕೀಯ ಹೇಳಿಕೆ ಬಿಡುಗಡೆಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಅವರ ಅನಾರೋಗ್ಯದ ಬಗ್ಗೆ ಹಲವಾರು ವರದಿಗಳು ಬಂದಿವೆ. ಇದರ ಬೆನ್ನಲ್ಲೇ ಅಭಿಮಾನಿಗಳು ಆರೋಗ್ಯಕ್ಕೆ ಆದ್ಯತೆ ನೀಡಬೇಕೆಂದು ಅವರನ್ನು ಒತ್ತಾಯಿಸುತ್ತಿದ್ದಾರೆ. ಇದೀಗ ಈ ಘಟನೆಯಿಂದಾಗಿ ವಿಶಾಲ್ ಆರೋಗ್ಯದ ಬಗ್ಗೆ ಮತ್ತಷ್ಟು ವದಂತಿಗಳು ಶುರುವಾಗಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಶಿಮ್ಲಾ ಒಪ್ಪಂದದತ್ತ ಕಣ್ಣು ಹಾಯಿಸಬೇಕಿದೆ ಭಾರತ-ಪಾಕ್

ವಿಶಾಲ್ ಅವರ ಮ್ಯಾನೇಜರ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಆಹಾರ ಸೇವಿಸದ ಕಾರಣ ಅವರ ಆರೋಗ್ಯದಲ್ಲಿ ಏರುಪೇರಾಗಿರಬಹುದು ಎಂದಿದ್ದಾರೆ. ಇನ್ನೂ ಈ ವರ್ಷ ಜನವರಿಯಲ್ಲಿ ಜ್ವರದಿಂದ ಬಳಲಿ ಚೇತರಿಸಿಕೊಂಡಿದ್ದರು.

ಜನವರಿಯಲ್ಲಿ ‘ಮದಗಜರಾಜ’ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾಗ, ಅವರ ಮಾತು ತೊದಲುತ್ತಿತ್ತು. ಅಲ್ಲದೇ ಕೈ ಸಹ ನಡುಗುತ್ತಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...