ಒಡಿಶಾ ರೈಲು ದುರಂತ : ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಬೇಡಿಕೆ ಇಟ್ಟ ಸೋನು ಸೂದ್‌

Date:

ಒಡಿಶಾದ ಬಾಲಾಸೋರ್‌ನಲ್ಲಿ ಶುಕ್ರವಾರ ರಾತ್ರಿ ನಡೆದ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳು ಮತ್ತು ಗಾಯಗೊಂಡಿರುವವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಘೋಷಿಸಿವೆ. ಆದರೆ, ಈ ತಾತ್ಕಾಲಿಕ ಪರಿಹಾರದಿಂದ ಬರುವ ಹಣ ಮೂರ್ನಾಲ್ಕು ತಿಂಗಳಿಗೆ ಖಾಲಿಯಾಗುತ್ತದೆ. ಸಂತ್ರಸ್ತ ಕುಟುಂಬಗಳು ಕೆಲವೇ ದಿನಗಳಲ್ಲಿ ಮತ್ತೆ ಅಸಹಾಯಕ ಸ್ಥಿತಿಯನ್ನು ತಲುಪುತ್ತವೆ. ಹೀಗಾಗಿ ಶಾಶ್ವತ ಪರಿಹಾರ ನೀಡುವ ಬಗ್ಗೆ ಸರ್ಕಾರಗಳು ಚಿಂತನೆ ನಡೆಸಬೇಕು ಎಂದು ನಟ, ಸಮಾಜ ಸೇವಕ ಸೋನು ಸೂದ್‌ ಅಭಿಪ್ರಾಯ ಪಟ್ಟಿದ್ದಾರೆ.

ರೈಲು ದುರಂತದ ಕುರಿತು ತಾವು ಮಾತನಾಡಿರುವ ಮೂರು ನಿಮಿಷಗಳ ವಿಡಿಯೋವನ್ನು ಸೋನು ಸೂದ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ಒಡಿಶಾದಲ್ಲಿ ಸಂಭವಿಸಿರುವ ರೈಲು ಅಪಘಾದಿಂದಾಗಿ ಇಡೀ ದೇಶದ ತುಂಬಾ ದುಖಃದ ಛಾಯೆ ಆವರಿಸಿದೆ. ಆದರೆ, ಯಾರು ಕೂಡ ಅಪಘಾತದಲ್ಲಿ ಮೃತಪಟ್ಟ ಅಥವಾ ಗಾಯಗೊಂಡ ವ್ಯಕ್ತಿಗಳು ಮತ್ತವರ ಕುಟುಂಬದವರ ಬಗ್ಗೆ ಯೋಚಿಸುತ್ತಿಲ್ಲ. ಎಲ್ಲ ರಾಜಕೀಯ ಪಕ್ಷಗಳು ಈ ಘಟನೆಯನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳಲು ಯತ್ನಿಸುತ್ತಿವೆ. ನಾವುಗಳು ಟ್ವೀಟ್‌ ಮಾಡಿ ದುಖಃ ವ್ಯಕ್ತಪಡಿಸಿ, ನಮ್ಮ ವೈಯಕ್ತಿಕ ಬದುಕಿನಲ್ಲಿ ಬ್ಯುಸಿಯಾಗಿ ಬಿಡುತ್ತೇವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಅಪಘಾತದಲ್ಲಿ ದುಡಿಮೆ ಮಾಡುವ ಸಲುವಾಗಿ ಚೆನ್ನೈಗೆ ಹೊರಟಿದ್ದ ಕೆಲ ಬಿಹಾರದ ಕೂಲಿ ಕಾರ್ಮಿಕರು, ಕೆಲ ಕುಟುಂಬಗಳು ಹೀಗೆ ಹಲವರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ಮತ್ತು ಗಾಯಗೊಂಡವರಿಗೆ ಪರಿಹಾರ ಸಿಗತ್ತದೆ. ಆ ಪರಿಹಾರ ಮೂರ್ನಾಲ್ಕು ತಿಂಗಳುಗಳಿಗೆ ಖಾಲಿಯಾಗುತ್ತದೆ. ಮನೆಗೆ ಆಧಾರವಾಗಿದ್ದ ವ್ಯಕ್ತಿ ಶಾಶ್ವತವಾಗಿ ಗಾಯಗೊಂಡು ಹಾಸಿಗೆ ಹಿಡಿದರೆ ಅಂತಹ ಕುಟುಂಬಗಳು ಯಾವತ್ತಿಗೂ ಸುಧಾರಿಸಲು ಸಾಧ್ಯವೇ ಇಲ್ಲ. ಅಂತಹ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ಸಾಕಾಗುವುದಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಾಶ್ವತ ಪರಿಹಾರ ನೀತಿಗಳನ್ನು ರೂಪಿಸಬೇಕು. ಈ ರೀತಿಯ ದುರಂತಗಳಿಗೆ ಬಲಿಯಾದ ವ್ಯಕ್ತಿ ಅಥವಾ ಕುಟುಂಬಗಳಿಗೆ ನೆರವಾಗಲು ಪಿಂಚಣಿಯ ಮಾದರಿಯಲ್ಲಿ ಮಾಸಿಕ ಪರಿಹಾರವನ್ನು ನೀಡುವಂತಾಗಬೇಕು” ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಕೀಯ ಪಕ್ಷದವರು ಒಬ್ಬರನ್ನೊಬರು ದೂಷಿಸುವುದನ್ನು ಬಿಟ್ಟು ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸಿ ಸುಮ್ಮನಾದರೆ ಸಾಲದು, ದುರಂತಕ್ಕೀಡಾದ ಎಲ್ಲ ಕುಟುಂಬಗಳಿಗೆ ನೆರವಾಗಲು ಜನರು ಒಟ್ಟಾಗಿ ಪರಿಹಾರ ನಿಧಿಯನ್ನು ಸಂಗ್ರಹಿಸೋಣ” ಎಂದು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...