ಒಡಿಶಾ ರೈಲು ದುರಂತ | ಸಂತ್ರಸ್ತರ ನೆರವಿಗೆ ಸಹಾಯವಾಣಿ ತೆರೆದ ಸೋನು ಸೂದ್‌

Date:

ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲು ಮುಂದಾದ ಸ್ಟಾರ್‌ ನಟ

ಸೋನು ಸೂದ್‌ ಸಾಮಾಜಿಕ ಕಳಕಳಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಬಾಲಿವುಡ್‌ನ ಖ್ಯಾತ ನಟ ಸೋನು ಸೂದ್‌, ಒಡಶಾ ರೈಲು ದುರಂತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡ ವ್ಯಕ್ತಿಗಳ ಕುಟುಂಬಗಳಿಗೆ ನೆರವಾಗಲು ಮುಂದಾಗಿದ್ದಾರೆ. ರೈಲು ದುರಂತ ಸಂಭವಿಸಿದ ಬಳಿಕ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದ ಸೋನು ಸೂದ್‌, ಸಂತ್ರಸ್ತ ಕುಟುಂಬಗಳಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು. ಕೊಟ್ಟ ಮಾತಿನಂತೆ ನಡೆದುಕೊಂಡಿರುವ ನಟ, ಇದೀಗ ಸಂತ್ರಸ್ತರ ಕುಟುಂಬಗಳಿಗೆ ನೆರವಾಗುವ ಸಲುವಾಗಿ ಸಹಾಯವಾಣಿಯನ್ನು ಪ್ರಾರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸೂನು ಸೂದ್‌, “ಒಡಿಶಾ ರೈಲು ದುರಂತದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ನೆರವಾಗಲು ನಮ್ಮ ʼಸೂದ್‌ ಚಾರಿಟಿ ಟ್ರಸ್ಟ್‌ʼ ವತಿಯಿಂದ ಸಹಾಯವಾಣಿಯನ್ನು ಆರಂಭಿಸಿದ್ದೇವೆ. ಅಪಘಾತದಲ್ಲಿ ಮನೆಗೆ ಆಧಾರವಾಗಿದ್ದ ವ್ಯಕ್ತಿಗಳನ್ನು ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದ ಸದಸ್ಯರಿಗೆ ನೌಕರಿ ಕೊಡಿಸುವ ಅಥವಾ ಆ ಕುಟುಂಬ ಇರುವ ಊರಿನಲ್ಲೇ ಸಣ್ಣ ಪುಟ್ಟ ವ್ಯಾಪಾರ ನಡೆಸಲು ಹಣಕಾಸಿನ ಸಹಾಯ ಮಾಡುವ ಮತ್ತು ಸಂತ್ರಸ್ತ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಈ ಸಹಾಯವಾಣಿ ಆರಂಭಿಸಿದ್ದೇವೆ. ಸಂತ್ರಸ್ತ ಕುಟುಂಬಗಳ ಸದಸ್ಯರು ಅಥವಾ ಅಂತಹ ಕುಟುಂಬಗಳ ಬಗ್ಗೆ ತಿಳಿದವರು ತಮ್ಮ ವಿವರಗಳನ್ನು ಸಂದೇಶದ ಮೂಲಕ ಸಹಾಯವಾಣಿಗೆ ರವಾನಿಸಬೇಕು” ಎಂದಿದ್ದಾರೆ.

ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟ ಅಥವಾ ಗಂಭೀರವಾಗಿ ಗಾಯಗೊಂಡವರ ಕುಟುಂಬ ಸದಸ್ಯರು ʼ+91 9967567520ʼ ಈ ಸಹಾಯವಾಣಿಗೆ ಸಂದೇಶ ಕಳುಹಿಸುವ ಮೂಲಕ ಅಗತ್ಯ ನೆರವುಗಳನ್ನು ಪಡೆಯಬಹುದಾಗಿದೆ. ಈ ಸಹಾಯವಾಣಿ ಕೇವಲ ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ ನೆರವಾಗಲು ಮಾತ್ರ ಕಾರ್ಯ ನಿರ್ವಹಿಸಲಿದೆ.

ಈ ಸುದ್ದಿ ಓದಿದ್ದೀರಾ? ರೈಲು ದುರಂತಕ್ಕೆ ಸರ್ಕಾರ ಹೊಣೆಯಲ್ಲವೇ? ನಟ ಕಿಶೋರ್‌ ಪ್ರಶ್ನೆ

ಘಟನೆಯ ಬಳಿಕ ಸಂತಾಪ ಸೂಚಿಸಿ ಮಾತನಾಡಿದ್ದ ಸೋನು ಸೂದ್‌, “ಈ ಅಪಘಾತದಲ್ಲಿ ದುಡಿಮೆ ಅರಸಿ ಚೆನ್ನೈಗೆ ಹೊರಟಿದ್ದ ಬಿಹಾರದ ಕೂಲಿ ಕಾರ್ಮಿಕರು, ಕೆಲ ಕುಟುಂಬಗಳು ಹೀಗೆ ಹಲವರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ಮತ್ತು ಗಾಯಗೊಂಡವರಿಗೆ ಪರಿಹಾರ ಸಿಗತ್ತದೆ. ಆ ಪರಿಹಾರ ಮೂರ್ನಾಲ್ಕು ತಿಂಗಳುಗಳಿಗೆ ಖಾಲಿಯಾಗುತ್ತದೆ. ಮನೆಗೆ ಆಧಾರವಾಗಿದ್ದ ವ್ಯಕ್ತಿ ಶಾಶ್ವತವಾಗಿ ಗಾಯಗೊಂಡು ಹಾಸಿಗೆ ಹಿಡಿದರೆ ಅಂತಹ ಕುಟುಂಬಗಳು ಯಾವತ್ತಿಗೂ ಸುಧಾರಿಸಲು ಸಾಧ್ಯವೇ ಇಲ್ಲ. ಅಂತಹ ಕುಟುಂಬಗಳಿಗೆ ತಾತ್ಕಾಲಿಕ ಪರಿಹಾರ ಸಾಕಾಗುವುದಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಾಶ್ವತ ಪರಿಹಾರ ನೀತಿಗಳನ್ನು ರೂಪಿಸಬೇಕು. ಈ ರೀತಿಯ ದುರಂತಗಳಿಗೆ ಬಲಿಯಾದ ವ್ಯಕ್ತಿ ಅಥವಾ ಕುಟುಂಬಗಳಿಗೆ ನೆರವಾಗಲು ಪಿಂಚಣಿಯ ಮಾದರಿಯಲ್ಲಿ ಮಾಸಿಕ ಪರಿಹಾರವನ್ನು ನೀಡುವಂತಾಗಬೇಕು” ಎಂದು ಆಗ್ರಹಿಸಿದ್ದರು.

ಒಡಿಶಾದ ಬಾಲಾಸೋರ್‌ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿದ್ದ ರೈಲು ಅಪಘಾತದಲ್ಲಿ 288 ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...